Corruption

ನಾಯನೇಗಲಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಕಳಪೆ ಕಾಮಗಾರಿ.

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲೂಕಿನ ನಾಯನೇಗಲಿ ಗ್ರಾಮದಲ್ಲಿ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿ ತೀರಾ ಕಳಪೆ ಮಟ್ಟದಲ್ಲಿ ನಡೆಯುತ್ತಿದೆ.
ರಸ್ತೆ ಬದಿಯಲ್ಲಿ ಅಗೆದು ಪೈಪುಗಳನ್ನು ಹಾಕಿದ್ದಾರೆ ಆದರೆ ಅಗೆದ ನೆಲವನ್ನು ಸರಿಯಾಗಿ ಮುಚ್ಚದೆ ಕಾಟಾಚಾರಕ್ಕೆ ಮುಚ್ಚಿದ್ದಾರೆ. ಇದರಿಂದ ವಾಹನ ಸಂಚಾರಕ್ಕೆ ಬಹಳ ತೊಂದರೆಯಾಗುತ್ತಿದೆ. ಸಾಕಷ್ಟು ವಾಹನಗಳು ಇದರಲ್ಲಿ ಸಿಲುಕಿಕೊಂಡು ಒದ್ದಾಡಿವೆ. ಅಷ್ಟೇ ಅಲ್ಲದೆ ಲಾರಿ ಸಿಲುಕಿ ಈ ಮುಂಚೆ ಹಾಕಿರುವ ಪೈಪುಗಳು ಕೂಡ ಒಡೆದು ಹೋಗಿ ನೀರು ರಸ್ತೆಗೆ ಬರುತ್ತಿದೆ. ಆದರೂ ಸಹ ಯಾವೊಬ್ಬ ಅಧಿಕಾರಿಯೂ ಇತ್ತ ಕಡೆ ಗಮನ ಹರಿಸಿಲ್ಲ. ಸಣ್ಣ ಪ್ರಮಾಣದ ವಾಹನಗಳು ಇದರಲ್ಲಿ ಸಿಲುಕಿಕೊಂಡು ನಂತರ ಟ್ರ್ಯಾಕ್ಟರ್ ಗಳಿಂದ ಅವುಗಳನ್ನು ತೆಗೆಯುವಂತಹ ಪ್ರಯತ್ನಗಳು ಕೂಡ ಸಾಕಷ್ಟಾಗಿವೆ.
ಕೆಲವೊಂದು ಕಡೆ ನಳಗಳನ್ನು ಸರಿಯಾಗಿ ಜೋಡಿಸದೆ ಕಳಪೆ ಕಾಮಗಾರಿ ಮಾಡುತ್ತಿದ್ದಾರೆ. ತಮಗೆ ಇಷ್ಟ ಬಂದಂತೆ ನಳಗಳನ್ನು ಜೋಡಿಸಿ ಒಂದೇ ದಿನದಲ್ಲಿ ನಳಗಳಿಗೆ ಹಾಕಿರುವ ಕಾಂಕ್ರಿಟ್ ಕಿತ್ತು ಹೋಗಿವೆ. ಅಷ್ಟೇ ಅಲ್ಲದೆ ನಳಗಳನ್ನು ಜೋಡಿಸಿ ಇನ್ನೂ ಒಂದು ತಿಂಗಳಾಗಿಲ್ಲ ಆಗಲೇ ತುಕ್ಕು ಹಿಡಿಯುತ್ತಿವೆ. ಇಷ್ಟರ ಮೇಲೆ ನೀವೇ ಯೋಚಿಸಿ ಇದರಲ್ಲಿ ಎಷ್ಟರ ಮಟ್ಟದಲ್ಲಿ ಕಳಪೆ ಕಾಮಗಾರಿ ನಡೆಯುತ್ತಿದೆ ಎಂದು. ಒಟ್ಟಾರೆಯಾಗಿ ಈ ಕಾಮಗಾರಿ ತಳ ಬುಡವಿಲ್ಲದಂತೆ ನಡೆಯುತ್ತಿದೆ ಎಂದರೆ ತಪ್ಪಾಗಲಾರದು.
ಈ ಕಾಮಗಾರಿಯಿಂದ ಇಲ್ಲಿಯ ಹಳ್ಳಿಯ ಜನರು ಸಾಕಷ್ಟು ಹೈರಾಣಾಗಿದ್ದು ಈ ಜಲ ಜೀವನ್ ಮಿಷನ್ ಕಾಮಗಾರಿ ನಿಂತರೆ ಸಾಕೆಂಬ ಮನಸ್ಥಿತಿಗೆ ಬಂದು ತಲುಪಿದ್ದಾರೆ.
ಇಷ್ಟೆಲ್ಲಾ ಕಳಪೆ ಕಾಮಗಾರಿ ಮೇಲ್ನೋಟಕ್ಕೆ ಕಂಡು ಬಂದಿರುವುದು ಮಾತ್ರ, ಸಂಪೂರ್ಣ ವಿವರವನ್ನು ಬಯಲಿಗೆಳೆಯುವ ಮುನ್ನ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಹಾಗೂ ಇಂಜಿನಿಯರ್ ಗಳು ಎಚ್ಚೆತ್ತು ಗುತ್ತಿಗೆದಾರನ ವಿರುದ್ಧ ಕ್ರಮ ಕೈಗೊಂಡು ಇಂತಹ ಬೃಹತ್ ಮೊತ್ತದ ಕಾಮಗಾರಿಯನ್ನು ಸರಿಯಾದ ರೀತಿಯಲ್ಲಿ ನಡೆಸುವಂತೆ ಸೂಚಿಸಬೇಕು.

ವರದಿ : ವಿಶ್ವನಾಥ ಭಜಂತ್ರಿ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago