ರಾಮನಗರ ಮೂಲದವರಾದ ಶಿವಪ್ಪ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕು ದರಸಗುಪ್ಪೆ ಗ್ರಾಮದಲ್ಲಿ ನೆಲೆಸಿದ್ದರು. ಚಾಮರಾಜನಗರ ಬೀದರ್ ರಾಷ್ಟ್ರೀಯ ಹೆದ್ದಾರಿ ಸಮೀಪವಿದ್ದ ತಮ್ಮ ಮನೆಯಲ್ಲಿಯೇ ಜೀವನೋಪಾಯಕ್ಕೆ ಸಣ್ಣ ಟೀ ಅಂಗಡಿ ಪ್ರಾರಂಭಿಸಿದರು. ಶುಚಿ ಮತ್ತು ರುಚಿಗೆ ಖ್ಯಾತರಾಗಿದ್ದ ಶಿವಪ್ಪ ಅವರ ಹೋಟೆಲ್ನಲ್ಲಿ ಟೀ ಕುಡಿಯಲು ಜನ ತಂಡ ತಂಡವಾಗಿ ಆಗಮಿಸುತ್ತಿದ್ದರು. ನಂತರ ಸಣ್ಣದಾಗಿ ಬೆಳಗಿನ ಉಪಹಾರ ಇಡ್ಲಿ ಮಾರಲು ಪ್ರಾರಂಭಿಸಿದರು. ನೋಡ ನೋಡುತ್ತಿದ್ದಂತೆಯೇ ಅವರ ಇಡ್ಲಿ ಬೆಣ್ಣೆ ಇಡ್ಲಿ ಎಂದೇ ಜನಪ್ರಿಯವಾಯಿತು. ಇವರು ಮಾಡುವ ಇಡ್ಲಿಗೆ ಜನರು ಗಂಟೆ ಗಟ್ಟಲೇ ಕಾಯುವಂತಾಯಿತು.
ಶ್ರೀರಂಗಪಟ್ಟಣ-ಬೀದರ್ ರಾಜ್ಯ ಹೆದ್ದಾರಿಯ ಪಕ್ಕದಲ್ಲಿರುವ ಈ ಪುಟ್ಟ ಹೋಟೆಲ್ ದಕ್ಷಿಣ ಭಾರತದಲ್ಲಿ ಹೆಸರು ವಾಸಿಯಾಗಿತ್ತು. ಹೋಟೆಲ್ ಗೆ ಮೈಸೂರು, ಮಂಡ್ಯ, ಬೆಂಗಳೂರು ಸೇರಿದಂತೆ ಹೊರ ಜಿಲ್ಲೆಯ ಪ್ರವಾಸಿಗರು ಇಡ್ಲಿ ತಿನ್ನಲು ಆಗಮಿಸುತ್ತಿದ್ದರು.
ನಟರಾದ ಪ್ರಕಾಶ್ ರೈ ಹಾಗೂ ಸಿಹಿಕಹಿ ಚಂದ್ರು ಅವರು ತಮ್ಮ ಕಾರ್ಯಕ್ರಮಕ್ಕಾಗಿ ಆಗಮಿಸಿ ಇವರ ಇಡ್ಲಿ ಸವಿದು ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಶಿವಪ್ಪ ಸ್ಕೂಟರ್ ನಲ್ಲಿ ರಾಮನಗರಕ್ಕೆ ಹೋಗುತ್ತಿದ್ದಾಗ ರಸ್ತೆ ಮಧ್ಯೆ ನಾಯಿ ಅಡ್ಡ ಬಂದು ಸ್ಕೂಟರ್ ನಿಂದ ಕೆಳಕ್ಕೆ ಬಿದ್ದು ಗಾಯಗೊಂಡಿದ್ದರು.
ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಿ ಚಿಕಿತ್ಸೆ ಕೊಡಿಸಿ ನಂತರ ಮನೆಗೆ ಕರೆತರಲಾಗಿತ್ತು.
ಗುರುವಾರ ಮಧ್ಯರಾತ್ರಿ ತೀವ್ರ ನೋವಿನಿಂದ ನರಳುತ್ತಿದ್ದ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯುವಾಗ ಮಾರ್ಗ ಮಧ್ಯೆ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಮೃತರು ಪತ್ನಿ, ಪುತ್ರ ಸೇರಿದಂತೆ ಸಾವಿರಾರು ಮಂದಿ ಇಡ್ಲಿ ಪ್ರಿಯರನ್ನು ಅಗಲಿದ್ದಾರೆ. ಶಿವಪ್ಪ ಅವರ ಅಂತ್ಯಕ್ರಿಯೆ ದರಸಗುಪ್ಪೆ ಗ್ರಾಮದ ಬಳಿ ನಡೆಯಲಿದೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…