Latest

ಪ್ರಯಾಗ್‌ರಾಜ್ ಮಹಾಕುಂಭಮೇಳದಲ್ಲಿ ಸಿಲಿಂಡರ್ ಸ್ಫೋಟದಿಂದ ಭಾರೀ ಬೆಂಕಿ: ಲಕ್ಷಾಂತರ ನಷ್ಟ!

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ಮಹಾಕುಂಭಮೇಳ ಪ್ರದೇಶದಲ್ಲಿ ಭಾರೀ ಬೆಂಕಿ ಕಾಣಿಸಿಕೊಂಡು ಅವ್ಯವಸ್ಥೆ ಉಂಟಾಗಿದೆ. ಗಂಗಾ ಸೇತುವೆಯ ಬಲಭಾಗದಲ್ಲಿ ಈ ಅವಘಡ ಸಂಭವಿಸಿದ್ದು, ಸ್ಥಳೀಯ ಜನರಲ್ಲಿ ಆತಂಕ ಮೂಡಿಸಿದೆ.

ಬೆಂಕಿಯ ವಿಷಯ ತಿಳಿದ ಕೂಡಲೇ ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ತಲುಗಿ ಕಾರ್ಯಾರಂಭಿಸಿದರೂ, ಈ ಘಟನೆ ಭಕ್ತರಲ್ಲಿ ಭಯ ಹುಟ್ಟಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಈ ಸಂಬಂಧ ಇನ್ನಷ್ಟು ಮಾಹಿತಿ ನಿರೀಕ್ಷಿಸಲಾಗುತ್ತಿದೆ.

ವರದಿಗಳ ಪ್ರಕಾರ, ಸೆಕ್ಟರ್ ಸಂಖ್ಯೆ 19 ರ ಸೇತುವೆ ಸಂಖ್ಯೆ 12ರ ಬಳಿ, ಝುನ್ಸಿ ರೈಲ್ವೆ ಮಾರ್ಗದ ಕೆಳಗಿರುವ ಗೀತಾ ಪ್ರೆಸ್ ಶಿಬಿರದಲ್ಲಿ ಈ ಬೆಂಕಿ ಕಾಣಿಸಿಕೊಂಡಿದೆ. ಸ್ಥಳೀಯರ ಪ್ರಕಾರ, ಶಿಬಿರದಲ್ಲಿ ಆಹಾರವನ್ನು ತಯಾರಿಸುವಾಗ ಸಿಲಿಂಡರ್ ಸ್ಫೋಟಗೊಂಡು ಬೆಂಕಿ ಹತ್ತಿಕೊಂಡಿದೆ. ಪರಿಣಾಮ, ಬೆಂಕಿ ಶೀಘ್ರವಾಗಿ ವ್ಯಾಪಿಸಿ 20-25 ಡೇರೆಗಳನ್ನು ಆವರಿಸಿದೆ. ಶಿಬಿರದಲ್ಲಿ ಸುಮಾರು 500ಕ್ಕೂ ಹೆಚ್ಚು ಜನರಿದ್ದರೆಂದೂ ವರದಿಯಾಗಿದೆ.

ಈ ಘಟನೆ ನಿಭಾಯಿಸಲು ಅಗ್ನಿಶಾಮಕ ದಳದ ಹಲವಾರು ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಕಾರ್ಯಾಚರಣೆ ಇನ್ನೂ ಮುಂದುವರಿಯುತ್ತಿದೆ.

ಭ್ರಷ್ಟರ ಬೇಟೆ

Recent Posts

ಸಿಇಟಿ ಪರೀಕ್ಷೆಯಲ್ಲಿ ಜನಿವಾರ ವಿವಾದ: ಸರ್ಕಾರದ ತ್ವರಿತ ಕ್ರಮ, ಅಧಿಕಾರಿ ಅಮಾನತು..

ಶಿವಮೊಗ್ಗ: ರಾಜ್ಯದ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯಿಂದ ಜನಿವಾರ ತೆಗೆಸಿದ ಘಟನೆ ತೀವ್ರ ವಾಗ್ದಾಳಿ ಮತ್ತು ವಿರೋಧಕ್ಕೆ ಕಾರಣವಾಗಿದೆ. ಸಮಾಜದ…

6 hours ago

ಪಡುಬಿದ್ರಿಯಲ್ಲಿ ಅಕ್ರಮ ಮರಳು ಸಾಗಾಟ: ಪರಾರಿಯಾದ ಚಾಲಕ, ಟಿಪ್ಪರ್ ವಶಕ್ಕೆ

ಪಡುಬಿದ್ರಿ: ಹೆಜಮಾಡಿ ಮಟ್ಟು ರಸ್ತೆಯಲ್ಲಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಟಿಪ್ಪರ್‌ವೊಂದು ಪಡುಬಿದ್ರಿ ಪೊಲೀಸರು ಎಪ್ರಿಲ್ 17ರ ಮಧ್ಯರಾತ್ರಿ ವಶಪಡಿಸಿಕೊಂಡಿದ್ದಾರೆ. ತುರ್ತು…

7 hours ago

ಗುರುಗ್ರಾಮ್ ಆಸ್ಪತ್ರೆಯಲ್ಲಿ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ: ಟೆಕ್ನಿಷಿಯನ್ ದೀಪಕ್ ಬಂಧನ”

ಗುರುಗ್ರಾಮ್‌ನ ಖಾಸಗಿ ಆಸ್ಪತ್ರೆಗೆ ಸೇರಿದ್ದ ಮಹಿಳೆಯೊಬ್ಬರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ನಾಲ್ಕು ದಿನಗಳ ನಿರಂತರ ತನಿಖೆಯ ಬಳಿಕ ಪೊಲೀಸರ…

8 hours ago

ಆರ್ಥಿಕ ವಂಚನೆ ಹಾಗೂ ಮಾನಸಿಕ ಕಿರುಕುಳದಿಂದ ಬಿಜೆಪಿ ಕಾರ್ಯಕರ್ತ ಆತ್ಮಹತ್ಯೆ: ಆರೋಪಿಗಳ ವಿರುದ್ಧ ಉಲ್ಕೊಂಡ ವೀಡಿಯೋ ವೈರಲ್.!

ಬೆಂಗಳೂರು: ಅನೇಕಲ್‌ನಲ್ಲಿ ಬಿಜೆಪಿ ಕಾರ್ಯಕರ್ತನೊಬ್ಬ ಆರ್ಥಿಕ ವಂಚನೆ ಮತ್ತು ಮಾನಸಿಕ ಕಿರುಕುಳದಿಂದ ತತ್ತರಿಸಿ ಜೀವನದ ಕ್ಷಣಿಕ ನಿರ್ಣಯ ಮಾಡಿಕೊಂಡ ದುರ್ಘಟನೆ…

9 hours ago

ಸಾಲದಲ್ಲಿ ಖರೀದಿಸಿದ ವ್ಯಾಪಾರ ವಾಹನಕ್ಕೆ ಬೆಂಕಿ: ಕೆಂಬಾರೆ ಗ್ರಾಮದ ದಂಪತಿಗೆ ಲಕ್ಷಾಂತರ ನಷ್ಟ.

ಬೆಳ್ಳೂರು ತಾಲ್ಲೂಕಿನ ಕೆಂಬಾರೆ ಗ್ರಾಮದಲ್ಲಿ ನಡೆದ ಒಂದು ದುರ್ಭಾಗ್ಯಕರ ಘಟನೆಯು ಸ್ಥಳೀಯರನ್ನು ಬೆಚ್ಚಿಬಿಟ್ಟಿದೆ. ಮಕ್ಕಳ ಆಟಿಕೆ ಸಾಮಗ್ರಿಗಳನ್ನು ಮಾರಾಟ ಮಾಡಿ…

10 hours ago

ರಿಷಿಕೇಶ ದುರಂತ: ರಿವರ್‌ ರಾಫ್ಟಿಂಗ್ ವೇಳೆ ನೀರಿಗೆ ಬಿದ್ದು ಯುವಕನ ಸಾವು

ಉತ್ತರಾಖಂಡದ ಪ್ರಸಿದ್ಧ ಪ್ರವಾಸಿ ತಾಣ ರಿಷಿಕೇಶದಲ್ಲಿ ನಡೆಯುತ್ತಿದ್ದ ರಿವರ್‌ ರಾಫ್ಟಿಂಗ್‌ನಾಗಮನ ಒಂದು ದುರಂತದಲ್ಲಿ ಅಂತ್ಯ ಕಂಡಿದೆ. ಡೆಹ್ರಾಡೂನ್‌ನಿಂದ ಪ್ರವಾಸಕ್ಕೆ ಬಂದಿದ್ದ…

11 hours ago