Latest

ಆಸ್ತಿ ವೈಷಮ್ಯ; ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ- ಗುಪ್ತಾಂಗಕ್ಕೆ ರಾಡ್‌!

ಐವರು ಸೇರಿ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಉತ್ತರ ಪ್ರದೇಶದ ಗಾಜಿಯಾಬಾದ್‌ನಲ್ಲಿ ನಡೆದಿದೆ.
‘ಘಟನೆ ನಡೆಯುವುದಕ್ಕೂ ಒಂದು ದಿನ ಮೊದಲು ನಾನು ನನ್ನ ಸಹೋದರನ ಹುಟ್ಟುಹಬ್ಬದ ಆಚರಣೆಗಾಗಿ ಗುರುಗ್ರಾಮಕ್ಕೆ ಹೋಗಿದ್ದೆ.  ಆಚರಣೆ ಮುಗಿದ ಮೇಲೆ, ಬಸ್‌ ನಿಲ್ದಾಣದ ವರೆಗೂ ನನ್ನ ಸಹೋದರ ಬಿಟ್ಟು ಹೋದ. ಅಲ್ಲಿಂದ ನನಗೆ ಗೊತ್ತಿರುವವರೇ ಎಲ್ಲಿಗೋ ಕರೆದುಕೊಂಡು ಹೋದರು’ ಎಂದು ಸಂತ್ರಸ್ತ ಮಹಿಳೆಯು ಹೇಳಿಕೆ ನೀಡಿದ್ದಾರೆ ಎಂದು ನಿಪುನ್‌ ಅಗರ್ವಾಲ್‌ ತಿಳಿಸಿದರು.

‘ಮಹಿಳೆಯೊಬ್ಬರು ಆಶ್ರಮ್‌ ರಸ್ತೆಯಲ್ಲಿ ಅನಾಥವಾಗಿ ಬಿದ್ದಿದ್ದಾರೆ ಎಂದು ನಂದ್‌ಗ್ರಾಮ್‌ ಠಾಣೆಯ ತುರ್ತು ಸಂಖ್ಯೆಗೆ ಮಂಗಳವಾರ (ಅ.18) ಬೆಳಿಗ್ಗೆ 3.30ರ ಸುಮಾರಿಗೆ ಕರೆ ಬಂತು. ನಂತರ ಮಹಿಳೆಯನ್ನು ಗುರು ತೇಜ್‌ ಬಹದ್ದೂರ್ ಆಸ್ಪತ್ರೆಗೆ ದಾಖಲಿಸಿದ್ದೇವೆ’ ಎಂದು ಗಾಜಿಯಬಾದ್‌ನ ಪೊಲೀಸ್‌ ವರಿಷ್ಠಾಧಿಕಾರಿ ನಿಪುನ್‌ ಅಗರ್ವಾಲ್‌ ಮಾಹಿತಿ ನೀಡಿದರು.

‘ಈ ವೇಳೆ ಸರ್ಕಾರಿ ಆಸ್ಪತ್ರೆಗೆ ಬೇಡ, ಖಾಸಗಿ ಆಸ್ಪತ್ರೆಗೆ ದಾಖಲಿಸಿ ಎಂದು ಸಂತ್ರಸ್ತ ಮಹಿಳೆಯು ಹೇಳಿದ್ದರಿಂದ ಗುರು ತೇಜ್‌ ಆಸ್ಪತ್ರೆಗೆ ದಾಖಲಿಸಲಾಯಿತು’ ಎಂದರು.
ಐವರಲ್ಲಿ ನಾಲ್ಕು ಮಂದಿಯನ್ನು ಬಂಧಿಸಲಾಗಿದೆ’ ಎಂದು ಪೊಲೀಸರು ಬುಧವಾರ ಹೇಳಿದರು.

‘ಮಹಿಳೆಯ ಕೈ-ಕಾಲುಗಳನ್ನು ಕಟ್ಟಿ, ಆಕೆಯ ಗುಪ್ತಾಂಗಕ್ಕೆ ಕಬ್ಬಿಣದ ರಾಡನ್ನು ತುರುಕಿ, ಆಕೆಯನ್ನು ಗೋಣಿಚೀಲದಲ್ಲಿ ಸುತ್ತಿದ ಸ್ಥಿತಿಯಲ್ಲಿ ಮಹಿಳೆ ಪತ್ತೆಯಾಗಿದ್ದಾರೆ’ ಎಂದು ದೆಹಲಿ ಮಹಿಳಾ ಆಯೋಗ ಆರೋಪಿಸಿದೆ. ಘಟನೆಯನ್ನು ಆಯೋಗ ಖಂಡಿಸಿದೆ. ಈ ಸಂಬಂಧ ಗಾಜಿಯಬಾದ್‌ ಪೊಲೀಸರಿಗೆ ಆಯೋಗದ ಮುಖ್ಯಸ್ಥೆ ಸ್ವಾತಿ ಮಾಲೀವಾಲ್‌ ನೋಟಿಸ್‌ ನೀಡಿದ್ದಾರೆ.

‘ಅ.16 (ಭಾನುವಾರ) ತನ್ನ ಸಹೋದರನ ಹುಟ್ಟುಹಬ್ಬದ ಆಚರಣೆಗೆ ತೆರಳಲು ಗಾಜಿಯಬಾದ್‌ನಲ್ಲಿ ಆಟೊರಿಕ್ಷಾಗಾಗಿ ಮಹಿಳೆ ಕಾಯುತ್ತಿದ್ದರು. ಈ ವೇಳೆ ಎಸ್‌ಯವಿಯಲ್ಲಿ ಬಂದ ನಾಲ್ವರು ಆರೋಪಿಗಳು, ಆಕೆಯನ್ನು ಅಪಹರಿಸಿದ್ದಾರೆ. ಈ ನಾಲ್ವರು ಮತ್ತೊಬ್ಬ ವ್ಯಕ್ತಿಯೊಂದಿಗೆ ಸೇರಿ ಎರಡು ದಿನಗಳ ಕಾಲ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ’ ಎಂದು ಮಹಿಳಾ ಆಯೋಗವು ಗಂಭೀರ ಆರೋಪ ಮಾಡಿದೆ.

‘ಮಹಿಳೆಯನ್ನು ದೆಹಲಿಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆಕೆಯ ಸ್ಥಿತಿ ಗಂಭೀರವಾಗಿದೆ’ ಎಂದು ದೆಹಲಿ ಮಹಿಳಾ ಆಯೋಗ ಹೇಳಿದೆ. ಆದರೆ, ‘ಮಂಗಳವಾರ ಬೆಳಿಗ್ಗೆ ಮಹಿಳೆಯನ್ನು ಆಸ್ಪತ್ರೆಗೆ ಕರೆತರಲಾಗಿತ್ತು. ಮಹಿಳೆ ಸ್ಥಿತಿ ಸ್ಥಿರವಾಗಿದೆ. ಆಕೆಗೆ ಯಾವುದೇ ರೀತಿ ಆಂತರಿಕ ಗಾಯಗಳಾಗಿರುವುದು ಕಂಡುಬಂದಿಲ್ಲ’ ಎಂದು ಗುರು ತೇಜ್‌ ಬಹದ್ದೂರ್‌ ಆಸ್ಪತ್ರೆಯಮಾಧ್ಯಮ ವಕ್ತಾರ ಡಾ. ರಜತ್‌ ಜಾಂಬಾ ತಿಳಿಸಿದ್ದಾರೆ.

ಆದರೆ, ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆಗಿರುವ ಕುರುಹುಗಳಿವೆ. ಜೊತೆಗೆ ಆಕೆಯ ದೇಹದೊಳಗೆ ವಸ್ತುವೊಂದು ಪತ್ತೆಯಾಗಿದೆ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

4 weeks ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago