Latest

ತಹಶೀಲ್ದಾರ್ ಮನೆಗೆ ಕನ್ನ; ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು.

ಗೋಕಾಕ ನಗರದ ಲೋಕೋಪಯೋಗಿ ಇಲಾಖೆಯ ವಸತಿ ಪ್ರದೇಶದಲ್ಲಿರುವ ‌ತಹಸೀಲ್ದಾರ್ ಮನೆಗೆ ಕಳ್ಳರು ಕನ್ನ ಹಾಕಿದ್ದಾರೆ. ಗೋಕಾಕ ತಹಸೀಲ್ದಾರ್‌ ಪ್ರಕಾಶ ಹೊಳೆಪ್ಪಗೋಳ ಅವರ ಮನೆಯಲ್ಲಿ ಕಳ್ಳತನ ಆಗಿದ್ದು, ಸುಮಾರು 40 ತೊಲ ಚಿನ್ನ, 20 ಗ್ರಾಂ ಬೆಳ್ಳಿ, ‌5 ಸಾವಿರ ನಗದು ಎಗರಿಸಿ ಪರಾರಿ ಆಗಿದ್ದಾರೆ.
ತಹಸೀಲ್ದಾರ್ ಪ್ರಕಾಶ ಹೊಳೆಪ್ಪಗೋಳ ಅವರು ಕೆಲಸದ ನಿಮಿತ್ತ ಮೈಸೂರಿಗೆ ಹೋಗಿದ್ದರು ಮನೆಯಲ್ಲಿ ಯಾರು ಇಲ್ಲದ್ದನ್ನು ಖಚಿತಪಡಿಸಿಕೊಂಡ ಖದೀಮರು ರಾತ್ರಿ ಮನೆ ಬಾಗಿಲು ಮುರಿದು ಕಳ್ಳತನ ಮಾಡಿದ್ದಾರೆ. ಭಾನುವಾರ ಮಧ್ಯಾಹ್ನ‌ ಕ್ಲೀನರ್ ಬಂದು ನೋಡಿದಾಗ ಕಳ್ಳತನ ಆಗಿರುವುದು ಬೆಳಕಿಗೆ ಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೆರಳಚ್ಚು ತಜ್ಞರು, ಗೋಕಾಕ ‌ನಗರ ಪೊಲೀಸರು ‌ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಗೋಕಾಕನ ಜನತೆ ಆಗಾಗ ನಡೆಯುವ ಕಳ್ಳತನ ಪ್ರಕರಣಗಳಿಂದ ರೋಸಿ ಹೋಗಿದ್ದು, ಲೋಕೊಪಯೋಗಿ ವಸತಿ ಗೃಹದಲ್ಲಿ ಇರುವ ಗೋಕಾಕ ತಹಸೀಲ್ದಾರ್ ಮನೆಗೂ ಕಳ್ಳರು ಕನ್ನ ಹಾಕಿರುವುದು ಆತಂಕ ಹೆಚ್ಚಿಸಿದೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago