ಬಾತ್ ರೂಮ್ ನಲ್ಲಿ ಸ್ನಾನ ಮಾಡುವಾಗ ಉಸಿರುಗಟ್ಟಿ ದಂಪತಿಗಳಿಬ್ಬರು ಮೃತಪಟ್ಟು, 5 ವರ್ಷದ ಮಗು ಪ್ರಜ್ಞಾಹೀನ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿರುವ ದಾರುಣ ಘಟನೆ ರಾಜಸ್ಥಾನದ ಭಿಲ್ವಾರಾ ಜಿಲ್ಲೆಯಲ್ಲಿ ನಡೆದಿದೆ. ಶಹಾಪುರ ನಿವಾಸಿಗಳಾದ ಶಿವನಾರಾಯಣ ಜಾನ್ವಾರ್ (37), ಅವರ ಪತ್ನಿ ಕವಿತಾ ಜಾನ್ವರ್ (35) ಮೃತ ದಂಪತಿಗಳು. ಮಗ ವಿಹಾನ್ ಆಸ್ಪತ್ರೆಗೆ ದಾಖಲಾಗಿದ್ದಾರೆ.
ದಂಪತಿಗಳು ಹಾಗೂ ಕುಟುಂಬ ಸದಸ್ಯರು ಶೀತಲ ಅಷ್ಟಮಿ ಹಬ್ಬದ ಪ್ರಯುಕ್ತ ಬಣ್ಣದಲ್ಲಿ ಆಡಿದ್ದರು. ಆದಾದ ಬಳಿಕ ಬಣ್ಣವನ್ನು ತೊಳೆಯಲು ತಮ್ಮ 5 ವರ್ಷದ ಮಗನನ್ನು ಕರೆದುಕೊಂಡು ದಂಪತಿಗಳು ಬಾತ್ ರೂಮ್ ಗೆ ತೆರಳಿದ್ದಾರೆ. ಈ ವೇಳೆ ಗೀಸರ್ ಆನ್ ಮಾಡಿದ್ದಾರೆ. ಕೆಲವೇ ಕ್ಷಣದಲ್ಲಿ ಗೀಸರ್ ಅನಿಲ ಸೋರಿಕೆಯಾಗಿದೆ. ಏಕಾಏಕಿ ಗೀಸರ್ ಗ್ಯಾಸ್ ಲೀಕ್ ಆದ ಪರಿಣಾಮ ದಂಪತಿಗಳಿಗೆ ಉಸಿರುಗಟ್ಟಿ ಏನು ಮಾಡಲಾಗದ ಸ್ಥಿತಿ ನಿರ್ಮಾಣವಾಗಿದೆ. ಇದಾದ ಕೆಲ ಸಮಯದ ಬಳಿಕ ಕುಟುಂಬದ ಇತರ ಸದಸ್ಯರು ಬಾಗಿಲು ಬಡಿದು ಕರೆಯಲು ಯತ್ನಿಸಿದ್ದಾರೆ. ಆದರೆ ಯಾವುದೇ ಪ್ರತಿಕ್ರಿಯೆ ಬಾರದ ಹಿನ್ನೆಲೆ ಬಾಗಿಲು ಒಡೆದು ನೋಡಿದ್ದಾರೆ. ನೋಡುವಾಗ ಮೂವರು ಪ್ರಜ್ಞೆ ತಪ್ಪಿ ಬಿದ್ದಿರುವ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಮೂವರನ್ನು ಆಸ್ಪತ್ರೆಗೆ ರವಾನಿಸಿದ್ದಾರೆ. ಇದರಲ್ಲಿ ದಂಪತಿಗಳು ಮೃತಪಟ್ಟಿದ್ದು,ಮಗ ವಿಹಾನ್ ಬದುಕುಳಿದಿದ್ದಾರೆ ಎಂದು ಘಟನೆ ಬಗ್ಗೆ ಪೊಲೀಸರು ಹೇಳಿದ್ದಾರೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…