Latest

ಸುರಸಾಗರ ಸರೋವರದಲ್ಲಿ ಶಿವನ ಚಿನ್ನದ ಪ್ರತಿಮೆ ಅನಾವರಣ

ಗುಜರಾತ್‌ನ ವಡೋದರಾದ ಸುರ್‌ಸಾಗರ್ ಸರೋವರದಲ್ಲಿ 111 ಅಡಿ ಎತ್ತರದ ಶಿವನ ಪ್ರತಿಮೆಯನ್ನು 12 ಕೋಟಿ ರೂಪಾಯಿ ಮೌಲ್ಯದ ಚಿನ್ನದಿಂದ ಮಾಡಲಾಗಿದೆ. ಈ ಮೂರ್ತಿ ನಿರ್ಮಾಣಕ್ಕಾಗಿ 17.5 ಕೆಜಿ ಚಿನ್ನ ಬಳಸಲಾಗಿದೆ.
ಮಂಜಲ್‌ಪುರ ಶಾಸಕ ಯೋಗೀಶ್ ಪಟೇಲ್ ನೇತೃತ್ವದಲ್ಲಿ ಸತ್ಯಂ, ಶಿವಂ, ಸುಂದರಂ ಸಮಿತಿ ಎಂಬ ಟ್ರಸ್ಟ್ ಈ ಬೃಹತ್ ಶಿವನ ಪ್ರತಿಮೆಯನ್ನು ಸ್ಥಾಪಿಸಿದೆ. ಈ ಪ್ರತಿಮೆಯ ನಿರ್ಮಾಣ ಕಾರ್ಯ 1996 ರಲ್ಲಿ ಪ್ರಾರಂಭವಾಗಿ 2002 ರಲ್ಲಿ ಪೂರ್ಣಗೊಂಡಿತು. ಈ ವಿಗ್ರಹ ಆಗ ತಾಮ್ರದಿಂದ ಮಾಡಲ್ಪಟ್ಟಿತ್ತು. ನಂತರ, ಸ್ವರ್ಣ ಸಂಕಲ್ಪ ಪ್ರತಿಷ್ಠಾನವು ಪ್ರತಿಮೆಗೆ ಚಿನ್ನದ ಲೇಪನ ಮಾಡಲು ನಿರ್ಧರಿಸಿತು. ಅಂತಿಮವಾಗಿ ದೇವಾದಿದೇವನ ವಿಗ್ರಹ ಇದೀಗ ಸ್ವರ್ಣಲೇಪನದಲ್ಲಿದೆ. ಸ್ವರ್ಣ ಲೇಪನಕ್ಕೆ ಅಗತ್ಯ ಹಣ ನೀಡಲು ಜನರು ಮುಂದೆ ಬಂದು ಸತ್ಯಂ, ಶಿವಂ, ಸುಂದರಂ ಸಮಿತಿ ಟ್ರಸ್ಟ್ ಗೆ ದೇಣಿಗೆ ರೂಪದಲ್ಲಿ ನೆರವು ನೀಡಿದರು. ಹೀಗಾಗಿ 17.5 ಕೆಜಿ ಚಿನ್ನವನ್ನು ಚಿನ್ನದ ಲೇಪನಕ್ಕೆ ಬಳಸಲಾಗಿದ್ದು, 12 ಕೋಟಿ ರೂಪಾಯಿ ವೆಚ್ಚವಾಗಿದೆ.
ವಡೋದರದಲ್ಲಿ ಶಿವನ ವಾರ್ಷಿಕ ಮೆರವಣಿಗೆಯು ಸುರ್ಸಾಗರ್ ಬಳಿ ಕೊನೆಗೊಳ್ಳುತ್ತದೆ. ನಂತರ ವಿಗ್ರಹದ ಬಳಿ ಆರತಿ ಸಲ್ಲಿಸಲಾಗುವುದು. ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ರವರು 111 ಅಡಿ ಚಿನ್ನದ ಲೇಪಿತ ಶಿವನ ಪ್ರತಿಮೆಯನ್ನು ವಡೋದರಾಕ್ಕೆ ಮಹಾಶಿವರಾತ್ರಿಯ ಸಂದರ್ಭದಲ್ಲಿ ಅಧಿಕೃತವಾಗಿ ಸಮರ್ಪಿಸಲಿದ್ದಾರೆ. ವಡೋದರಾ ನಗರದ ಜನರು ಈ ಹಬ್ಬಗಳಲ್ಲಿ ಭಾಗವಹಿಸಲು ಉತ್ಸುಕರಾಗಿದ್ದು, ಶಿವನ ಮೂರ್ತಿ ಅನಾವರಣಕ್ಕೆ ಜನಸಾಗರವೇ ಹರಿದು ಬರಲಿದೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago