World

ರಷ್ಯಾದ ಮೇಲೆ ಉಕ್ರೇನ್‌ ರಣಕಹಳೆ: ಮಾಸ್ಕೋ ಸೇರಿದಂತೆ 10 ಪ್ರದೇಶಗಳ ಮೇಲೆ ಭಾರೀ ಡ್ರೋನ್ ದಾಳಿ

ರಷ್ಯಾ-ಉಕ್ರೇನ್‌ ಯುದ್ಧ ತೀವ್ರಗೊಳ್ಳುತ್ತಲೇ ಇದ್ದು, ಉಕ್ರೇನ್‌ ರಷ್ಯಾದ ರಾಜಧಾನಿ ಮಾಸ್ಕೋವಿನ ವಿರುದ್ಧ ಭಾರೀ ಡ್ರೋನ್ ದಾಳಿ ನಡೆಸಿದೆ. ಈ ದಾಳಿಯಲ್ಲಿ ಒಬ್ಬರು ಮೃತಪಟ್ಟಿದ್ದು, 9ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ರಷ್ಯಾದ 10ಕ್ಕೂ ಹೆಚ್ಚು ಪ್ರದೇಶಗಳ ಮೇಲೆ ಉಕ್ರೇನ್‌ ಡ್ರೋನ್‌ಗಳ ಸುರಿಮಳೆಯನ್ನೇ ಸುರಿಸಿದೆ.

ಈ ದಾಳಿಯು ಉಕ್ರೇನ್‌ ಕಳೆದ ಮೂರು ವರ್ಷಗಳಲ್ಲಿ ರಷ್ಯಾ ವಿರುದ್ಧ ನಡೆಸಿದ ಅತ್ಯಂತ ದೊಡ್ಡ ಡ್ರೋನ್ ದಾಳಿ ಎಂದು ಹೇಳಲಾಗುತ್ತಿದೆ. ರಷ್ಯಾದ ವಾಯು ರಕ್ಷಣಾ ಪಡೆಗಳು ಈ ದಾಳಿಗೆ ತಕ್ಷಣ ಪ್ರತಿಕ್ರಿಯೆ ನೀಡಿದ್ದು, ಅರ್ಧರಾತ್ರಿ ವೇಳೆಗೆ ಬರೋಬ್ಬರಿ 337 ಉಕ್ರೇನ್‌ ಡ್ರೋನ್‌ಗಳನ್ನು ಹೊಡೆದುರುಳಿಸಲಾಗಿದೆ ಎಂದು ರಷ್ಯಾದ ಸೇನೆ ಹೇಳಿದೆ.

ಅಮೆರಿಕ-ಉಕ್ರೇನ್ ಚರ್ಚೆಯ ಮುಂಚಿನ ದಾಳಿ

ಈ ದಾಳಿ ಅಮೆರಿಕ-ಉಕ್ರೇನ್‌ ನಡುವಿನ ಮಹತ್ವದ ಸಭೆಯ ಕೆಲವೇ ಗಂಟೆಗಳ ಮುಂಚೆ ನಡೆದಿರುವುದು ಅನೇಕ ಅನುಮಾನಗಳಿಗೆ ಕಾರಣವಾಗಿದೆ. ಉಕ್ರೇನ್‌ ನಿಯೋಗ ಮಂಗಳವಾರ (ಮಾರ್ಚ್ 11) ಸೌದಿ ಅರೇಬಿಯಾದಲ್ಲಿ ಅಮೆರಿಕದ ಉನ್ನತ ರಾಜತಾಂತ್ರಿಕರನ್ನು ಭೇಟಿಯಾಗಲಿದ್ದು, ಈ ಸಂದರ್ಶನ ಯುದ್ಧ ಮುಗಿಸುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ. ಆದರೆ ಈಗ ನಡೆದ ಭಾರೀ ದಾಳಿಯಿಂದ ಉಕ್ರೇನ್‌ಗೆ ಯುದ್ಧ ಮುಗಿಸುವ ಮನಸ್ಸು ಇದೆಯೇ ಎಂಬ ಪ್ರಶ್ನೆ ಉದ್ಭವಿಸಿದೆ.

ಅಮೆರಿಕ-ಉಕ್ರೇನ್‌ ಸಂಬಂಧದಲ್ಲಿ ಬಿರುಕು?

ಉಕ್ರೇನ್‌ನ ಅಧ್ಯಕ್ಷ ವೊಲೊಡಿಮಿರ್ ಝೆಲೆನ್‌ಸ್ಕಿ ಇತ್ತೀಚೆಗೆ ಅಮೆರಿಕದ ಶ್ವೇತ ಭವನಕ್ಕೆ ಭೇಟಿ ನೀಡಿದ್ದರು, ಆದರೆ ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್ ಅವರೊಂದಿಗೆ ಅವರ ಮಾತುಕತೆ ಅಷ್ಟು ಅನುಕೂಲಕರವಾಗಿರಲಿಲ್ಲ. ಅಷ್ಟೇ ಅಲ್ಲದೆ, ಉಕ್ರೇನ್‌ನ ಖನಿಜ ಸಂಪತ್ತುಳ್ಳ ಪ್ರದೇಶಗಳನ್ನು ಬಿಟ್ಟುಕೊಡಲು ಅಮೆರಿಕ ಒತ್ತಾಯಿಸಿದ್ದರಿಂದ ಉಕ್ರೇನ್‌ ಬೇಸರಗೊಂಡಿತ್ತು.

ಈ ಹಿನ್ನೆಲೆಯಲ್ಲಿ, ಉಕ್ರೇನ್‌ ರಷ್ಯಾ ವಿರುದ್ಧ ಏಕಾಏಕಿ ಹೂಡಿದ ಭಾರೀ ದಾಳಿಯು ಅಮೆರಿಕದ ಮೇಲೆ ಉಕ್ರೇನ್‌ ಮೂಡಿದ ಅಸಮಾಧಾನದ ಪ್ರತೀಕವೇ? ಎಂಬ ಪ್ರಶ್ನೆಗಳು ಎದ್ದಿರುವುದು ಗಮನಾರ್ಹ. ದಾಳಿಯ ಕುರಿತು ಉಕ್ರೇನ್‌ನಿಂದ ಯಾವುದೇ ಅಧಿಕೃತ ಪ್ರತಿಕ್ರಿಯೆ ಲಭ್ಯವಾಗಿಲ್ಲ.

ಭ್ರಷ್ಟರ ಬೇಟೆ

Recent Posts

ಅಪಾರ್ಟ್ಮೆಂಟ್ ನಲ್ಲಿ ವೇಶ್ಯಾವಾಟಿಕೆ; ದೂರು ನೀಡಿದ ನಿರ್ದೇಶಕನ ಪತ್ನಿ.

ಚೆನ್ನೈನ ಐಯ್ಯಪ್ಪಂತಂಗಲ್‌ನಲ್ಲಿರುವ ಐಷಾರಾಮಿ ಅಪಾರ್ಟ್‌ಮೆಂಟ್ ಸಂಕೀರ್ಣವೊಂದು ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಖ್ಯಾತ ಚಲನಚಿತ್ರ ನಿರ್ದೇಶಕ ರಾಜು ಮುರುಗನ್ ಅವರ…

32 minutes ago

ನಕಲಿ ಸಹಿಯ ಮೂಲಕ ವಿಚ್ಛೇದನ: ಪತಿಗೆ ಕೋರ್ಟ್ ಆವರಣದಲ್ಲೇ ಪತ್ನಿಯಿಂದ ಥಳಿತ

ನಗರದ ಶಾಂತಿನಿಕೇತನ ಕಾಲೋನಿಯ ಲಲಿತಾ ಎಂಬ ಮಹಿಳೆ ಜೀವನಾಂಶಕ್ಕಾಗಿ ನ್ಯಾಯಾಲಯದ ಮೊರೆ ಹೋಗಿದ್ದ ವೇಳೆ, ಪತಿ ಕಳೆದ ವರ್ಷವೇ ವಿಚ್ಛೇದನ…

34 minutes ago

ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣ: 23 ಜನರು ದೋಷಿ ಎಂದು ನ್ಯಾಯಾಲಯ ತೀರ್ಪು

ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಗದಗ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ 23 ಮಂದಿಯನ್ನು…

3 hours ago

ಹಂಪಿಯಲ್ಲಿ ವಿದೇಶಿ ಪ್ರವಾಸಿಗರ ಮೇಲೆ ಅತ್ಯಾಚಾರ ಮತ್ತು ದಾಳಿಯ ಪರಿಣಾಮ: ಪ್ರವಾಸೋದ್ಯಮಕ್ಕೆ ಭಾರೀ ಹೊಡೆತ

ಹಂಪಿ ಮತ್ತು ಆನೆಗೊಂದಿ ಪ್ರದೇಶದಲ್ಲಿ ವಿದೇಶಿ ಪ್ರವಾಸಿಗರ ಮೇಲೆ ಹಲ್ಲೆ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣ ನಡೆದ ಬಳಿಕ, ಈ…

3 hours ago

17 ವರ್ಷದ ಯುವತಿಯನ್ನು ಕತ್ತು ಸೀಳಿ ಹತ್ಯೆ ಮಾಡಿದ ಪ್ರೇಮಿ

ಉತ್ತರ ಪ್ರದೇಶದ ಕಾನ್ಪುರದಲ್ಲಿ 17 ವರ್ಷದ ಯುವತಿಯನ್ನು ಕತ್ತು ಸೀಳಿ ಕೊಲೆ ಮಾಡಿರುವ ಭೀಕರ ಘಟನೆ ಸೋಮವಾರ (ಮಾರ್ಚ್ 10)…

3 hours ago

ತೆಲಂಗಾಣದಲ್ಲಿ ದುರ್ಘಟನೆ: ಆರ್ಥಿಕ ಸಂಕಷ್ಟದ ನಡುವೆ ದಂಪತಿ ಮಕ್ಕಳನ್ನು ಕೊಂದು ಆತ್ಮಹತ್ಯೆ

ತೆಲಂಗಾಣದಲ್ಲಿ ಹೃದಯ ವಿದ್ರಾವಕ ಘಟನೆ ನಡೆದಿದ್ದು, ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದ ದಂಪತಿಯೊಬ್ಬರು ತಮ್ಮ ಇಬ್ಬರು ಮಕ್ಕಳನ್ನು ಕೊಂದು, ನಂತರ ನೇಣು…

3 hours ago