Latest

ಉಗ್ರರ ಜೊತೆ ಕಾದಾಟದಲ್ಲಿ ಗಾಯಗೊಂಡಿದ್ದ ಭಾರತೀಯ ಸೇನೆಯ ಶ್ವಾನ ‘ಜೂಮ್’ ಸಾವು

ಶ್ರೀನಗರ: ಉಗ್ರರ ವಿರುದ್ದದ ಹೋರಾಟದಲ್ಲಿ ಗಾಯಗೊಂಡು ಸಾವು ಬದುಕಿನ ನಡುವೆ ಹೋರಾಟ ನಡೆಸಿದ ಭಾರತೀಯ ಸೇನೆಯ ಶ್ವಾನ ಜೂಮ್ ಗುರುವಾರ ಸಾವನ್ನಪ್ಪಿದೆ.
ಎರಡು ಬಾರಿ ಉಗ್ರರಿಂದ ಗುಂಡೇಟು ತಿಂದಿದ್ದ ಈ ಶ್ವಾನವನ್ನು ಶ್ರೀನಗರದ ಸಶಸ್ತ್ರ ಪಡೆಗಳ ಪಶು ವೈದ್ಯಕೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮುಖ ಮತ್ತು ಹಿಂಭಾಗದ ಬಲಗಾಲಿನ ಮೇಲೆ ಗುಂಡಿನ ಗಾಯವಾಗಿದ್ದ ಕಾರಣ ಅದಕ್ಕೆ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು.
ಚಿಕಿತ್ಸೆ ಪಡೆಯುತ್ತಿದ್ದ ನಮ್ಮ ಸೇನೆಯ ಶ್ವಾನ ಇಂದು ಮಧ್ಯಾಹ್ನ 12 ಗಂಟೆ ಸುಮಾರಿನಲ್ಲಿ ಸಾವನ್ನಪ್ಪಿದೆ. ಬೆಳಗ್ಗೆ 11-45ರವರೆಗೂ ನೋಡಲು ಚೆನ್ನಾಗಿದ್ದ, ಸ್ಪಂದಿಸುತ್ತಿದ್ದ ಶ್ವಾನ, ಇದಕ್ಕಿದ್ದಂತೆ ಏದುಸಿರು ಬಿಡುತ್ತಾ, ಕೆಳಗೆ ಬಿದ್ದಿತು ಎಂದು ಸೇನಾಧಿಕಾರಿಯೊಬ್ಬರು ತಿಳಿಸಿದ್ದಾರೆ.
ಉಗ್ರರು ಅಡಗಿರುವ ಮನೆಯಿಂದ ಆ ಉಗ್ರರನ್ನು ಹೊರಗೆ ಕರೆತರುವ ಕೆಲಸವನ್ನು ಜೂಮ್ ನಾಯಿಗೆ ವಹಿಸಲಾಗಿತ್ತು. ಆ ನಾಯಿ ಮನೆಯೊಳಗೆ ಹೋಗಿ ಉಗ್ರರ ಮೇಲೆ ದಾಳಿ ಮಾಡಿತ್ತು. ಈ ಕಾರ್ಯಾಚರಣೆಯ ಸಮಯದಲ್ಲಿ ಆ ನಾಯಿಯ ಮೇಲೆ ಎರಡು ಬಾರಿ ಗುಂಡಿನ ದಾಳಿ ನಡೆಸಿದ್ದರಿಂದ ನಾಯಿಗೆ ಗಂಭೀರವಾದ ಗಾಯವಾಗಿತ್ತು. ಗುಂಡಿನ ದಾಳಿಯಲ್ಲಿ ಗಾಯಗೊಂಡಿದ್ದರೂ ಹೆದರದ ಈ ನಾಯಿ ತನ್ನ ಕಾರ್ಯವನ್ನು ಮುಂದುವರೆಸಿತು. ಅಲ್ಲದೆ ಇಬ್ಬರು ಭಯೋತ್ಪಾದಕರ ಹತ್ಯೆಗೂ ಕಾರಣವಾಗಿತ್ತು. ಜೂಮ್ ನಿಧನಕ್ಕೆ ಸೇನೆಯ ಉತ್ತರ ಕಮಾಂಡೋ ತೀವ್ರ ಸಂತಾಪ ಸೂಚಿಸಿದೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

4 weeks ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago