ಹೈದರಾಬಾದ್: ಗ್ರೇಟರ್ ಹೈದರಾಬಾದ್ ಮುನಿಸಿಪಲ್ ಕಾರ್ಪೊರೇಶನ್ (GHMC) ಜಂಟಿ ಆಯುಕ್ತ ಜಾನಕಿರಾಮ್ ತಮ್ಮ ಪತ್ನಿಯೇ ರೆಡ್ ಹ್ಯಾಂಡ್ ಆಗಿ ಹಿಡಿದಿರುವ ಘಟನೆ ವರಸಿಗುಡದಲ್ಲಿ ನಡೆದಿದ್ದು, ಈ ಘಟನೆಯ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಅಕ್ರಮ ಸಂಬಂಧದ ಆರೋಪ
ಜಾನಕಿರಾಮ್ ಅವರ ಪತ್ನಿ ಕಲ್ಯಾಣಿ, ಪತಿ ಅನ್ಯಾಯ ಸಂಬಂಧ ಹೊಂದಿದ್ದಾರೆ ಎಂಬ ಅನುಮಾನದಲ್ಲಿ ಕೆಲವು ದಿನಗಳಿಂದ ಅವರ ಚಲನಚಲನಗಳನ್ನು ಗಮನಿಸುತ್ತಿದ್ದರು. ಜಾನಕಿರಾಮ್ ತನ್ನ ಪತ್ನಿಯನ್ನೂ ಕುಟುಂಬವನ್ನೂ ಕಡೆಗಣಿಸಿ, 20 ವರ್ಷದ ಯುವತಿಯೊಂದಿಗೆ ವಾರಸಿಗುಡದಲ್ಲಿ ವಾಸಿಸುತ್ತಿದ್ದಾರೆ ಎಂಬ ಮಾಹಿತಿ ಕಲ್ಯಾಣಿಗೆ ದೊರಕಿತು.
ಪತ್ನಿಯಿಂದ ಪತಿ ಮೇಲೆ ದಾಳಿ
ಸತ್ಯಾಸತ್ಯತೆ ಖಚಿತಪಡಿಸಿಕೊಳ್ಳಲು ಕಲ್ಯಾಣಿ ಇಂದು ಜಾನಕಿರಾಮ್ ವಾಸಿಸುತ್ತಿದ್ದ ಸ್ಥಳಕ್ಕೆ ಕುಟುಂಬಸ್ಥರೊಂದಿಗೆ ದಿಢೀರ್ ದಾಳಿ ಮಾಡಿದರು. ಅಲ್ಲಿ ಪತಿಯನ್ನು ಯುವತಿಯೊಂದಿಗೆ ಇದ್ದುದನ್ನು ಕಂಡ ಪತ್ನಿ ಭಾವುಕರಾಗಿ ರೋಷೋದ್ಗಾರ ವ್ಯಕ್ತಪಡಿಸಿದರು. ಪತ್ನಿ ಹಾಗೂ ಆಕೆಯ ಕುಟುಂಬಸ್ಥರು ಜಾನಕಿರಾಮ್ ಮತ್ತು ಯುವತಿಗೆ ಗೂಸಾ ನೀಡಿ ಆಕ್ರೋಶ ವ್ಯಕ್ತಪಡಿಸಿದ ಘಟನೆ ನಡು ರಸ್ತೆಯಲ್ಲಿ ನಡೆದಿದ್ದು, ಜನತೆಯ ಕಣ್ಣಾರೆ ನಡೆಯಿತು.
ಪೊಲೀಸರು ಸ್ಥಳಕ್ಕೆ ಧಾವನೆ
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ವರಸಿಗುಡ ಪೊಲೀಸರು ಸ್ಥಳಕ್ಕೆ ಧಾವಿಸಿ, ಜಾನಕಿರಾಮ್ ಹಾಗೂ ಯುವತಿಯನ್ನು ವಶಕ್ಕೆ ಪಡೆದು ವಿಚಾರಣೆ ಮುಂದುವರಿಸಿದ್ದಾರೆ. ಈ ಘಟನೆಗೆ ಸಂಬಂಧಿಸಿದಂತೆ ಜಾನಕಿರಾಮ್ ಪತ್ನಿ ಏನಾದರೂ ಅಧಿಕೃತ ದೂರು ನೀಡಿದ್ದಾರಾ ಎಂಬುದರ ಕುರಿತು ಪೊಲೀಸರು ಮಾಹಿತಿ ನೀಡಿಲ್ಲ.
ಸದ್ಯ ಈ ಪ್ರಕರಣದ ತನಿಖೆ ಮುಂದುವರಿದಿದ್ದು, ಜಾನಕಿರಾಮ್ ವಿರುದ್ಧ ಯಾವುದೇ ಕಾನೂನು ಕ್ರಮ ಕೈಗೊಳ್ಳಲಾಗುತ್ತಾ ಎಂಬುದನ್ನು ನೋಡಬೇಕಾಗಿದೆ.
ಚಿತ್ರದುರ್ಗದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ ವಾಹನ ಪಾರ್ಕಿಂಗ್ ವಿಚಾರವಾಗಿ ನಡೆದ ಘಟನೆ ಪರಸ್ಪರ ವಾಗ್ವಾದಕ್ಕೆ ಕಾರಣವಾಯಿತು. ಪೊಲೀಸ್…
ಶಿರಸಿ-ಶಿರಸಿಯಿಂದ ಬೆಂಗಳೂರಿಗೆ ಹೋಗುತ್ತಿದ್ದ ಬಸ್ಸಿನಲ್ಲಿ ಕೊಲೆ ನಡೆದಿದೆ. ಪ್ರಯಾಣಿಕರಿಬ್ಬರ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಶನಿವಾರ ಸಂಜೆ ಅಂಕೋಲಾದಿoದ…
ಬೆಂಗಳೂರು: ಲೋಕಾಯುಕ್ತ ಡಿವೈಎಸ್ಪಿ Basavaraju R. Magadam ಹೆಸರಿನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ಬ್ಲ್ಯಾಕ್ಮೇಲ್ ಮಾಡಿ ಹಣ ಸುಲಿಗೆ ಮಾಡುತ್ತಿದ್ದ ವ್ಯಕ್ತಿಯನ್ನು…
ಬೆಳಗಾವಿಯಲ್ಲಿ KSRTC ಕಂಡಕ್ಟರ್ ಮಹದೇವ್ ಅವರು ಕನ್ನಡ ಮಾತನಾಡಿದಕ್ಕಾಗಿ ಮರಾಠಿ ಗುಂಪಿನಿಂದ ಹಲ್ಲೆಗೊಳಗಾದ ಘಟನೆಗೆ ರಾಜ್ಯದಾದ್ಯಂತ ಕನ್ನಡಿಗರು ಭಾರಿ ಆಕ್ರೋಶ…
ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯಲ್ಲಿ ಅತ್ತೆ-ಸೊಸೆ ನಡುವಿನ ವೈಮನಸ್ಸು ಉಲ್ಬಣಗೊಂಡು ಕೋರ್ಟ್ ಆವರಣದಲ್ಲಿ ಹೊಡೆದಾಡಿದ ಘಟನೆ ಬೆಳಕಿಗೆ ಬಂದಿದೆ. ಈ ಘಟನೆ…
ಬೆಳಗಾವಿಯಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಕಂಡಕ್ಟರ್ ಮಹಾದೇವಪ್ಪ ಹುಕ್ಕೇರಿ ಮೇಲೆ ಮರಾಠಿ ಗೂಂಡಾಗಿರಿ ನಡೆದ ಘಟನೆ ಹೊಸ ತಿರುವು ಪಡೆದುಕೊಂಡಿದೆ. ಹಿಂದಿನ…