Latest

ಕೊನೆಗೂ ಆರ್.ಸಿ.ಬಿ ಗೆ ಒಲಿಯಿತು ಕಪ್

ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 8 ವಿಕೆಟ್‌ಗಳ ಅಮೋಘ ಗೆಲುವು ದಾಖಲಿಸುವ ಮೂಲಕ ಆರ್‌ಸಿಬಿ ಮಹಿಳಾ ತಂಡ ತನ್ನ ಎರಡನೇ ಆವೃತ್ತಿಯಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯ 16 ವರ್ಷಗಳ ಟ್ರೋಫಿ ಕನಸನ್ನು ನನಸಾಗಿಸಿದೆ. ಆರ್‌ಸಿಬಿ ಪುರುಷರ ತಂಡಕ್ಕಿಂತ ಮುನ್ನ ಮಹಿಳಾ ತಂಡ ಟ್ರೋಫಿ ಗೆದ್ದಿರುವುದು ವಿಶೇಷವಾಗಿದೆ. 2024ರ ಐಪಿಎಲ್‌ಗೆ ಮುನ್ನ ಬುಧವಾರ, ಮಾರ್ಚ್ 19ರಂದು ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಲಿರುವ “ಆರ್‌ಸಿಬಿ ಅನ್‌ಬಾಕ್ಸ್’ ಈವೆಂಟ್‌ಗೆ ಚೊಚ್ಚಲ ಟ್ರೋಫಿಯೊಂದಿಗೆ ಆರ್‌ಸಿಬಿ ಮಹಿಳಾ ತಂಡ ತವರಿಗೆ ಮರಳಲಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಕ್ಯಾಪಿಟಲ್ಸ್ ಮಹಿಳಾ ತಂಡ ಉತ್ತಮ ಆರಂಭದ ಹೊರತಾಗಿಯೂ ಆರ್‌ಸಿಬಿ ಸ್ಪಿನ್ನರ್‌ಗಳ ಮಾರಕ ದಾಳಿಗೆ ಸಿಲುಕಿ 18.3 ಓವರ್‌ಗಳಲ್ಲಿ ಕೇವಲ 113 ರನ್‌ಗಳಿಗೆ ಸರ್ವಪತನ ಕಂಡಿತು.
ಪ್ರಶಸ್ತಿ ಗೆಲುವಿಗೆ 114 ರನ್‌ಗಳ ಗುರಿ ಪಡೆದ ಆರ್‌ಸಿಬಿ ತಂಡ ಸೋಫಿ ಡಿವೈನ್, ಸ್ಮೃತಿ ಮಂಧಾನ ಮತ್ತು ಎಲ್ಲಿಸ್ ಪೆರ್ರಿ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ 2 ವಿಕೆಟ್ ಕಳೆದುಕೊಂಡು ಗೆಲುವಿನ ಗುರಿ ಮುಟ್ಟಿತು.
ಗೆಲುವಿಗೆ ಕೊನೆಯ ಓವರ್‌ನಲ್ಲಿ ಆರ್‌ಸಿಬಿ ತಂಡಕ್ಕೆ 5 ರನ್ ಬೇಕಾಗಿದ್ದಾಗ ಎಲ್ಲಿಸ್ ಪೆರ್ರಿ ಮತ್ತು ರಿಚಾ ಘೋಷ್ ಆಟವಾಡುತ್ತಿದ್ದು ಕೊನೆಯ ಓವರ್ ನ ಮೂರನೇ ಬಾಲಿನಲ್ಲಿ ರಿಚಾ ಘೋಷ್ ಬೌಂಡರಿ ಬಾರಿಸುವ ಮೂಲಕ ಆರ್‌ಸಿಬಿ ತಂಡಕ್ಕೆ ಗೆಲುವು ತಂದುಕೊಟ್ಟರು.
ಪ್ರತಿ ಬಾರಿಯೂ ಅಭಿಮಾನಿಗಳು ‘ಈ ಸಲ ಕಪ್ ನಮ್ದೇ’ ಎಂದು ಹೇಳಿಕೊಳ್ಳುತ್ತಿದ್ದರು ಆದರೆ ಈ ಬಾರಿ ಮಹಿಳೆಯರಿಂದ ಅಭಿಮಾನಿಗಳ ಕನಸು ನನಸಾಗಿದೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago