Latest

ಕೆರೆ ಹೊರಾಂಗಣ ಸಿಂಗಾರ; ಒಳಾಂಗಣದಲ್ಲಿ ಹೀಗೆ ಮಾಡಿದ್ದು ಸರೀನಾ?

ಕುಂದಗೋಳ; ಕೆರೆಗಳು ಮನುಷ್ಯರ ಜೀವನಾಡಿ ದಿನಬಳಕೆ ಬೇಕಾದ ಸಂಪನ್ಮೂಲ, ಹಾಗೇ ಇಲ್ಲೊಂದು ಕೆರೆ ಹಸಿ ಕಸ ಬೆಳೆದು ದುರ್ವಾಸನೆ ಎಡೆ ಮಾಡಿಕೊಟ್ಟಿದೆ.

ಗ್ರಾಮೀಣ ಪ್ರದೇಶಗಳಲ್ಲಿ ಕೆರೆಗಳ ಸಹಾಯದಿಂದ ನೀರು ಶೇಖರಣೆ ಮಾಡಿಕೊಂಡು ವರ್ಷಪೂರ್ತಿ ನೀರು ಕುಡಿಯಲು ಕೆರೆಗಳು ಸಹಕಾರಿಯಾಗಿದೆ. ವಿಜ್ಞಾನದ ಪ್ರಕಾರ ಉತ್ತಮ ಮಳೆಯಾಗಲು, ಅಂತರ್ಜಾಲ ಮಟ್ಟ ಸುಧಾರಿಸಲು ಕೆರೆ ಕಟ್ಟೆಗಳು ಬಹಳಷ್ಟು ಉಪಯೋಗಕಾರಿ ಅಂತ ನಾವು ನಿಜಜೀವನದಲ್ಲಿ ಕಂಡು ಕೊಂಡಿದ್ದವೆ.

ಕೆರೆಗಳ ಅಭಿವೃದ್ಧಿಗೆ ಸರಕಾರದಿಂದ ಹಣ ಹಂತ ಹಂತವಾಗಿ ಬಿಡುಗಡೆಗೊಳಸುತ್ತೆ. ಹಾಗಾಗಿ ಕೆರೆಗಳ ಅಂತರ್ಜಾಲ ಮಟ್ಟ ಸುಧಾರಿಸಲು, ಕೆರೆಗಳ ಹೂಳು ತೆಗೆಯುವುದು, ಕೆರೆಗಳ ಸ್ವಚ್ಚತೆ ಕಾಪಾಡುವುದು, ಕೆರೆಗಳ ಸಂರಕ್ಷಣೆ ಮಾಡುವುದು, ಇಷ್ಟೇಲ್ಲಾ ಕೆರೆಗಳ ಅಭಿವೃದ್ಧಿಗೆ ಕೇಂದ್ರ ಸರಕಾರದ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಸಹಕಾರಿಯಾಗಿದೆ.

ಆದರೆ ಇಲ್ಲೊಂದು ಗ್ರಾಮ ಮೆಲ್ಲೆಲ್ಲ ತುಳುಕು ಒಳಗೆಲ್ಲಾ ಹುಳುಕು ಅಂತ ಸ್ಪಷ್ಟವಾಗಿ ಕಾಣುತ್ತದೆ ಅಂದರೆ ತಪ್ಪಾಗಿಕ್ಕಿಲ್ಲ. ಹಾಗಾದರೆ ಯಾವು ಗ್ರಾಮ ಅಂತ ಕೇಳ್ತೀರಾ? ಇಲ್ಲಿದೆ ಕಂಪ್ಲೀಟ್ ಕಹಾನಿ.

ಧಾರವಾಡ ಜಿಲ್ಲಾ ಕುಂದಗೋಳ ತಾಲೂಕಿನ ಕುಬಿಹಾಳ ಗ್ರಾಮದ ಮಹಾತ್ಮ ಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿಯಲ್ಲಿ ಬರೋಬ್ಬರಿ ಅಂದಾಜು ಮೊತ್ತ 25 ಲಕ್ಷ ರೂಪಾಯಿ ವೆಚ್ಚದಲ್ಲಿ ಕೆರೆ ಅಭಿವೃದ್ಧಿಗೆ ಈಗಾಗಲೇ ಖರ್ಚು ಮಾಡಲಾಗಿದೆ.

ಕೆರೆಗಳು ಅಭಿವೃದ್ಧಿಗೊಂಡರೆ ನೀರಿನ ಅಂತರ್ಜಾಲ ಮಟ್ಟ ಸುಧಾರಿಸಲು ಸಹಾಯಕವಾಗುತ್ತದೆ ಅಂದರೆ ನಮ್ಮ ನಿಮ್ಮೆಲ್ಲರಿಗೂ ಗೊತ್ತಿರುವ ವಿಚಾರ. ಬೆಕ್ಕು ಕಣ್ಣುಮುಚ್ಚಿ ಹಾಲು ಕುಡಿದರೆ ಯಾರಿಗೂ ಕಾಣುವುದಿಲ್ಲ. ಹಾಗೆ ಆಗಿರುವ ವಿಚಾರ ಇದು, ಕೆರೆಯ ಸುತ್ತಲೂ ಪೀರ್ವಸ್ ಅಳವಡಿಕೆ ಮಾಡಿದ್ದಾರೆ, ಇದರ ಜೊತೆಗೆ ಸುತ್ತಲೂ ತಂತಿ ಬೇಲಿ, ಸೋಲಾರ್ ಲೈಟ್ ಗಳು ಅಳವಡಿಸಿ ದ್ದಾರೆ. ಆದರೆ ಇವೆಲ್ಲವೂ ಕಾಮಗಾರಿ ಅವೈಜ್ಞಾನಿಕ ದಿಂದ ಕೊಡಿದೆ.

ಕೆರೆ ಸುತ್ತಲೂ ಹಾಕಲಾಗಿದ ಪೀವರ್ಸ್ ಗಳು ಕಿತ್ತು ನೆಲ್ಲಕ್ಕಿ ಧಾವಿಸಿವೆ. ಇನ್ನೂ ತಂತಿ ಬೇಲಿ ಕಿತ್ತು ನಿಂತಿದೆ೦. ಕೆರೆ ಒಳಾಂಗಣದಲ್ಲಿ ಹಸಿ ಕಸ ಎದ್ದು ಕಲುಷಿತ ವಾತಾವರಣ ಸೃಷ್ಟಿಸಿದೆ.

ಇನ್ನೂ ಕೆರೆ ಹೊರ ಭಾಗದಲ್ಲಿ ನೋಡಿದರೆ ಸಾಕು ಬಣ್ಣದ ಲೇಪನದಿಂದ ಕಂಗೊಳಿಸುತ್ತೆ. ಜೊತೆಗೆ ಕರೆ ಭಾಗದಲ್ಲಿ ಕಲ್ಲು ಪಿಚ್ಚಿಂಗ್ ಮಾಡಲಾಗಿದೆ. ದೂರದ ಬೆಟ್ಟ ಕಣ್ಣಿಗೆ ನುಣ್ಣಗೆ ಅನ್ನುವು ಹಾಗೆ ಈ ಕೆರೆ ಆವೃತ್ತಿಗೊಂಡಿದೆ, ಇಷ್ಟೆಲ್ಲಾ ಸಮಸ್ಯೆಗಳು ಕಾಣ ತೊಡಗಿದರು ಈ ಅಧಿಕಾರಿಗಳು ನಿರ್ವಹಣೆ ಮಾಡದೇ ಕಚೇರಿಗೆ ಸೀಮತವಾದರ? ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿ ತೊಡಗಿದೆ. ಒಟ್ಟಿನಲ್ಲಿ ಗ್ರಾಪಂ ನಿರ್ವಹಣೆಯಲ್ಲಿ ಎಡವಿದೆ ಅಂತ ಗೋಚರವಾಗುತ್ತದೆ.

ವರದಿ; ಶಾನು ಯಲಿಗಾರ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

4 weeks ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago