Latest

ಮದುವೆಯಾಗು ಎಂದ ವಿವಾಹಿತ ಗೆಳತಿಯನ್ನು ತುಂಡು ತುಂಡಾಗಿ ಕತ್ತರಿಸಿದ ಕ್ರೂರಿ!

ಈಗಾಗಲೇ ಮದುವೆಯಾಗಿದ್ದ ತನ್ನ ಗೆಳತಿಯನ್ನು ಕೊಲೆಮಾಡಿ, ಆಕೆಯ ದೇಹವನ್ನು ಭಾಗಗಳಾಗಿ ಕತ್ತರಿಸಿ ರಾಜಸ್ಥಾನದ ನಾಗೌರ್‌ನಲ್ಲಿ ಹಲವಾರು ಸ್ಥಳಗಳಲ್ಲಿ ಎಸೆದಿದ್ದಾನೆ. ಈ ಪ್ರಕರಣವು ದೆಹಲಿಯ ಭೀಕರವಾದ ಶ್ರದ್ಧಾ ವಾಕರ್ ಹತ್ಯೆಯನ್ನು ನೆನಪಿಸುವಂಥದ್ದಾಗಿದೆ. ಆಕೆ ಬಾಲಾಜಿ ಪೊಲೀಸ್ ಠಾಣೆ ವ್ಯಾಪ್ತಿಯ ಬಾಲಾಸರ್ ಗ್ರಾಮದ ವಿವಾಹಿತ ಮಹಿಳೆ. ಜನವರಿ 20 ರಂದು ಮುಂಡಾಸರ್‌ನಲ್ಲಿರುವ ತನ್ನ ಅತ್ತೆಯ ಮನೆಗೆ ಹೋಗುವುದಾಗಿ ಹೇಳಿ ಮಹಿಳೆ ತನ್ನ ತಾಯಿಯ ಮನೆಯನ್ನು ಬಿಟ್ಟು ಬಂದಿದ್ದಳು. ಆದರೆ, ಗಂಟೆಗಳ ನಂತರ ಆಕೆಯನ್ನು ಸಂಪರ್ಕಿಸಿದಾಗ ಆಕೆಯ ಮೊಬೈಲ್ ಫೋನ್ ಸ್ವಿಚ್ ಆಫ್ ಆಗಿತ್ತು.

ಎರಡು ದಿನಗಳ ನಂತರ ಸಂತ್ರಸ್ತೆಯ ಸಂಬಂಧಿಕರು ಪೊಲೀಸರನ್ನು ಸಂಪರ್ಕಿಸಿದರು. ಪೊಲೀಸರು ಹುಡುಕಾಟ ನಡೆಸುತ್ತಿದ್ದಂತೆ ಜನವರಿ 28 ರಂದು ನಾಗೌರ್ ನಗರದ ಮಾಲ್ವಾ ರಸ್ತೆಯಲ್ಲಿರುವ ಕೇಂದ್ರೀಯ ವಿದ್ಯಾಲಯದ ಹಿಂಭಾಗದ ಪೊದೆಗಳಲ್ಲಿ ಮಹಿಳೆಯ ಬಟ್ಟೆ, ಕೂದಲು, ದವಡೆ ಪತ್ತೆಯಾಗಿದೆ. ಸಂತ್ರಸ್ತೆಯ ಉಡುಪುಗಳಲ್ಲಿ ರಕ್ತದ ಕಲೆಗಳಿರುವುದು ದೃಢಪಟ್ಟ ಬಳಿಕ ಪೊಲೀಸರು ಕೊಲೆ ಪ್ರಕರಣವನ್ನು ದಾಖಲಿಸಿ ಆಕೆಯ ಪ್ರಿಯಕರನನ್ನು ಪೊಲೀಸ್ ಠಾಣೆಗೆ ಕರೆದುಕೊಂಡು ಬಂದು ವಿಚಾರಣೆ ನಡೆಸಿದಾಗ, ಮಹಿಳೆ ತನ್ನನ್ನು ಮದುವೆಯಾಗುವಂತೆ ದಿನದಿಂದ ದಿನಕ್ಕೆ ಒತ್ತಡ ಹಾಕುತ್ತಿದ್ದಳು. ಆದ್ದರಿಂದ ಕೊಲೆ ಮಾಡಿದೆ ಎಂದು ತಪ್ಪೊಪ್ಪಿಕೊಂಡಿದ್ದಾನೆ.  ಆರೋಪಿ ಕೊಲೆಯಾದ ಮಹಿಳೆಯ ದೇಹವನ್ನು ತುಂಡುಗಳಾಗಿ ಕತ್ತರಿಸಿ ವಿವಿಧ ಸ್ಥಳಗಳಲ್ಲಿ ಎಸೆದಿರುವುದಾಗಿ ಒಪ್ಪಿಕೊಂಡಿದ್ದಾನೆ.

ದೇವ್ರ ಗ್ರಾಮದ ಬಾವಿಯಲ್ಲಿ ದೇಹದ ಭಾಗಗಳನ್ನು ಎಸೆದಿರುವುದಾಗಿ ಆರೋಪಿ ತಿಳಿಸಿದ್ದಾನೆ. ಕೊಲೆಯಾದ ಮಹಿಳೆಯ ದೇಹದ ಭಾಗಗಳನ್ನು ಪತ್ತೆಹಚ್ಚಲು ಡ್ರೋನ್ ಕ್ಯಾಮೆರಾಗಳನ್ನು ಸಹ ಬಳಸಲಾಗಿದೆ. ದಿನಗಟ್ಟಲೆ ಹುಡುಕಾಟ ನಡೆಸಿದ ಪೊಲೀಸರು ಶವವನ್ನು ಪತ್ತೆ ಹಚ್ಚಲು ಸಾಧ್ಯವಾಗಲಿಲ್ಲ. ನಂತರ ಆರೋಪಿಗಳು ಪೊಲೀಸರನ್ನು ದಾರಿತಪ್ಪಿಸುತ್ತಿರುವುದು ಬೆಳಕಿಗೆ ಬಂದಿದೆ. ಆರೋಪಿಯ ಪಾಲಿಗ್ರಾಫ್ ಪರೀಕ್ಷೆಯನ್ನು ಜೈಪುರದಲ್ಲಿ ನಡೆಸಲಾಗುವುದು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago