Latest

ಪಟ್ಟಣ ಪಂಚಾಯಿತಿ ಆಡಳಿತ ವ್ಯವಸ್ಥೆ ಕುರಿತು ಪ್ರೌಢಶಾಲಾ ವಿದ್ಯಾರ್ಥಿನಿಯರ ಜೊತೆ ಮುಖ್ಯಾಧಿಕಾರಿ ಚರ್ಚೆ

ಕೊಟ್ಟೂರು:- ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಸರ್ಕಾರಿ ಬಾಲಕಿಯರ ಪ್ರೌಢಶಾಲೆ ವಿದ್ಯಾರ್ಥಿನಿಯರು ಪಟ್ಟಣ ಪಂಚಾಯತಿ ಮುಖ್ಯ ಅಧಿಕಾರಿ ಎ. ನಸಾರುಲ್ಲ ರವರ ಜೊತೆ ಸ್ಥಳೀಯ ಪಟ್ಟಣ ಪಂಚಾಯಿತಿ ಆಡಳಿತ ವ್ಯವಸ್ಥೆಯ ಕುರಿತು ಗುರುವಾರ ಚರ್ಚೆ ನಡೆಸಿದರು

ಈ ಸಂದರ್ಭದಲ್ಲಿ ಮಾತನಾಡಿದ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿಯವರು ಪಂಚಾಯಿತಿಗಳು ಹೇಗೆ ಉಗಮವಾಯಿತು ಇದರ ಉದ್ದೇಶ ಏನು ಇದರಿಂದ ಏನೆಲ್ಲಾ ಪ್ರಯೋಜನ ಇದರ ಮೂಲ ಇತಿಹಾಸದ ಸಂಪೂರ್ಣ ಮಾಹಿತಿಯನ್ನು ವಿದ್ಯಾರ್ಥಿನಿಯರಿಗೆ ತಿಳಿಸಲಾಯಿತು .

ಪ್ರಸ್ತುತ ಕೊಟ್ಟೂರು ಪಟ್ಟಣವನ್ನು 20 ವಾರ್ಡ್‌ಗಳಾಗಿ ವಿಂಗಡಿಸಲಾಗಿದ್ದು, ಕೊಟ್ಟೂರು ಟೌನ್ ಪಂಚಾಯತ್ 26,289 ಜನಸಂಖ್ಯೆಯನ್ನು ಹೊಂದಿದೆ ಅದರಲ್ಲಿ 13,190 ಪುರುಷರು ಮತ್ತು 13,099 ಮಹಿಳೆಯರು ಇದು 2011 ರ ಜನಗಣತಿಯ ವರದಿಯ ಪ್ರಕಾರವಾಗಿದೆ ಎಂದರು

ಪಟ್ಟಣ ಪಂಚಾಯಿತಿಯ ಆಡಳಿತ ವ್ಯವಸ್ಥೆಯಲ್ಲಿ ಮನೆಗಳಿಗೆ ಸಂಬಂಧಿಸಿದಂತೆ ಖಾತಾ ನಕಲು, ಅಂಗಡಿಗಳಿಗೆ, ಉದ್ಯಮಿದಾರರಿಗೆ , ವಾಣಿಜ್ಯ ಪರವಾನಿಗೆ ನೀಡಲಾಗುವುದು, ಜನನ, ಮರಣ ಪ್ರಮಾಣ ಪತ್ರಗಳು, ಕಟ್ಟಡ ಪರವಾನಿಗೆ ನೀಡುವುದು, ನಳ ಮತ್ತು ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವುದು , ಆಸ್ತಿ ಮಾಲಿಕತ್ವದ ಹಕ್ಕು ಬದಲಾವಣೆ, ಈಗೆ ಹಲವಾರು ಒಟ್ಟು 18 ಸೇವೆಗಳನ್ನು ನೀಡಲಾಗಿದೆ ಹಾಗೂ ವಿದ್ಯಾರ್ಥಿಗಳಿಗೆ ಬುಕ್ ಬಿಲ್ ಎಂಬ ಪ್ರೋತ್ಸಾಹ ಧನವಾಗಿ ಪ್ರತಿ ವರ್ಷ ನೀಡಲಾಗುತ್ತಿದೆ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು

ಕಿರಿಯ ಆರೋಗ್ಯ ನಿರೀಕ್ಷಕರಾದ ಅನುಷಾ ರವರು ಮಾತನಾಡಿ ಪ್ಲಾಸ್ಟಿಕ್ ನಿಂದ ಆಗುವ ಅನಾನುಕೂಲಗಳು ಕುರಿತು ಚರ್ಚಿಸಿದರು
ಜನನ ಮತ್ತು ಮರಣ ಪ್ರಮಾಣ ಪತ್ರಗಳ ಬಗ್ಗೆ ಮಾಹಿತಿ ನೀಡಲಾಯಿತು ಮತ್ತು ಹಸಿ ಕಸ ಮತ್ತು ಒಣ ಕಸ ಪ್ರತಿ ಮನೆಯಲ್ಲಿ ವಿಂಗಡಣೆ ಮಾಡಬೇಕು ಪಟ್ಟಣ ಸ್ವಚ್ಛತೆ ಹೊಂದಲು ಪಟ್ಟಣ ಪಂಚಾಯಿತಿಯ ಸಿಬ್ಬಂದಿ ಜೊತೆಗೆ ಸಾರ್ವಜನಿಕರು ಸಹಕರಿಸುವಂತೆ ನಿಮ್ಮ ನಿಮ್ಮ ಮನೆಯಲ್ಲಿ ವಿದ್ಯಾರ್ಥಿಗಳು ಜಾಗೃತಿ ಮೂಡಿಸಬೇಕು ಎಂದು ಹೇಳಿದರು.

ನಂತರ ವಿದ್ಯಾರ್ಥಿನಿಯರು ಮುಖ್ಯಧಿಕಾರಿಗಳ ಜೊತೆ ಪಟ್ಟಣ ಪಂಚಾಯತ್ ಆಡಳಿತದ ವ್ಯವಸ್ಥೆಯ ಬಗ್ಗೆ ಪ್ರಶ್ನೆಗಳನ್ನು ಕೇಳುವುದರ ಮೂಲಕ ಪರಿಹಾರ ಕಂಡುಕೊಂಡರು ಹಾಗೂ ವಿದ್ಯಾರ್ಥಿನಿಯರು ಮುಖ್ಯಧಿಕಾರಿಗಳಿಗೆ ಶಾಲೆಯ ಸಮಸ್ಯೆ ಕುರಿತು ಪರಿಹರಿಸುವಂತೆ ಮನವಿ ಪತ್ರ ಸಲ್ಲಿಸಲಾಯಿತು

ಈ ಸಂದರ್ಭದಲ್ಲಿ ಸದಸ್ಯೆ ವೀಣಾ ವಿವೇಕಾನಂದ, ಶಿಕ್ಷಕ ಹೆಚ್. ಮಹಾಂತೇಶ್, ಜಿ. ಕೊಟ್ರಮ್ಮ,ಅನಿತಾ ಮತ್ತು ವಿದ್ಯಾರ್ಥಿನಿಯರು ಇದ್ದರು.

ವರದಿ:- ಮಣಿಕಂಠ. ಬಿ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago