Latest

ಮುಗ್ದ ಮಹಿಳೆಯ ಮೇಲೆ ಅತ್ಯಾಚಾರಕ್ಕೆಯತ್ನಿಸಿದ ಕಾಮುಕರು ಕಸಬಾ ಪೇಟ್ ಪೊಲೀಸರ ಬಲೆಗೆ.

ಇತ್ತೀಚಿನ ದಿನಗಳಲ್ಲಿ ಮದ್ಯೆಮ ವರ್ಗದ ಮಹಿಳೆಯರು ಹೊರಗಡೆ ಓಡಾಡಲು ಭಯ ಪಡುವ ಸ್ಥಿತಿ ನಿರ್ಮಾಣವಾಗುತ್ತಿರುವುದು ನಿಜಕ್ಕೂ ವಿಪರ್ಯಾಸ…..
ಯಾಕೇ ಅಂತೀರಾ ಇಲ್ಲಿದೆ ನೋಡಿ……
ಛೋಟಾ ಮುಂಬೈ, ಹುಬ್ಬಳ್ಳಿ ಎಂಬ ಸುಪ್ರಸಿದ್ದ ನಗರ ಪ್ರದೇಶದ ಹಳೇ ಹುಬ್ಬಳ್ಳಿಯ ಬುಕ್ ಫ್ಯಾಕ್ಟರಿಯಲ್ಲಿ ದಿನನಿತ್ಯ ತಾನಾಯ್ತು ತನ್ನ ಕೆಲಸವಾಯಿತು ಎಂದು ಕೆಲಸ ಮಾಡಿಕೊಂಡಿದ್ದ 36 ವರ್ಷದ ಮಹಿಳೆಯ ಮೇಲೆ ಈ ಜನ ಕಾಮುಕರು ಹಾಡ ಹಗಲೇ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ ಹುಬ್ಬಳ್ಳಿಯ ಉದ್ಯೇಮನಗರದಲ್ಲಿ ಎಂದಿನಂತೆ ಕಾರ್ಯ ನಿರ್ವಹಿಸುತ್ತಿದ್ದ ಮಹಿಳೆ ಮದ್ಯಾಹ್ನ ಹೊರಗಡೆ ಬಂದು ಊಟ ಮಾಡಿಕೊಂಡು ಮರಳಿ ಫ್ಯಾಕ್ಟರಿ ಕೆಲಸಕ್ಕೆ ಹಿಂತಿರುಗುವಾಗ ಅಲ್ಲಿಯೇ ಸ್ಥಳೀಯ ನಿವಾಸಿಗಳಾದ 1) ಉಲ್ಪಥ್ ಅಲಿಯಾಸ್ ನಾಮ್ 2) ಮಲ್ಲಿಕ್ 3) ಮುಬಾರಕ್ ಅಲಿಯಾಸ್ ಟುಬೋ ಎಂಬ 3 ಜನ ಕಾಮುಕರು ಹಾಡ ಹಗಲೇ ಮಹಿಳೆಯನ್ನು ಎಳೆದಾಡಿ ತಮ್ಮ ಕಾಮತೃಷೆಗೋಸ್ಕರ ಅತ್ಯಾಚಾರಕ್ಕೆ ದಾಳಿ ಮಾಡಿದಾಗ ಅಸಹಾಯಕ ಮಹಿಳೆ ಭಯದಿಂದ ಜೋರಾಗಿ ಕಿರುಚಾಡಿದ್ದಾಳೆ. ಮಹಿಳೆ ಕಿರುಚಾಡಿದ್ದನ್ನು ಗಮನಿಸಿದ ಸ್ಥಳೀಯರು ಮತ್ತು ಮಹಿಳೆಯ ಜೊತೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಸಹೋದ್ಯೋಗಿಗಳು ಬರುವಷ್ಟರಲ್ಲಿ ಕಾಮುಕರು ಅಲ್ಲಿಂದ ಪರಾರಿಯಾಗಿದ್ದರು. ಕೂಡಲೇ ಮಹಿಳೆ ಏನೂ ಮಾಡುವುದು ಎಂದು ತಿಳಿಯದೇ ಭಯದಿಂದ ನೇರವಾಗಿ ಹುಬ್ಬಳ್ಳಿಯ ಕಸಬಾ ಪೇಟ್ ಪೊಲೀಸ್ ಠಾಣೆಗೆ ಹೋಗಿ ಘಟನೆಯ ಮಾಹಿತಿಯನ್ನು ತಿಳಿಸಿ ಪ್ರಕರಣ ದಾಖಲಿಸಿದ್ದರು. ಪ್ರಕರಣ ದಾಖಲಿಸಿಕೊಂಡ ಕಸಬಾಪೇಟ್ ಪೊಲೀಸ್ ಠಾಣೆಯ ಸಿಪಿಐ
ಶ್ರೀ ಏ ಎಮ್ ಬನ್ನಿ ರವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ವಿಷಯ ತಿಳಿಸಿ ಅಧಿಕಾರಿಗಳ ಮಾರ್ಗದರ್ಶನದಂತೆ ಘಟನೆ ನಡೆದ ಕೆಲವೇ ಘಂಟೆಗಳಲ್ಲಿ 3 ಜನ ಕಾಮುಕರನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ…..
ವರದಿ : ಶಿವ ಹುಬ್ಬಳ್ಳಿ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago