ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ಸುತಗುಂಡಾರ ಗ್ರಾಮ ಪಂಚಾಯತಿ ವ್ಯಾಪ್ತಿಯ ಡೊಮನಾಳ ಜೆಪಿ (ಸಿದ್ದಪನ ಅಡಿ) ಗ್ರಾಮದಲ್ಲಿ ನೀರಿನ ಟ್ಯಾಂಕ್ ಇದ್ದು, ಈ ಟ್ಯಾಂಕ್ ಗೆ ಸರಿಯಾದ ವ್ಯವಸ್ಥೆ ಇಲ್ಲವಾಗಿದೆ. ಪ್ರತಿದಿನವೂ ನೀರು ಅನಾವಶ್ಯಕವಾಗಿ ಗ್ರಾಮ ಪಂಚಾಯತಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಪೋಲಾಗುತ್ತಿದೆ. ಅಲ್ಲೇ ಹತ್ತಿರವಿರುವ ಒಬ್ಬರನ್ನು ಕೇಳಿದಾಗ ಈ ಟ್ಯಾಂಕ್ ಗೆ ನಳಗಳಿಲ್ಲದೆ ಎಷ್ಟೋ ವರ್ಷಗಳು ಕಳೆದಿವೆ ಎಂದು ತಿಳಿಸಿದರು. ಪ್ರತಿದಿನ ಗ್ರಾಮ ಪಂಚಾಯತಿ ಸಿಬ್ಬಂದಿ ನೋಡಿದರೂ ನೋಡದ ಹಾಗೆ ಇರುತ್ತಾರೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಗಮನಕ್ಕೆ ತಂದರೂ ಸಹ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅಲ್ಲಿಯ ಪ್ರಜ್ಞಾವಂತರು ತಿಳಿಸಿದ್ದಾರೆ.
ಈ ಟ್ಯಾಂಕ್ ನ ಎದುರುಗಡೆಗೆ ಶಾಲೆಯಿದೆ. ಆ ಶಾಲೆಯಲ್ಲಿ ಅದೇಷ್ಟೋ ಪುಟ್ಟ ಮಕ್ಕಳು ಅಭ್ಯಾಸ ಮಾಡುತ್ತಿದ್ದಾರೆ. ಆದರೆ ಅಲ್ಲೇ ಹತ್ತಿರವಿರುವ ನೀರು ಪೋಲಾಗುತ್ತಿದೆ ಹೊರತು ಆ ಪುಟ್ಟ ವಿದ್ಯಾರ್ಥಿಗಳಿಗೆ ಆ ನೀರು ಸಿಗುತ್ತಿಲ್ಲ. ಈ ಟ್ಯಾಂಕ್ ಸ್ವಚ್ಚಗೊಳಿಸಿ ನಳಗಳ ವ್ಯವಸ್ಥೆ ಮಾಡಿದರೆ ಎಲ್ಲಾ ವಿದ್ಯಾರ್ಥಿಗಳಿಗೆ ಬಹಳ ಅನುಕೂಲವಾಗುತ್ತದೆ ಎಂಬುದನ್ನು ಅರಿಯದ ಅಧಿಕಾರಿಗಳು ಇದು ನಿಜಕ್ಕೂ ಗ್ರಾಮ ಪಂಚಾಯತಿ ಅಧಿಕಾರಿಗಳಿಗೆ ಅಸೂಯೆ ತರುವ ವಿಷಯವಾಗಿದೆ. ಇನ್ನುಮುಂದೆ ಆದರೂ ಈ ಟ್ಯಾಂಕ್ ಗೆ ನಳದ ವ್ಯವಸ್ಥೆ ಕಲ್ಪಿಸಿ, ಪೋಲಾಗುತ್ತಿರುವ ನೀರನ್ನು ತಡೆಗಟ್ಟಿ ಮುಂದಿನ ಪೀಳಿಗೆಗೆ ನೀರು ಸಿಗುವ ಹಾಗೆ ಮಾಡುವುದು ಪ್ರತಿಯೊಬ್ಬ ನಾಗರಿಕನ ಲಕ್ಷಣವಾಗಿದೆ. ಈ ವರದಿಯನ್ನು ಗಮನಿಸಿಯಾದರೂ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಎಚ್ಚೆತ್ತುಕೊಂಡು ವ್ಯವಸ್ಥೆ ಕಲ್ಪಿಸುತ್ತಾರಾ? ಕಾದು ನೋಡಬೇಕಿದೆ.
ವರದಿ: ವಿಶ್ವನಾಥ ಭಜಂತ್ರಿ
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…