Latest

ಲೈಂಗಿಕ ಆಸಕ್ತಿ ಕಳೆದುಕೊಂಡ ಗಂಡ; ಕಾಮಧಲ್ಲಿ ತೇಲುತ್ತಿದ್ದ ಕಾಮಿಣಿ ಗಂಡನ ಜೀವಕ್ಕಿಟ್ಟಳು ಕಾಮ,,

ಪತಿಗೆ ಲೈಂಗಿಕ ಆಸೆ ಇಲ್ಲ ಎಂದು ವಿವಾಹಿತ ಮಹಿಳೆ ಬೇರೊಬ್ಬನ ಜೊತೆ ಸಂಬಂಧ ಬೆಳೆಸಿಕೊಂಡು ಮುಂದೊಂದು ದಿನ ಗಂಡನೇ ಇವರ ಕಾಮದಾಟಕ್ಕೆ ಅಡ್ಡಿಯಾಗುತ್ತಾನೆ ಎಂಬ ಕಾರಣಕ್ಕಾಗಿ ಪತ್ನಿಯೇ ಪತಿಯನ್ನು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ವಿದ್ಯಾರಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ರಾಕೇಶ್ ತೊಮಂಗ್ ಕೊಲೆಯಾದವ. ಈತ ವೃತ್ತಿಯಲ್ಲಿ ಸೆಕ್ಯುರಿಟಿ ಗಾರ್ಡ್​ ಆಗಿದ್ದ. ಅಲ್ಲದೆ, ವಿಪರೀತ ಮದ್ಯವ್ಯಸನಿಯಾಗಿದ್ದ. ಪತ್ನಿ ದೇವಿ ತೊಮಾಂಗ್​, ಪತಿ ರಾಕೇಶ್​ ಕೆಲಸ ಮಾಡುತ್ತಿದ್ದ ಸ್ಥಳಕ್ಕೆ ಆಗಾಗ ಊಟ ತಂದು ಕೊಡುತ್ತಿದ್ದಳು. ಈ ವೇಳೆ ಆಕೆಗೆ ಜೈನುಲ್ ಅಲಿ ಅಲಿಯಾಸ್ ಬಾಬು ಅಲಿ ಎಂಬಾತನ ಪರಿಚಯವಾಗಿತ್ತು.
ಆರಂಭದಲ್ಲಿದ್ದ ಪರಿಚಯ ನಂತರದ ದಿನಗಳಲ್ಲಿ ಪ್ರೇಮಕ್ಕೆ ತಿರುಗಿತ್ತು. ಈ ನಡುವೆ ಪತಿ ಹೆಚ್ಚು ಮದ್ಯ ಸೇವನೆಯಿಂದ ಲೈಂಗಿಕ ಆಸಕ್ತಿ ಕಳೆದುಕೊಂಡಿದ್ದ. ಇದರಿಂದಾಗಿ ದೇವಿ ತೊಮಾಂಗ್​ ಬಾಬು ಅಲಿ ಜೊತೆ ಸಂಬಂಧ ಬೆಳೆಸಿದ್ದಳು. ಆಗಾಗ ವಡೇರಹಳ್ಳಿಯ ರಾಕೇಶ್ ನಿವಾಸಕ್ಕೆ ಬಾಬು ಬರುತಿದ್ದ. ಈ ನಡುವೆ ಪತಿಗೆ ಪತ್ನಿಯ ಮೇಲೆ ಅನೈತಿಕ ಸಂಬಂಧದ ಬಗ್ಗೆ ಅನುಮಾನ ಮೂಡಿತ್ತು. ಬಳಿಕ ಆಕೆಗೆ ಎಚ್ಚರಿಕೆ ಸಹ ನೀಡಿದ್ದ.
ಪತಿ ಇದ್ದರೆ ತಮ್ಮ ಸಂಬಂಧಕ್ಕೆ ಅಡ್ಡಿಯಾಗುತ್ತಾನೆಂದು ಭಾವಿಸಿ, ಬಾಬು ಜೊತೆ ಸೇರಿಕೊಂಡು ನವೆಂಬರ್ 6ರಂದು ನಿದ್ರೆ ಮಂಪರಿನಲ್ಲಿದ್ದ ರಾಕೇಶ್​ನನ್ನು ಕತ್ತು ಇಸುಕಿ ದೇವಿ ತೊಮಂಗ್​ ಕೊಲೆ ಮಾಡಿದ್ದಳು. ಇದಾದ ಬಳಿಕ ಅತಿಯಾಗಿ ಮದ್ಯ ಸೇವಿಸಿ ಎದೆ ಉರಿಯಿಂದ ಮೃತಪಟ್ಟಿದ್ದಾನೆಂದು ನಾಟಕವಾಡಿದ್ದಳು. ಆದರೆ ಕತ್ತಿನ ಮೇಲೆ ಗಾಯದ ಗುರುತು ಕಂಡಿದ್ದ ಪೊಲೀಸರು, ಅನುಮಾನಾಸ್ಪದ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದಾಗ ಪತ್ನಿಯ ಕಳ್ಳಾಟ ಬಯಲಾಗಿದೆ.
ಪ್ರಕರಣ ಸಂಬಂಧ ಮೃತ ರಾಕೇಶ್ ಪತ್ನಿ ದೇವಿ ತೊಮಾಂಗ್ ಹಾಗೂ ಆಕೆಯ ಬಾಯ್ ಫ್ರೆಂಡ್ ಜೈನುಲ್ ಅಲಿಯನ್ನು ವಿದ್ಯಾರಣ್ಯಪುರ ಪೊಲೀಸರು ಬಂಧಿಸಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

4 weeks ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago