Latest

ಟ್ರಾಕ್ಟರ್ ಟ್ರೇಲರ್ ಕಳ್ಳರನ್ನು ಬಂದಿಸಿ, 6 ಟ್ರೇಲರ್ ವಶಪಡಿಸಿಕೊಳ್ಳವಲ್ಲಿ ಕುಂದಗೋಳ ಪೋಲಿಸರು ಯಶಸ್ವಿ.

ಕುಂದಗೋಳ: ಕುಂದಗೋಳ ತಾಲೂಕಿನ ವಿವಿಧೆಡೆ ಕಳ್ಳತನ ಮಾಡಿದ್ದ ಟ್ರಾಕ್ಟರ್ ಟ್ರೇಲರ್ ಕಳ್ಳರನ್ನು ಬಂದಿಸಿ 13.46 ಲಕ್ಷರೂ ಬೆಲೆ ಬಾಳುವ 6 ಟ್ರೇಲರ್ ವಶಪಡಿಸಿಕೊಳ್ಳವಲ್ಲಿ ಕುಂದಗೋಳ ಪೋಲಿಸರು ಯಶಸ್ವಿಯಾಗಿದ್ದಾರೆ.
ರೈತಾಪಿ ವರ್ಗದವರೂ ಕೃಷಿ ಚಟುವಟಿಕೆಗಳಿಗೆ ಉಪಯೋಗಿಸಲ್ಪಡುವ ಟ್ರಾಕ್ಟರ್ ಟ್ರೇಲರ್ ಗಳನ್ನು ಕದೀಮರು ಕಳ್ಳತನಕ್ಕೆ ಮುಂದಾಗಿದ ಆರೋಪಿಗಳನ್ನು ಹೆಡೆಮುರಿ ಕಟ್ಟವುಲ್ಲಿ ಪೋಲೀಸರು ಸಕ್ಸಸ್. ಈ ಕುರಿತು ಕುಂದಗೋಳ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಧಾರವಾಡ ಎಸ್ ಪಿ ಡಾ ಗೋಪಾಲ ಬ್ಯಾಕೋಡ, ಹೆಚ್ಚುವರಿ ಪೋಲಿಸ್ ಅಧೀಕ್ಷಕ ಎನ್. ಬಿ. ಭರಮನಿ ಪೋಲಿಸ್ ಉಪಾಧೀಕ್ಷಕ ಶಿವಾನಂದ ಕಟಗಿ, ಅವರ ಮಾರ್ಗದರ್ಶನದಲ್ಲಿ ಕುಂದಗೋಳ ಪೋಲಿಸ್ ಠಾಣೆಯ ಇನ್ಸ್ ಪೆಕ್ಟರ್ ಶಿವಾನಂದ ಅಂಬಿಗೇರ ನೇತ್ರತ್ವದಲ್ಲಿ ಕಾರ್ಯಾಚರಣೆಗೆ ಇಳಿದಿದ್ದರು.
ಇಂದು ಏ 12 ರಂದು ಬೆಳಿಗ್ಗೆ 2:30 ರ ಸುಮಾರಿಗೆ ಕುಂದಗೋಳ ಪಟ್ಟಣದ ಕಾಳಿದಾಸ ನಗರದಲ್ಲಿ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದಾಗ ಆರೋಪಿಗಳು ಟ್ರಾಕ್ಟರ್ ಟ್ರೇಲರ್ ಕಳ್ಳತನ ಮಾಡಿರುವುದು ತಪ್ಪೂಪಿಕೊಂಡಿದ್ದಾರೆ
ಕುಂದಗೋಳ ಪಟ್ಟಣ, ಬೆನಕನಹಳ್ಳಿ, ಶಿರೂರ, ಇನಾಮಕೊಪ್ಪ ಗ್ರಾಮಗಳಲ್ಲಿ ಮತ್ತು ಹುಬ್ಬಳ್ಳಿ ತಾಲೂಕಿನ ಅದರಗುಂಚಿ ಹಾಗೂ ಗದಗ ಜಿಲ್ಲೆ ರೋಣ ತಾಲೂಕಿನ ಬೆಳವಣಿಕಿ, ಮಲ್ಲಾಪುರ ಟ್ರೇಲರ್ ಕಳ್ಳತನ ಮಾಡಿರುವ ಬಗ್ಗೆ ತಿಳಿಸಿದ್ದಾರೆ.
ಸದರಿ ಆರೋಪಿಗಳಿಂದ ಒಟ್ಟು 13.40 ಲಕ್ಷ ರೂ ಮೌಲ್ಯದ 6 ಟ್ರೇಲರ್ ಹಾಗೂ 1 ನೀರಿನ ಟ್ಯಾಂಕರ್ ಮತ್ತು ಕೃತ್ಯಕ್ಕೆ ಬಳಸುತ್ತಿದ್ದ 2 ಟ್ರಾಕ್ಟರ್ ಇಂಜಿನ್ ಗಳನ್ನು ವಶಪಡಿಸಿಕೊಂಡಿದ್ದು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ತನಿಖಾ ತಂಡದಲ್ಲಿ ಪಿಎಸ್ಐ ಆರ್.ಸಿ.ದೊಡ್ಡಮನಿ, ಮಂಜುಳಾ ಸದಾರಿಯವರ, ಇಮ್ರಾನ್ ಪಠಾಣ ಹಾಗೂ ಸಿಬ್ಬಂದಿಗಳಾದ ಚಂದ್ರು ಬಡಿಗೇರ, ಬಸವರಾಜ ಶಿರಕೋಳ, ಮಡಿವಾಳ ಜೋಡಗೇರಿ, ಪರಮೇಶಿ ಗೊಂದಿ, ಶಂಕರ ಮುತ್ತಲಗೇರಿ, ಮಲಗೌಡ ಪಾಟೀಲ್, ಮೌನೇಶ ಗಲಗ, ಮಣಿಚಂದ್ರ ಗೋಣಿನವರ, ಅರುಣ ಹಾವಾಡಿ, ಉದಯ ಕಮ್ಮಾರ, ತಾಂತ್ರಿಕ ಸಿಬ್ಬಂದಿ ಆರೀಫ್ ಗೋಲಂದಾಜ, ವಿಠ್ಠಲ ಡಂಗನವರ ಇದ್ದಾರೆ. ಇವರ ಕಾರ್ಯವನ್ನು ಮೇಲಾಧಿಕಾರಿಗಳು ಪ್ರಶಂಸಿಸಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago