Crime

ತಪ್ಪಿಸಿಕೊಳ್ಳಲು ಪ್ರಯತ್ನಿಸಿದ ದರೋಡೆಕೋರನ ಮೇಲೆ ಫೈರಿಂಗ್ ಮಾಡಿದ ಇನ್ಸಪೆಕ್ಟರ್ ಕವಿತಾ.

ಇತ್ತೀಚಿನ ಕೆಲವು ದಿನಗಳ ಹಿಂದೆ ಹುಬ್ಬಳ್ಳಿಯ ಕೇಶ್ವಾಪೂರ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಭುವನೇಶ್ವರಿ ಜ್ಯೂವೆಲರಿ ಶಾಪ್ ನಲ್ಲಿ ಅಂದಾಜು ಒಂದು ಕೋಟಿಗಿಂತ ಬೆಲೆ ಬಾಳುವ ಬಂಗಾರ ಮತ್ತು ಬೆಳ್ಳಿ ಆಭರಣ ಕಳ್ಳತನವಾಗಿತ್ತು. ಈ ವಿಚಾರಕ್ಕೆ ಸಂಬಂಧಿಸಿದಂತೆ ಬೇರೆ ರಾಜ್ಯಗಳಲ್ಲಿಯೂ ಹೀಗೆ ದರೋಡೆ ಮಾಡುತ್ತಿದ್ದ ದರೋಡೆಕೋರನಾದ ಹೈದರಾಬಾದ್ ನಿವಾಸಿ ಫರ್ಹಾನ್ ಶೇಖ್ ಎಂಬ ವ್ಯಕ್ತಿಯನ್ನು ಕೇಶ್ವಾಪೂರ್ ಪೊಲೀಸ್ ಠಾಣೆಯ ಪೊಲೀಸ್ ಅಧಿಕಾರಿಗಳು

ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕಳ್ಳತನ ಪ್ರಕರಣದ ಅಂತರ್ಜಾ ಆರೋಪಿಯನ್ನು ಬಂಧಿಸಿರುವಂತಹ ಪೊಲೀಸರು ಉಳಿದಂತೆ ಇತರೆ ಆರೋಪಿಗಳನ್ನು ಬಂಧನ ಮಾಡಲು ಈ ವ್ಯಕ್ತಿಯನ್ನು ಕರೆದುಕೊಂಡು ಹೋಗುವ ಸಂದರ್ಭದಲ್ಲಿ ತಾರಿಹಾಳ ಹಾಳ ಬ್ರಿಜ್ ಬಳಿ ಹೋಗುತ್ತಿದ್ದಂತೆ ಫರ್ಹಾನ್ ಶೇಕ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಿದಾಗ ಪೊಲೀಸ್ ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಮೂವರು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ್ದು ಕೂಡಲೇ ಕೇಶ್ವಾಪೂರ್ ಪೊಲೀಸ್ ಠಾಣೆಯ ಪೊಲೀಸ್ ಇನ್ಸಪೆಕ್ಟರ್ ಕವಿತಾ ಮಾಡಗ್ಯಾಳ ಎರಡು ಸುತ್ತು ಗುಂಡು ಹಾರಿಸಿ ಫರ್ಹಾನ್ ಶೇಕ್ ನ ಕಾಲಿಗೆ ಶೂಟ್ ಔಟ್ ಮಾಡಿದ್ದಾರೆ.
ಕವಿತಾ ಶೂಟ್ ಔಟ್ ಮಾಡಿದ ಗುಂಡು ದರೋಡೆಕೋರನ ಕಾಲಿಗೆ ಬಿದ್ದಿದ್ದು ಕೂಡಲೇ ಈತನನ್ನು ಬಂಧಿಸಿದ್ದಾರೆ, ಈ ಶೂಟೌಟ್ ಪ್ರಕರಣ ಹುಬ್ಬಳ್ಳಿಯ ಗಾಮನಗಟ್ಟಿ ಹೋರವಲಯದಲ್ಲಿ ನಡೆದಿದೆ.

ಇಲ್ಲಿ ಬಂದಿತನಾದ ದರೋಡೆಕೋರ ಫರ್ಹಾನ್ ಶೇಕ್ ಹೈದರಾಬಾದ್ ಮೂಲದವನಾಗಿದ್ದು ವಿವಿಧ ರಾಜ್ಯದ ಪೊಲೀಸರಿಗೆ ಬೇಕಾಗಿರುವ ಅಂತರ್ ರಾಜ್ಯ ಕುಖ್ಯಾತ ದರೋಡೆಕೋರ ಇವನು ಎಂಬ ಸಂಶಯ ವ್ಯಕ್ತವಾಗಿದೆ. ಈ ಕಾರ್ಯಚರಣೆಯಲ್ಲಿ ಕೇಶ್ವಾಪೂರ್ ಪೊಲೀಸ್ ಠಾಣೆಯ ಪೋಲಿಸ್ ಇನ್ಸಪೆಕ್ಟರ್ ಕವಿತಾ ಹಾಗೂ ಪೋಲಿಸ್ ಪೇದೆಗಳಾದ ಮಹೇಶ್ ಮತ್ತು ಸುಜಾತ ಎಂಬ ಮೂವರಿಗೆ ಗಾಯಗಳಾಗಿದ್ದು ಸದ್ಯ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.

ವರದಿ: ಶಿವು ಹುಬ್ಬಳ್ಳಿ
kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago