Latest

ರಸ್ತೆ ಸರಿಪಡಿಸಲು ಕ್ರಮ ಕೈಗೊಳ್ಳದ ಬೇಜವಬ್ದಾರಿ ಅಧಿಕಾರಿಗಳು

ಹಗರಿಗಜಾಪುರದಿಂದ ಕೊಟ್ಟೂರು ಪಟ್ಟಣಕ್ಕೆ ಸಂಪರ್ಕಿಸುವ ರಸ್ತೆಯು ಸಂಪೂರ್ಣ ಹದಗೆಟ್ಟಿದ್ದು ಇದನ್ನು ಸರಿಪಡಿಸಬೇಕಾದ ಸಂಬಂಧ ಪಟ್ಟ ಅಧಿಕಾರಿಗಳು ನಮಗೆ ಏನು ಗೊತ್ತೇ ಇಲ್ಲ ಅನ್ನುವ ತರ ಇದ್ದಾರೆ.
ಕೊಟ್ಟುರಿನಿಂದ ಕೇವಲ ನಾಲ್ಕು ಕಿಲೋಮೀಟರ್ ಅಂತರವಿರುವ ಹಗರಿಗಜಾಪುರ ತಲುಪಲು ಅರ್ಧ ಘಂಟೆ ಸಮಯ ತೆಗೆದುಕೊಳ್ಳುತ್ತಿದೆ. ಹದಗೆಟ್ಟಿರುವ ರಸ್ತೆಯಲ್ಲಿ ಎಷ್ಟೋ ಜನರು ಬಿದ್ದು ಗಾಯಗೊಂಡಿರುವ ಉದಾಹರಣೆಗಳು ಇದಾವೆ. ರಸ್ತೆ ಎಲ್ಲಾ ತಿಪ್ಪೆಗುಂಡಿಗಳಾಗಿ ಮಾರ್ಪಟ್ಟಿದೆ. ರಸ್ತೆಯ ಅಕ್ಕ ಪಕ್ಕ ಎಲ್ಲಿ ನೋಡಿದರೂ ಕಸದ ರಾಶಿಯೇ ಕಾಣಿಸುತ್ತದೆ. ಕಸದಿಂದಲೆ ಅರ್ಧ ರಸ್ತೆಯು ಮುಚ್ಚಿಕೊಂಡು ಸಾರ್ವಜನಿಕರು ಓಡಾಡಲು ಹರಸಾಹಸ ಪಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಇಷ್ಟೆಲ್ಲ ಕಣ್ಣಿಗೆ ಕಾಣುತ್ತಿದ್ದರು ಎಚ್ಚೆತ್ತುಕೊಳ್ಳದ ಅಧಿಕಾರಿಗಳು ತಮ್ಮ ಬೇಜವಾಬ್ದಾರಿತನವನ್ನು ತೋರುತ್ತಿದ್ದಾರೆ.
ಈ ರಸ್ತೆಯು ಪ್ರಮುಖವಾಗಿ ಪಟ್ಟಣದಿಂದ ರೈಲ್ವೇ ಸ್ಟೇಷನನ್ನು ಸಂಪರ್ಕಿಸುತ್ತದೆ. ಈ ರಸ್ತೆಯಲ್ಲಿ ದಿನಾಲೂ ನೂರಾರು ಜನರು ಸಂಚರಿಸುತ್ತಾರೆ, ರಸ್ತೆ ಸರಿಯಿಲ್ಲದ ಕಾರಣ ಪ್ರಯಾಣದ ಸಮಯ ಹೆಚ್ಚುವುದು ಮಾತ್ರವಲ್ಲದೆ ರಸ್ತೆಯಲ್ಲಿ ಸಂಚರಿಸುವವರು ಸಂಚರಿಸಲು ಅರಸಹಸ ಪಡುವಂಥಾಗಿದೆ.
ಸಾಕಷ್ಟು ತಿಂಗಳುಗಳಿಂದ ಈ ರಸ್ತೆ ಹದಗೆಟ್ಟಿದೆ ಎಂಬುದನ್ನು ರಸ್ತೆ ನೋಡಿದರೆ ತಿಳಿಯಬಹುದು.
ಸ್ಥಳೀಯ ಜನಪ್ರತಿನಿಧಿಗಳು ಸಹ ಈ ವಿಚಾರದ ಬಗ್ಗೆ ಗಮನ ಹರಿಸದಿರುವುದು ಬೇಸರದ ಸಂಗತಿ. ಜನರಿಗೆ ಸಂಚರಿಸಲು ಸರಿಯಾದ ರೀತಿಯ ರಸ್ತೆಯನ್ನೇ ಮಾಡಿಕೊಡದ ಜನಪ್ರತಿನಿಧಿಗಳು ಇನ್ಯಾವ ರೀತಿ ತಾಲೂಕನ್ನು ಅಭಿವೃದ್ಧಿಪಡಿಸುತ್ತಾರೋ?
ನೂರಾರು ಜನರು ಸಂಚರಿಸುವ ಪ್ರಮುಖ ರಸ್ತೆ ಅಭಿವೃದ್ಧಿಗೆ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಒತ್ತು ಕೊಡದೆ ಇರುವುದು ಸ್ಥಳೀಯ ಜನರ ಆಕಾಶಕ್ಕೆ ಕಾರಣವಾಗಿದೆ.
ಪ್ರಮುಖ ರಸ್ತೆಯಾಗಿರುವುದರಿಂದ ಸಾರ್ವಜನಿಕರು ಓಡಾಡಲು ಹೆಚ್ಚಾಗಿ ರಸ್ತೆಯನ್ನು ಬಳಸುತ್ತಿದ್ದು ಶೀಘ್ರದಲ್ಲೇ ರಸ್ತೆಯನ್ನು ಸರಿಪಡಿಸಬೇಕಿದೆ.

ವರದಿ:- ಮಣಿಕಂಠ. ಬಿ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago