Latest

ಪತಿಯ ಆಕ್ರಮ ಸಂಬಂಧಕ್ಕೆ ಬೇಸತ್ತ ಗ್ರಾಮ ಪಂಚಾಯಿತಿ ಅಧ್ಯಕ್ಷ ಕಿ: ಮಗುವಿನ ಹತ್ಯೆ ಬಳಿಕ ತಾನು ನೇಣಿಗೆ ಶರಣು!

ಬೆಂಗಳೂರು: ಪತಿಯ ಅಕ್ರಮ ಸಂಬಂಧಕ್ಕೆ ಬೇಸತ್ತ ಮಹಿಳೆಯೊಬ್ಬರು ತಮ್ಮ ಐದು ವರ್ಷದ ಮಗಳನ್ನು ಹತ್ಯೆಗೈದು, ತಾನು ಕೂಡಾ ಜೀವ ಬಿಡಿದ ಹೃದಯ ವಿದ್ರಾವಕ ಘಟನೆ ನಗರದ ಬಾಗಲಗುಂಟೆಯಲ್ಲಿ ನಡೆದಿದೆ.

33 ವರ್ಷದ ಶೃತಿ ತಮ್ಮ 5 ವರ್ಷದ ಮಗಳು ರೋಶಿಣಿಯೊಂದಿಗೆ ಬಾಗಲಗುಂಟೆಯಲ್ಲಿ ವಾಸವಿದ್ದು, ಗಂಡ ಗೋಪಾಲಕೃಷ್ಣನ ಅಕ್ರಮ ಸಂಬಂಧದಿಂದ ಮನನೊಂದ ಅವರು ಈ ಹೀನ ಕೃತ್ಯಕ್ಕೆ ಕೈಹಾಕಿದ್ದಾರೆ. ಶೃತಿಯು ಪಾವಗಡ ತಾಲೂಕಿನ ಗುಂಡಾರಹಳ್ಳಿ ಗ್ರಾಮದ ಗ್ರಾಮ ಪಂಚಾಯತಿ ಅಧ್ಯಕ್ಷೆಯಾಗಿದ್ದರು.

ಘಟನೆಯ ವಿವರ:
ಶೃತಿ ಇಂದು ಬೆಳಿಗ್ಗೆ ಡೆತ್ ನೋಟ್ ಬರೆದಿಟ್ಟು ತಮ್ಮ ಮಗಳನ್ನು ಫ್ಯಾನಿಗೆ ನೇಣು ಹಾಕಿ ಕೊಲೆಮಾಡಿದ್ದಾರೆ. ಬಳಿಕ, ತಾನೂ ಅದೇ ಫ್ಯಾನಿಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಈ ಘಟನೆ ಬೆಳಕಿಗೆ ಬಂದ ತಕ್ಷಣ, ಶೃತಿಯ ಪತಿ ಗೋಪಾಲಕೃಷ್ಣ ಹಾಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ದೌಡಾಯಿಸಿದ ಬಾಗಲಗುಂಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಈ ಘಟನೆ ಕುಟುಂಬದವರಲ್ಲಿ ಹಾಗೂ ಆತನಿಕೆಯಲ್ಲಿ ಭಾರೀ ಆಘಾತ ಮೂಡಿಸಿದೆ. ಪತಿಯ ಅಕ್ರಮ ಸಂಬಂಧವೇ ಈ ದುರಂತಕ್ಕೆ ಕಾರಣ ಎಂದು ಶೃತಿಯ ಡೆತ್ ನೋಟ್ ತಿಳಿಸಿದೆ.

ಪೊಲೀಸರು ಈ ಕುರಿತು ಹೆಚ್ಚಿನ ಮಾಹಿತಿ ಸಂಗ್ರಹಿಸುತ್ತಿದ್ದು, ಮುಂದಿನ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ.

nazeer ahamad

Recent Posts

ಮಲಗೋಕೆ ಹಣ ಕೇಳ್ತಾಳೆ, ಮಕ್ಕಳು ಬೇಡ ಅಂತಾಳೆ ಎಂದು ದೂರಿದ ಗಂಡ; ಗಂಡನ ಕಂಜೂಸ್ ಬುದ್ದಿ ಬಿಚ್ಚಿಟ್ಟ ಹೆಂಡತಿ…!

ಮದುವೆಗೆ ಒಪ್ಪಿಕೊಂಡ ಹೆಂಡತಿ, ಆದರೆ ಮಕ್ಕಳನ್ನು ಮಾಡಿಕೊಳ್ಳಲು ನಿರಾಕರಿಸಿದ್ದಾಳೆ ಎಂದು ಗಂಡನಿಂದ ಪೊಲೀಸರಿಗೆ ದೂರು. ಈ ಪ್ರಕರಣದಲ್ಲಿ ಗಂಡನ ಆರೋಪಗಳ…

3 hours ago

7 ವರ್ಷದ ಬಾಲಕಿಗೆ ಲೈಂಗಿಕ ದೌರ್ಜನ್ಯ ಆರೋಪ- ಬಳ್ಳಾರಿಯಲ್ಲಿ ಬಿಜೆಪಿ ಮುಖಂಡ ಅರೆಸ್ಟ್..!

ಬಳ್ಳಾರಿ ಜಿಲ್ಲೆಯ ಸಿರುಗುಪ್ಪದಲ್ಲಿ ರಾಜ್ಯವನ್ನೇ ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಬಿಜೆಪಿ ಯುವ ಮುಖಂಡ ದೇವು ನಾಯಕ್ (Devu Nayak) ಮೇಲೆ…

3 hours ago

39ನೇ ವಯಸ್ಸಿನಲ್ಲಿ ಅಜ್ಜಿಯಾಗಿರುವ ಚೀನಾದ ಮಹಿಳೆ! ಸೋಶಿಯಲ್ ಮೀಡಿಯಾದಲ್ಲಿ ಫೋಟೋ ವೈರಲ್

ಅಜ್ಜಿ ಎಂದರೆ ನಮ್ಮ ಕಣ್ಣಿಗೆ ಮೂಡುವ ಚಿತ್ರಣವು 60 ವರ್ಷ ಮೇಲ್ಪಟ್ಟ, ಬೆಳ್ಳಿ ಕೂದಲಿನ ಮಹಿಳೆ. ಆದರೆ, 39ನೇ ವಯಸ್ಸಿನಲ್ಲಿ…

3 hours ago

ನಾಗ್ಪುರ ಹಿಂಸಾಚಾರ: ಮಹಿಳಾ ಪೊಲೀಸರ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ 50 ಜನರ ಬಂಧನ

ನಾಗ್ಪುರದಲ್ಲಿ ನಡೆದ ಹಿಂಸಾಚಾರದ ಬಳಿಕ ಮಹಾರಾಷ್ಟ್ರ ಪೊಲೀಸರು ತೀವ್ರವಾಗಿ ಕಾರ್ಯಪ್ರವೃತ್ತರಾಗಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದ ಎಫ್‌ಐಆರ್ (FIR) ಪ್ರತಿಗಳು ಬಹಿರಂಗಗೊಂಡಿದ್ದು,…

3 hours ago

ಮಂಡ್ಯ ಅನಾಥಾಶ್ರಮ ವಿಷಾಹಾರ ಪ್ರಕರಣ: ತನಿಖೆ ಚುರುಕು, ಹೋಟೆಲ್ ಮಾಲೀಕನ ಮೇಲಿನ ದ್ವೇಷವೇ ಕಾರಣ?

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಅನಾಥಾಶ್ರಮದಲ್ಲಿ ವಿಷಾಹಾರ ಸೇವಿಸಿ ಇಬ್ಬರು ಮಕ್ಕಳು ಸಾವನ್ನಪ್ಪಿದ ಪ್ರಕರಣದಲ್ಲಿ ಹೊಸ ತಿರುವು ದೊರಕಿದೆ. ಆಹಾರ…

3 hours ago

ಮೀನು ಕದ್ದ ಆರೋಪ: ಮಲ್ಪೆ ಬಂದರಿನಲ್ಲಿ ದಲಿತ ಮಹಿಳೆಗೆ ಅಮಾನುಷ ಹಲ್ಲೆ – ನಾಲ್ವರು ಬಂಧನ

ಉಡುಪಿ ಜಿಲ್ಲೆಯ ಮಲ್ಪೆ ಬಂದರಿನಲ್ಲಿ ಮೀನು ಕಳವು ಆರೋಪ ಮಾಡಿ ದಲಿತ ಮಹಿಳೆಯನ್ನು ಮರಕ್ಕೆ ಕಟ್ಟಿ ಹಲ್ಲೆ ಮಾಡಿದ ಘಟನೆ…

4 hours ago