Latest

ಜನರೇಟರ್ ಕಳ್ಳರು ಪೋಲಿಸರ ಬಲೆಗೆ!!!

ನರಸಿಂಹರಾಜ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಕಳುವು ಪ್ರಕರಣದಲ್ಲಿ ದಿನಾಂಕ ೧೩/೦೮/೨೦೨೨ ರಂದು ಇಬ್ಬರು ಆರೋಪಿಗಳನ್ನು ಬಂಧಿಸಿ ವಿಚಾರಣೆಗೊಳಪಡಿಸಲಾಗಿ ಇವರುಗಳು ಮೈಸೂರು ನಗರ ನರಸಿಂಹರಾಜ ಪೊಲೀಸ್ ಠಾಣೆ, ಮೇಟಗಳ್ಳಿ ಪೊಲೀಸ್ ಠಾಣೆ ಹಾಗೂ ಮಂಡ್ಯ ಜಿಲ್ಲೆಯ ಮಳವಳ್ಳಿ ಟೌನ್ ಪೊಲೀಸ್ ಠಾಣೆಯ ಸರಹದ್ದಿನಲ್ಲಿರುವ ಕರ್ನಾಟಕ ಬ್ಯಾಂಕ್ ಕಛೇರಿಯ ಹೊರಗೆ ಅಳವಡಿಸಿದ್ದ ಜನರೇಟರ್‌ಗಳನ್ನು ಕನ್ನಕಳವು ಮಾಡಿದ್ದು ಇವರು ನೀಡಿದ ಮಾಹಿತಿಯ ಮೇರೆಗೆ ದಿನಾಂಕ ೧೭/೦೮/೨೦೨೨ ರಂದು ಕಳವು ಮಾಲುಗಳನ್ನು ಸ್ವೀಕರಿಸುತ್ತಿದ್ದ ಒಬ್ಬ ಆರೋಪಿಯನ್ನು ದಸ್ತಗಿರಿ ಮಾಡಿ ಆತನಿಂದ ೩,೬೬,೦೦೦/- ರೂ ಬೆಲೆಬಾಳುವ ಹೋಂಡಾ ಕಂಪನಿಯ ೩ ಜನರೇಟರ್‌ಗಳನ್ನು ಹಾಗೂ ೨ನೇ ಆರೋಪಿಯ ಸ್ನೇಹಿತನಿಂದ ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಇನೋವಾ ಕಾರನ್ನು ಅಮಾನತ್ತುಪಡಿಸಿಕೊಳ್ಳಲಾಗಿದೆ.
ಈ ಪತ್ತೆ ಕಾರ್ಯದಿಂದ ಮೈಸೂರು ನಗರ ನರಸಿಂಹರಾಜ ಪೊಲೀಸ್ ಠಾಣೆಯ-೦೧, ಮೇಟಗಳ್ಳಿ ಪೊಲೀಸ್ ಠಾಣೆಯ-೦೧ ಕಳವು ಪ್ರಕರಣಗಳು ಮತ್ತು ಮಂಡ್ಯ ಜಿಲ್ಲೆ ಮಳವಳ್ಳಿ ಟೌನ್ ಪೊಲೀಸ್ ಠಾಣೆಯ-೦೧ ಕನ್ನಕಳವು ಪ್ರಕರಣಗಳು ಪತ್ತೆಯಾಗಿರುತ್ತವೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಡಿಸಿಪಿ ಕೇಂದ್ರಸ್ಥಾನ ಅಪರಾಧ ಮತ್ತು ಸಂಚಾರ ವಿಭಾಗ ರವರಾದ ಶ್ರೀಮತಿ ಗೀತ ಎಂ.ಎಸ್, ಐ.ಪಿ.ಎಸ್ ರವರು ಮತ್ತು ನರಸಿಂಹರಾಜ ವಿಭಾಗದ ಎ.ಸಿ.ಪಿ ರವರಾದ ಶ್ರೀ ಶಿವಶಂಕರ್ ರವರ ಮಾರ್ಗದರ್ಶನದಲ್ಲಿ ನರಸಿಂಹರಾಜ ಪೊಲೀಸ್ ಇನ್ಸ್ಪೆಕ್ಟರ್ ಅಜರುದ್ದೀನ್, ಪಿ.ಎಸ್.ಐ ಜೈಕೀರ್ತಿ, ಪಿ.ಎಸ್.ಐ ಗಂಗಾಧರ್, ಎಎಸ್‌ಐ ರವಿ ಹಾಗೂ ಸಿಬ್ಬಂದಿಗಳಾದ ಮಂಜುನಾಥ, ಮಹೇಶ, ಸುನೀಲ್ ಕುಮಾರ್, ದೊಡ್ಡೇಗೌಡ, ಈರೇಶ ಮತ್ತು ಬಸವರಾಜು ರವರುಗಳು ಮಾಡಿರುತ್ತಾರೆ.
ಈ ಪತ್ತೆ ಕಾರ್ಯವನ್ನು ಮೈಸೂರು ನಗರದ ಪೊಲೀಸ್ ಆಯುಕ್ತರವರಾದ ಡಾ: ಚಂದ್ರಗುಪ್ತ, ಐ.ಪಿ.ಎಸ್. ರವರು ಪ್ರಶಂಸಿಸಿರುತ್ತಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago