ಪಟ್ಟಣದ ಗಾಂಧಿ ವೃತ್ತದಲ್ಲಿರುವ ಮೆಡಿಕಲ್ ಅಂಗಡಿಯಲ್ಲಿ ಶುಕ್ರವಾರ (ಏಪ್ರಿಲ್ 12) ತಡರಾತ್ರಿ ಸಂಭವಿಸಿದ ಶಾರ್ಟ್ ಸರ್ಕಿಟ್ನಿಂದ ಭಾರಿ ಅಗ್ನಿ ಅವಘಡ ನಡೆದಿದೆ. ಈ ವೇಳೆ ಅಂಗಡಿಯಲ್ಲಿ ಸಂಗ್ರಹಿಸಿದ್ದ ಔಷಧಿಗಳು, ನಗದು ಹಾಗೂ ಇತರ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿದ್ದು, ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ.
ರಾತ್ರಿ ಸುಮಾರು 1 ಗಂಟೆಗೆ ಅಂಗಡಿಯಲ್ಲಿ ಬೆಂಕಿ ಹೊತ್ತಿಕೊಂಡಿದ್ದು, ಸುತ್ತಮುತ್ತಲಿನ ನಿವಾಸಿಗಳು ದಟ್ಟ ಹೊಗೆಯನ್ನು ಗಮನಿಸಿ ತಕ್ಷಣ ಅಂಗಡಿ ಮಾಲೀಕರಿಗೆ ಮಾಹಿತಿ ನೀಡಿದರು. ಆದರೆ, ಇತರರು ಬಕೆಟ್ ನೀರಿನಿಂದ ಬೆಂಕಿಯನ್ನು ನಂದಿಸಲು ಯತ್ನಿಸಿದರೂ ಆಗಲೇ ಬೆಂಕಿ ವ್ಯಾಪಕವಾಗಿ ಹರಡಿತ್ತು.
ಘಟನೆ ಸಂಭವಿಸಿದ ಸಂದರ್ಭದಲ್ಲಿ ಬೆಂಕಿಯ ತೀವ್ರತೆ ಹೆಚ್ಚಾಗಿದ್ದ ಕಾರಣ ಅಂಗಡಿಯೊಳಗಿನ ಎಲ್ಲಾ ವಸ್ತುಗಳು ಕೆಲವೇ ನಿಮಿಷಗಳಲ್ಲಿ ಸುಟ್ಟು ಹೋಗಿ ನಾಶವಾದವು. ಆದರೆ, ನೆರೆಯ ಅಂಗಡಿ ಮಾಲಿಕರು ಸಹಕಾರ ನೀಡಿದ್ದು, ತಮ್ಮ ಅಂಗಡಿಗಳಲ್ಲಿದ್ದ ವಸ್ತುಗಳನ್ನು ತಕ್ಷಣವೇ ಹೊರತೆಗೆದ ಕಾರಣ ಹೆಚ್ಚಿನ ಅನಾಹುತ ತಪ್ಪಿದಂತಾಯಿತು.
ಸುದ್ದೆ ತಿಳಿದ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿ ಬೆಂಕಿ ನಿಯಂತ್ರಣಕ್ಕೆ ತಂದರು. ಆದರೆ ಆಗಾಗಲೇ ಮೆಡಿಕಲ್ ಅಂಗಡಿಯೊಳಗಿನ ಔಷಧಿ, ನಗದು ಹಣ, ಫ್ರೀಜ್ಗಳು, ಮೆಜ್, ಕೂರಿ ಸೇರಿದಂತೆ ಎಲ್ಲವೂ ಭಸ್ಮವಾಗಿತ್ತು.
ಪ್ರಾಥಮಿಕ ಮಾಹಿತಿಯಂತೆ, ಸುಮಾರು ಐದುರಿಂದ ಆರು ಲಕ್ಷ ರೂಪಾಯಿಗಳಷ್ಟು ನಷ್ಟ ಸಂಭವಿಸಿರುವ ಸಾಧ್ಯತೆ ಇದೆ. ಘಟನೆ ಸಂಬಂಧ ತನಿಖೆ ಮುಂದುವರಿದಿದೆ.
ಬೆಳಗಾವಿಯ ಮಹಾಂತೇಶ್ ನಗರದ ಸಮಾಜ ಕಲ್ಯಾಣ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ ಬಿಸಿಎ ವಿದ್ಯಾರ್ಥಿನಿಯೊಬ್ಬಳು ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ದಾರುಣ…
ಮಧ್ಯಪ್ರದೇಶದ ರಾಜಧಾನಿ ಭೋಪಾಲ್ನ ಕೈಲಾಶ್ನಾಥ್ ಕಟ್ಜು ಆಸ್ಪತ್ರೆಯಲ್ಲಿ ಅಪರೂಪದ ಘಟನೆೊಂದು ನಡೆದಿದೆ. ಅಲ್ಲಿನ ಮಹಿಳೆಯೊಬ್ಬರು ಏಕಕಾಲದಲ್ಲಿ ನಾಲ್ಕು ಮಕ್ಕಳಿಗೆ ಜನ್ಮ…
ಮಧ್ಯಪ್ರದೇಶದ: ಭೋಪಾಲ್ನ ಗೌತಮ್ ನಗರ ಪೊಲೀಸ್ ಠಾಣೆಯ ಬಳಿ ಶುಕ್ರವಾರ ಭಯಾನಕ ಘಟನೆ ನಡೆದಿದೆ. ತನ್ನ ಪತ್ನಿ ಪೊಲೀಸರಿಗೆ ದೂರು…
ಸುದ್ದಗುಂಟೆ ಪಾಳ್ಯ ಠಾಣೆ ಪೊಲೀಸರು ಬಿಹಾರದಿಂದ ಕಡಿಮೆ ಬೆಲೆಗೆ ಗಾಂಜಾ ಖರೀದಿಸಿ, ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿದ್ದಾರೆ.…
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಜೈಲಿನಲ್ಲಿ ಇದ್ದ ಹಿನ್ನೆಲೆಯಲ್ಲಿ, ಈಗ ಅವರ ಹೆಸರು ಮರುಮತ್ತೆ ಸುದ್ದಿಗೆ…
ತಮಿಳುನಾಡಿನ ನಮಕ್ಕಲ್ ಜಿಲ್ಲೆಯಲ್ಲಿ ಜನಮಾನಸವನ್ನು ನಡುಗಿಸುವಂತೆ ಭಯಾನಕ ಘಟನೆ ನಡೆದಿದೆ. ತನ್ನ ಪ್ರೇಯಸಿ ಲೈಂಗಿಕ ಸಂಬಂಧಕ್ಕೆ ನಿರಾಕರಿಸಿದ ಆಕ್ರೋಶದಿಂದ ಒಡಿಶಾದ…