Latest

ಮಹಿಳೆಯರಲ್ಲಿ ಕಬ್ಬಿಣಾಂಶ, ಪ್ರೋಟಿನ್ ಹಾಗೂ ವಿಟಮಿನ್ ಡಿ ಕೊರತೆ:-ವೈದ್ಯೆ ಡಾ|| ಜ್ಯೋತಿ ಲಕ್ಷ್ಮೀ ಪಾಟೀಲ್

ಆಲಮಟ್ಟಿ: ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ, ಮಗು ಹುಟ್ಟಿದಾಗ ಅದರ ಆರೈಕೆಯಿಂದಲೇ ಮಗುವಿನ ಮುಂದಿನ ಆರೋಗ್ಯಕರ ಭವಿಷ್ಯ ನಿರ್ಮಾಣವಾಗುತ್ತದೆ, ಹೀಗಾಗಿ ಮಗುವಿಗೆ ತಾಯಿ ಹಾಲು ಕುಡಿಸುವುದು ಅತಿ ಅಗತ್ಯ ಎಂದು ಶಿವಮೊಗ್ಗದ ವೈದ್ಯೆ ಡಾ ಜ್ಯೋತಿಲಕ್ಷ್ಮಿ ಪಾಟೀಲ ಹೇಳಿದರು.

ಆಲಮಟ್ಟಿಯ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕೆಬಿಜೆಎನ್ ಎಲ್ ಸಹಯೋಗದಲ್ಲಿ ಶುಕ್ರವಾರ 21/03/2025 ಜರುಗಿದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಹುಟ್ಟಿದ ಮಗುವಿನ ಆರೈಕೆ ಅತ್ಯಗತ್ಯ. ಕುಟುಂಬದ ಆರೋಗ್ಯ ರಕ್ಷಣೆಗೆ ಆರೋಗ್ಯಕರ ಆಹಾರ ಸೇವಿಸುವುದು ಅಗತ್ಯ, ಅದಕ್ಕಾಗಿ ನೈಸರ್ಗಿಕ ಆಹಾರ,  ಸಿರಿಧಾನ್ಯಗಳ ಬಳಕೆ, ಹಣ್ಣುಗಳಿಗೆ ಹೆಚ್ಚು ಒತ್ತು ನೀಡಿದರೆ ಇಡೀ ಕುಟುಂಬದ ಆರೋಗ್ಯವೂ ಸುಧಾರಣೆಯಾಗುತ್ತದೆ ಎಂದರು. ಅದಕ್ಕಾಗಿ ನೈಸರ್ಗಿಕ ವಸ್ತುಗಳ ಬಳಕೆ ಮಾಡುವ ಹಾಗೂ ನಾನಾ ಅಡುಗೆ ತಿಂಡಿಗಳನ್ನು ಪ್ರಸ್ತಾಪಿಸಿದ್ದು, ಮಹಿಳೆಯರು ಆರೋಗ್ಯ ಕಾಪಾಡಿಕೊಳ್ಳುವುದು ಅಗತ್ಯ ಎಂದರು. ಮಹಿಳೆಯರಲ್ಲಿ ಕಬ್ಬಿಣಾಂಶ,  ಪ್ರೊಟಿನ್ ಹಾಗೂ ವಿಟಮಿನ್ ಡಿ ಕೊರತೆ ಹೆಚ್ಚಾಗಿ ಕಾಣುತ್ತಿದೆ, ಇದರಿಂದ ಮೂಳೆ ಸವೆತ ರೋಗ, ರಕ್ತಹೀನತೆ ಕಾಯಿಲೆ ಹೆಚ್ಚುತ್ತಿದೆ ಎಂದರು.  ಮಹಿಳೆಯರ ಆರೋಗ್ಯದ ವಿಚಾರ ಹಾಗೂ ದಿನಚರಿಗೆ ಸಂಬಂಧಪಟ್ಟಂತೆ ಹಲವು ಸಲಹೆಗಳನ್ನು ಸಹ ಕಾರ್ಯಕ್ರಮದಲ್ಲಿ ಹೇಳಿರುತ್ತಾರೆ.

ಮುಖ್ಯ ಎಂಜಿನಿಯ‌ರ್ ಡಿ.ಬಸವರಾಜ ಕಾರ್ಯಕ್ರಮ ಉದ್ಘಾಟಿಸಿದರೇ,  ನೌಕರರ ಸಂಘದ ಅಧ್ಯಕ್ಷ ಎಸ್.ಬಿ. ದಳವಾಯಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಸಹನಾ ಬಸವರಾಜ, ಸುವರ್ಣಾ ಹಿರೇಗೌಡರ, ಪುಷ್ಪಾ ರಾಠೋಡ, ಉಷಾ ಗುಂಡ, ಮಹೇಶ್ವರಿ ಪಾಟೀಲ, ಡಾ.ರಾಜೇಶ್ವರಿ ಹದ್ದಿ, ಕೋಮಲ ನಾಯಕ್, ವಿಜಯಲಕ್ಷ್ಮಿ ರೆಡ್ಡಿ, ಬಸವರಾಜ ಬನ್ನೂರ, ವೈ. ಎಂ.ಪಾತ್ರೋಟ, ಶ್ರೀರಕ್ಷಾ, ಮಹಾಂತೇಶ ಒಡೆಯರ ಮತ್ತೀತರರು ಭಾಗಿಯಾಗಿದ್ದರು. ವರದಿ: ಸಂಗಪ್ಪ ಚಲವಾದಿ

nazeer ahamad

Recent Posts

ಆರೋಪಿ ನಯಾಜ್‌ಗೆ ಠಾಣೆಯ ಸೆಲ್‌ನಲ್ಲಿ ಮೊಬೈಲ್: ಪೊಲೀಸ್ ಕಾನ್‌ಸ್ಟೆಬಲ್‌ ವರ್ಗಾವಣೆ

ಹಾವೇರಿ: ಶುಶ್ರೂಷಕಿ ಸ್ವಾತಿ ಬ್ಯಾಡಗಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಯಾಜ್ ಇಮಾಮ್‌ಸಾಬ್ ಬೆಣ್ಣೆಗೇರಿಗೆ ಪೊಲೀಸ್ ಠಾಣೆಯ ಸೆಲ್‌ನಲ್ಲಿ ಅನಧಿಕೃತವಾಗಿ…

4 hours ago

ಕೊಡಗಿನಲ್ಲಿ ಬೆಚ್ಚಿಬೀಳಿಸುವ ಘಟನೆ: ಕಾಫಿ ತೋಟದ ಮನೆಯಲ್ಲಿ ನಾಲ್ವರ ಬರ್ಬರ ಹತ್ಯೆ

ಕೊಡಗು: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಕೊಳತೋಡು ಗ್ರಾಮದಲ್ಲಿ ರಕ್ತಸಿಕ್ತ ಘಟನೆ ನಡೆದಿದ್ದು, ಕಾಫಿ ತೋಟದ ಲೈನ್ ಮನೆಯಲ್ಲಿ ನಾಲ್ವರನ್ನು…

6 hours ago

ಜಾಲೋರ್‌ನಲ್ಲಿ ಮಹಿಳೆಯೊಂದಿಗೆ ಅಶ್ಲೀಲ ಸ್ಥಿತಿಯಲ್ಲಿ ಸಿಕ್ಕಿಬಿದ್ದ ಪೊಲೀಸ್ ಕಾನ್‌ಸ್ಟೆಬಲ್!

ಜಾಲೋರ್, ಮಾರ್ಚ್ 28: ಜಾಲೋರ್ ಜಿಲ್ಲೆಯ ಸರ್ವಾನಾ ಪೊಲೀಸ್ ಠಾಣೆಯ ಕಾನ್‌ಸ್ಟೆಬಲ್ ಹನುಮಾನರಾಮ್ ಮಹಿಳೆಯೊಂದಿಗಿನ ಅಶ್ಲೀಲ ವಿಡಿಯೋ ವೈರಲ್ ಆದ…

6 hours ago

ಚಿಟ್‌ ಫಂಡ್ ವಂಚನೆ: ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಸೇರಿದಂತೆ 15 ಜನರ ವಿರುದ್ಧ ಪ್ರಕರಣ

ಉತ್ತರ ಪ್ರದೇಶದ ಮಹೋಬಾ ಜಿಲ್ಲೆಯಲ್ಲಿ ಬಹುಮಟ್ಟದ ವಂಚನೆ ಪ್ರಕರಣ ಬೆಳಕಿಗೆ ಬಂದಿದ್ದು, ಬಾಲಿವುಡ್ ನಟ ಶ್ರೇಯಸ್ ತಲ್ಪಾಡೆ ಸೇರಿದಂತೆ 15…

8 hours ago

ಕ್ರೈಸ್ತ ವಿದ್ಯಾರ್ಥಿನಿಯ ಅಪಹರಣ ಆರೋಪ – ಮೊಹಮ್ಮದ್ ಅಕ್ರಮ್ ವಿರುದ್ಧ ಗಂಭೀರ ಆರೋಪ

ಉಡುಪಿಯಲ್ಲಿ ವಿದ್ಯಾರ್ಥಿನಿಯೊಬ್ಬಳ ಅಪಹರಣ ಸಂಬಂಧ ಗಂಭೀರ ಆರೋಪಗಳು ಎದುರಾಗಿದ್ದು, ಮೊಹಮ್ಮದ್ ಅಕ್ರಮ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಅಪಹೃತೆಯ ತಂದೆ…

9 hours ago

ಆಂಧ್ರಪ್ರದೇಶದಲ್ಲಿ ಹಕ್ಕಿ ಜ್ವರ ತೀವ್ರತೆ: 6 ಲಕ್ಷಕ್ಕೂ ಹೆಚ್ಚು ಕೋಳಿಗಳ ಸಾವಿಗೆ ಕಾರಣ

ಆಂಧ್ರಪ್ರದೇಶದ ಪೂರ್ವ ಭಾಗದಲ್ಲಿ ಹಕ್ಕಿ ಜ್ವರ (H5N1) ಸೋಂಕಿನ ಏಕಾಏಕಿ ದೃಢೀಕರಣದಿಂದ ರಾಜ್ಯದ ಕೋಳಿ ಪಂಗಡಕ್ಕೆ ದೊಡ್ಡ ಹೊಡೆತವಾಗಿದೆ. ಭಾರತೀಯ…

10 hours ago