ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಎಂಬ ಕಾರಣಕ್ಕೆ ಪ್ರಿಯಕರನೊಂದಿಗೆ ಸೇರಿ ಸ್ವಂತ ತಮ್ಮನನ್ನೇ ಕೊಲೆ ಮಾಡಿ ಪರಾರಿಯಾಗಿದ್ದ ಹಂತಕಿ ಅಕ್ಕ ಹಾಗೂ ಪ್ರಿಯಕರ 8 ವರ್ಷದ ಬಳಿಕ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಬಿಜಾಪುರ ಮೂಲದ ಭಾಗ್ಯಶ್ರೀ(38) ಹಾಗೂ ಶಂಕರಪ್ಪ (42) ಬಂಧಿತ ಆರೋಪಿಗಳು. ಅಕ್ಕನ ಸಂಚಿಗೆ ಲಿಂಗರಾಜು (35) ಮೃತ ದುದೈವಿ. ರಾಯಚೂರಿನ ಕಾಲೇಜೊಂದರಲ್ಲಿ ಓದುತ್ತಿದ್ದ ಭಾಗ್ಯಶ್ರೀ ಆ ದಿನಗಳಲ್ಲೆ ಶಂಕರಪ್ಪ ತಳವಾರ ಎಂಬುವನೊಂದಿಗೆ ಸಲುಗೆ ಬೆಳೆಸಿಕೊಂಡಿದ್ದಳು. ಈ ವೇಳೆಗಾಗಲೇ ಶಂಕರಪ್ಪನಿಗೆ ಮದುವೆಯಾಗಿತ್ತಾದರೂ ಭಾಗ್ಯಶ್ರೀ ಮೋಹಕ್ಕೆ ಸಿಲುಕಿ ಪತ್ನಿ ತೊರೆದು ಈಕೆ ಸಹವಾಸಕ್ಕೆ ಬಿದ್ದಿದ್ದ. ಇವರಿಬ್ಬರು ರಾಯಚೂರು ತೊರೆದು ಆನೇಕಲ್ ತಾಲೂಕಿನ ಜಿಗಣಿಯಲ್ಲಿ ವಾಸ್ತವ್ಯ ಹೂಡಿದ್ದರು.
ಅಕ್ಕನನ್ನು ಕಾಣಲು ಬಂದ ತಮ್ಮ ಲಿಂಗರಾಜು ಇವರಿಬ್ಬರ ಸಂಬಂಧವನ್ನು ವಿರೋಧಿಸಿದ್ದ, ಇದೇ ವಿಷಯಕ್ಕೆ ಶಂಕರಪ್ಪನೊಂದಿಗೆ ಗಲಾಟೆ ಮಾಡಿಕೊಂಡಿದ್ದ. ಇದರಿಂದ ಭಾಗ್ಯಶ್ರೀ ಹಾಗೂ ಶಂಕರಪ್ಪ ಆಕ್ರೋಶಗೊಂಡಿದ್ದರು. ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ತಮ್ಮನನ್ನು ಕೊಲೆ ಮಾಡಲು ಸಂಚುರೂಪಿಸಿದ್ದರು.
ಲಿಂಗರಾಜು ದೇಹವನ್ನು ತುಂಡುತುಂಡಾಗಿ ಕತ್ತರಿಸಿದ ಹಂತಕರು ಕೈಕಾಲುಗಳನ್ನು ಹೋಟೆಲ್ವೊಂದರ ಹಿಂದೆ ಎಸೆದು ಉಳಿದ ದೇಹವನ್ನು ಮಂಚನಹಳ್ಳಿ ಕೆರೆಗೆ ಎಸೆದು ಮಹಾರಾಷ್ಟ್ರಕ್ಕೆ ಪರಾರಿಯಾಗಿದ್ದರು. ಆರೋಪಿಗಳ ಪತ್ತೆಯಾಗದ ಹಿನ್ನೆಲೆಯಲ್ಲಿ ಪ್ರಕರಣ ಮುಚ್ಚಿಹೋಗುವ ಹಂತದಲ್ಲಿತ್ತು. ಆನೇಕಲ್ ಠಾಣೆ ಪೊಲೀಸರ ತೀವ್ರ ತನಿಖೆಯಿಂದ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…