Latest

2ನೇ ದಿನ ಕಬ್ಜ ಪ್ರದರ್ಶನಗಳ ಸಂಖ್ಯೆಯಲ್ಲಿ ಭಾರೀ ಏರಿಕೆ!

ಈ ವರ್ಷ ಬೆಂಗಳೂರಿನಲ್ಲಿ ಚಿತ್ರ ಬಿಡುಗಡೆಯಾದ ಎರಡನೇ ದಿನಕ್ಕೆ 600ಕ್ಕೂ ಹೆಚ್ಚು ಪ್ರದರ್ಶನ ಕಾಣುತ್ತಿರುವ ಮೊದಲನೆಯ ಚಿತ್ರ. ಮೊದಲ ದಿನ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡ ಕಬ್ಜ ಚಿತ್ರ ಬೆಂಗಳೂರು ನಗರದಲ್ಲಿ ಎರಡನೇ ದಿನ ತನ್ನ ಪ್ರದರ್ಶನಗಳ ಸಂಖ್ಯೆಯಲ್ಲಿ ಭಾರೀ ಏರಿಕೆ ಕಂಡಿದೆ. ಹೌದು, ಬಿಡುಗಡೆ ದಿನ ಪಡೆದುಕೊಂಡಿದ್ದ ಪ್ರದರ್ಶನಗಳ ಸಂಖ್ಯೆಗಿಂತ ಎರಡನೇ ದಿನ ಕಬ್ಜ ಚಿತ್ರ ಹೆಚ್ಚು ಪ್ರದರ್ಶನಗಳನ್ನು ಬೆಂಗಳೂರು ನಗರದಲ್ಲಿ ಪಡೆದುಕೊಂಡಿದೆ. ಮೊದಲ ದಿನ ಬೆಂಗಳೂರಿನಲ್ಲಿ 597 ಪ್ರದರ್ಶನಗಳನ್ನು ಪಡೆದುಕೊಂಡಿದ್ದ ಕಬ್ಜ ಚಿತ್ರ ಇಂದು ಎರಡನೇ ದಿನ 623 ಪ್ರದರ್ಶನಗಳನ್ನು ಪಡೆದುಕೊಂಡಿದೆ.
ಈ ರೀತಿ ಈ ವರ್ಷ ತೆರೆಕಂಡ ಯಾವ ಸಿನಿಮಾಗಳೂ ಸಹ ಬೆಂಗಳೂರಿನಲ್ಲಿ ಮೊದಲ ದಿನಕ್ಕಿಂತ ಎರಡನೇ ದಿನ ಹೆಚ್ಚಿನ ಪ್ರದರ್ಶನಗಳನ್ನು ಪಡೆದುಕೊಂಡಿರಲಿಲ್ಲ. ಮೊದಲ ದಿನ ದೊಡ್ಡ ಸಂಖ್ಯೆಯ ಪ್ರದರ್ಶನಗಳನ್ನು ಪಡೆದುಕೊಂಡಿದ್ದ ಚಿತ್ರಗಳು ಎರಡನೇ ದಿನ ಕಡಿಮೆ ಪ್ರದರ್ಶನಗಳನ್ನು ಪಡೆದುಕೊಂಡು ಶೋಗಳನ್ನು ಕಳೆದುಕೊಂಡಿದ್ದವು. ಈ ವರ್ಷ ತೆರೆಕಂಡ ಚಿತ್ರಗಳಲ್ಲಿ ಎರಡನೇ ದಿನ 600ಕ್ಕಿಂತ ಹೆಚ್ಚಿನ ಪ್ರದರ್ಶನಗಳನ್ನು ಬೆಂಗಳೂರಿನಲ್ಲಿ ಪಡೆದುಕೊಂಡ ಏಕೈಕ ಚಿತ್ರ ಎನಿಸಿಕೊಂಡಿದೆ ಕಬ್ಜ.

ಈ ವರ್ಷ ಬಿಡುಗಡೆಯಾದ ಚಿತ್ರಗಳು ಬೆಂಗಳೂರಿನಲ್ಲಿ ಮೊದಲ ದಿನ ಪಡೆದುಕೊಂಡ ಪ್ರದರ್ಶನಗಳ ಸಂಖ್ಯೆ ಈ ಕೆಳಕಂಡಂತಿದೆ..
ಪಠಾಣ್ – 821 ಪ್ರದರ್ಶನಗಳು
ವಾರಿಸು – 757 ಪ್ರದರ್ಶನಗಳು
ಕ್ರಾಂತಿ – 680 ಪ್ರದರ್ಶನಗಳು
ಕಬ್ಜ – 597 ಪ್ರದರ್ಶನಗಳು
ತುನಿವು – 568 ಪ್ರದರ್ಶನಗಳು

ಎರಡನೇ ದಿನ ಈ ಚಿತ್ರಗಳು ಪಡೆದುಕೊಂಡ ಶೋಗಳ ಸಂಖ್ಯೆ
ಪಠಾಣ್ – 563 ಪ್ರದರ್ಶನಗಳು
ವಾರಿಸು – 321 ಪ್ರದರ್ಶನಗಳು
ಕ್ರಾಂತಿ – 583 ಪ್ರದರ್ಶನಗಳು
ಕಬ್ಜ – 623 ಪ್ರದರ್ಶನಗಳು
ತುನಿವು – 300 ಪ್ರದರ್ಶನಗಳು

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago