Latest

ಸವದತ್ತಿ ಯುವಕ ಫಯಾಜ್ ನಿಂದ ಹುಬ್ಬಳ್ಳಿಯ ಕಾರ್ಪೋರೇಟರ್ ಮಗಳ ಬರ್ಬರ ಹತ್ಯೆ!

ಹುಬ್ಬಳ್ಳಿಯ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳ ಮದ್ಯೆ ಪ್ರೀತಿಯ ಹಿನ್ನಲೆಯಲ್ಲಿ ಜಗಳಕ್ಕೆ ತಿರುಗಿದೆ ಈ ಪ್ರಕರಣದಲ್ಲಿ ಪ್ರೀತಿ ನಿರಾಕರಿಸಿದ್ದಕ್ಕೆ ಹುಬ್ಬಳ್ಳಿಯ ಕಾರ್ಪೊರೇಟರ್ ಮಗಳ ಬರ್ಬರ ಕೊಲೆ ಆಗಿದೆಯಾ ಎಂಬ ಅನುಮಾನ ವ್ಯಕ್ತವಾಗುತ್ತಿದೆ ಹಾಗೂ ಸ್ಥಳೀಯರ ಸಹಾಯದಿಂದ ಘಟನೆ ನಡೆದ ಕೆಲವೇ ಸಮಯದಲ್ಲಿ ಕೊಲೆ ಮಾಡಿ ಪರಾರಿಯಾಗುತ್ತಿದ್ದ ಆರೋಪಿ ಸವದತ್ತಿ ಮೂಲದ ಫಯಾಜ್ ಎಂಬ ಯುವಕನನ್ನು ಹುಬ್ಬಳ್ಳಿ ವಿದ್ಯಾನಗರ ಪೊಲೀಸರು ಬಂಧಿಸಿ ಹೆಚ್ಚಿನ ವಿಚಾರಣೆಯನ್ನು ಮಾಡುತ್ತಿದ್ದಾರೆ ಹುಬ್ಬಳ್ಳಿಯ ಬಿ,ವ್ಹಿ,ಭೂಮರೆಡ್ಡಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ನೇಹಾ ಹಿರೇಮಠ್ ಎಮ್ ಸಿ ಎ ವ್ಯಾಸಂಗ ಮಾಡುತ್ತಿದ್ದಳು, ಅದೇ ಕಾಲೇಜಿನಲ್ಲಿ ಸವದತ್ತಿ ಮೂಲದ ಫಯಾಜ್ ಬಿ ಸಿ ಎ ವ್ಯಾಸಂಗ ಮಾಡುತ್ತಿದ್ದ ಇಬ್ಬರೂ ಒಂದೇ ಕಾಲೇಜಿನಲ್ಲಿ ವಿದ್ಯಾರ್ಥಿಗಳಾಗಿದ್ದರು .
ಇದ್ದಕ್ಕಿದ್ದಂತೆ ಇಂದು ಸಾಯಂಕಾಲ ಬಿ ವ್ಹಿ ಭೂಮರೆಡ್ಡಿ ಇಂಜಿನಿಯರಿಂಗ್ ಕಾಲೇಜ್ ಆವರಣದಲ್ಲಿ ಫಯಾಜ್ ಒಮ್ಮೆಲೇ ನೇಹಾ ಹಿರೇಮಠ್ ಳ ಮೇಲೆ ಏಕಾಏಕಿ ದಾಳಿ ಮಾಡಿದ್ದು ನೇಹಾಳ ದೇಹದ ಮೇಲೆ ಸುಮಾರು ಒಂಬತ್ತು ಬಾರಿ ಚಾಕುವಿನಿಂದ ಬರ್ಬರವಾಗಿ ಇರಿದು ಕೊಲೆ ಮಾಡಿದ್ದಾನೆ.
ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿಯಾದ ಫಯಾಜ್ ಇತ್ತೀಚಿನ ದಿನಗಳಲ್ಲಿ ನೇಹಾಳಿಗೆ ನಾ ನಿನ್ನನ್ನ ಪ್ರೀತಿಸುತ್ತಿದ್ದೇನೆ ನೀನೂ ನನ್ನ ಪ್ರೀತಿಸು ಎಂದು ಬೆನ್ನು ಬಿದ್ದಿದ್ದ ಆದರೇ ನೇಹಾ ಇದೂ ಯಾವುದು ನನ್ನ ಮುಂದೆ ನಡಿಯಲ್ಲ ನೀನು ಬೇರೆ ಯಾರನ್ನಾದರೂ ನೋಡಿಕೋ ಎಂದು ಹೇಳಿ ವಿರೋಧಿಸಿದ್ದಳು ಈ ಪ್ರೀತಿಯ ಹಿನ್ನಲೆಯಲ್ಲಿ ಫಯಾಜ್ ನೇಹಾ ಳ ಕೊಲೆ ಮಾಡಿದ್ದಾನಾ ಎಂಬ ಶಂಕೆ ಬಂದಿರುತ್ತದೆ ಇನ್ನೂ ಹುಬ್ಬಳ್ಳಿಯ ಕಾರ್ಪೊರೇಟರ್ ನಿರಂಜನ್ ಹಿರೇಮಠ್ ಅವರ ಪುತ್ರಿ ನೇಹಾ ಹಿರೇಮಠ್ ಳ ಕೊಲೆ ಮಾಡಿ ಪರಾರಿಯಾಗುತ್ತಿದ್ದ ಫಯಾಜ್ ನನ್ನು ಹುಬ್ಬಳ್ಳಿಯ ವಿದ್ಯಾನಗರ ಪೊಲೀಸ್ ಠಾಣೆಯ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ವರದಿ: ಶಿವ ಹುಬ್ಬಳ್ಳಿ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago