ಶಿರಸಿ; ಮನೆಯೊಳಗಿದ್ದ ಲಕ್ಷಾಂತರ ರೂಪಾಯಿ ನಗದು ಹಾಗೂ ಬಂಗಾರದ ಆಭರಣ ಗಳನ್ನು ಕಳ್ಳತನ ಮಾಡಿದ್ದ ನಾಲ್ವರು ಆರೋಪಿಗಳನ್ನು ಬನವಾಸಿ ಪೋಲಿಸರು ಬಂಧಿಸಿದ್ದಾರೆ.
ಶಿರಗೋಡದ ಮಹಮ್ಮದ್ ಕೈಫ್ ಮಹಮ್ಮದ್ ಗೌಸ್ (೧೯ ), ಬನವಾಸಿ ಯ ವಿಶ್ವ ಮಹೇಶ ಪಾವಸ್ಕರ, (೨೧), ಬನವಾಸಿ ಕಡಗೋಡದ, ಯಾಸೀನ್ ಬಾಷಾಸಾಬ್ (೧೮) ಹಾಗೂ ಹೊಸಪೇಟೆ ರಸ್ತೆ ಬನವಾಸಿಯ, ರಿಯಾಜ್ ತಂದೆ ಇಕ್ಬಾಲ್ ಚೌಧರಿತ (೧೯) ಆರೋಪಿಗಳಾಗಿದ್ದಾರೆ. ಆರೋಪಿಗಳು ಸ.೭ರಂದು ಬನವಾಸಿ ಯ ಖಲೀಲ ಅಬ್ದುಲ್ ಅಜೀಂ ಶೇಖ್ ಎಂಬಾತರ ಮನೆಯ ಒಳಗಡೆ ನುಗ್ಗಿ ಸುಮಾರು ೨,೫೫,೦೦೦ ರೂ, ನಗದು ಹಣ ಹಾಗೂ ಸುಮಾರು ೪ ಗ್ರಾಂ ತೂಕದ ಬಂಗಾರದ ನಮೂನೆಯ ಸಣ್ಣ ಉಂಗುರುಗಳು ೪.೦೦೦=೦೦ ರೂ, ಬೆಲೆಯವುಗಳನ್ನು ಕಳ್ಳತನ ಮಾಡಿಕೊಂಡು ಹೋಗಿದ್ದರು.ಈ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಆರೋಪಿಗಳ ಬಂಧನಕ್ಕಾಗಿ ವಿಶೇಷ ತಂಡ ರಚಿಸಿ ಕಾರ್ಯಾಚರಣೆ ಗಿಳಿದ ಪೋಲಿಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಪ್ರಕರಣದ ಮೊದಲನೇ ಆರೋಪಿಯಾದ ಮಹಮ್ಮದ್ ಕೈಫ್ ಮಹಮ್ಮದ್ ಗೌಸ್ ಈತನು ಪೆ.೧೬ರಂದು ಬನವಾಸಿ ಯ ಸುಮರ್ಣಾ ಮಾಲತೇಶ ಎಂಬಾತರ ಮನೆಯನ್ನು ಕಳ್ಳತನ ಮಾಡಿದ್ದನ್ನೂ ವಿಚಾರಣೆ ವೇಳೆ ಒಪ್ಪಿಕೊಂಡಿದ್ದಾನೆ.
ಪೋಲಿಸ್ ತನಿಖೆ ಯಿಂದ ಎರಡು ಪ್ರಕರಣಕ್ಕೆ ಸಂಬಂಧಿಸಿ ಒಟ್ಟು-೨,೭೫,೦೦೦ ನಗದು ಹಾಗೂ ೧೦ ಗ್ರಾಂ ಬಂಗಾರದ ಆಭರಣಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಕಾರ್ಯಾಚರಣೆ ಯಲ್ಲಿ ಡಿವೈಎಸ್ಪಿ ರವಿನಾಯ್ಕ ಸಿಪಿಐ ರಾಮಚಂದ್ರ ನಾಯಕ್ ಮಾರ್ಗದರ್ಶನ ದಲ್ಲಿ ಬನವಾಸಿ ಠಾಣೆ ಪಿಎಸ್ಐ ಗಳಾದ ಹನುಮಂತ ಬೀರಾದಾರ, ಚಂದ್ರಕಲಾ ಪತ್ತಾರ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…