ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ ಕೈಗೊಂಡ ಮಹಿಳಾ ಅಧಿಕಾರಿಗೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ, ಶಾಸಕರ ಪುತ್ರನ ವಿರುದ್ಧ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಉಗ್ರ ಪ್ರತಿಭಟನೆ ನಡೆಸಿವೆ. ಈ ಸಂಬಂಧ ನಿಖಿಲ್ ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಶಾಸಕರ ಪುತ್ರನ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಲಾಯಿತು.
ಆದರೆ, ಈ ಆರೋಪಗಳನ್ನು ರಾಜಕೀಯ ಪ್ರೇರಿತವೆಂದು ಖಂಡಿಸಿರುವ ಕಾಂಗ್ರೆಸ್ ಕಾರ್ಯಕರ್ತರು ಮತ್ತು ಶಾಸಕರ ಅಭಿಮಾನಿಗಳು, ಭಾನುವಾರ ಬಸವೇಶನಿಗೆ ಹಾಲಿನ ಅಭಿಷೇಕ ಮಾಡುವ ಮೂಲಕ ತಮ್ಮ ಬೆಂಬಲ ವ್ಯಕ್ತಪಡಿಸಿದರು. ಈ ಸಂದರ್ಭ, ನಗರಸಭೆ ಅಧ್ಯಕ್ಷರ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಕಾರ್ಯಕರ್ತರು ಮಹಾತ್ಮಗಾಂಧಿ ರಸ್ತೆಯಲ್ಲಿ ಬೈಕ್ ರ್ಯಾಲಿ ನಡೆಸಿ, ಶಾಸಕರ ಪುತ್ರನ ಪರ ಘೋಷಣೆಗಳನ್ನು ಕೂಗಿದರು.
ಶಾಸಕರ ಪುತ್ರನ ವಿರುದ್ಧದ ಆರೋಪಗಳು ಸುಳ್ಳು ಹಾಗೂ ರಾಜಕೀಯ ಕುತಂತ್ರದ ಭಾಗವೆಂದು ಕಾಂಗ್ರೆಸ್ ಮುಖಂಡರು ಆಕ್ರೋಶ ವ್ಯಕ್ತಪಡಿಸಿದರು. ಈ ಬೆಳವಣಿಗೆಯಿಂದ ರಾಜ್ಯ ರಾಜಕೀಯದಲ್ಲಿ ಹೊಸ ವಿವಾದ ಶುರುವಾಗಿದೆ.
ಭಟ್ಕಳ ತಾಲ್ಲೂಕಿನ ಶಿರಾಲಿ ಗ್ರಾಮದ ಕೇಶವಮೂರ್ತಿ ಹಿತ್ಲು ಪ್ರದೇಶದಲ್ಲಿ ಮಾಚ್ 15ರ ರಾತ್ರಿ ಅಕ್ರಮ ಜೂಜಾಟ ನಡೆಯುತ್ತಿದ್ದ ಸ್ಥಳದಲ್ಲಿ ಭಟ್ಕಳ…
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಟಿ. ಕಾಗೇಪುರ ಗ್ರಾಮದಲ್ಲಿ ಗೋಕುಲ ವಿದ್ಯಾಸಂಸ್ಥೆಯ ಹಾಸ್ಟೆಲ್ನಲ್ಲಿ ಭೋಜನ ಸೇವಿಸಿದ 30 ವಿದ್ಯಾರ್ಥಿಗಳು ಫುಡ್…
ರಷ್ಯಾದ ಸರ್ಕಸ್ ಆನೆಯೊಂದು ತನ್ನ 25 ವರ್ಷಗಳ ಸಹಚರನ ಅಗಲಿಕೆಗೆ ಮರುಗಿದ ಭಾವನಾತ್ಮಕ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮ್ಯಾಗ್ಡಾ…
ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಡ್ರಗ್ಸ್ ಜಾಲವನ್ನು ಮಂಗಳೂರು ಸಿಸಿಬಿ ಪೊಲೀಸರು ಭೇದಿಸಿದ್ದು, ಈ ಪ್ರಕರಣದಲ್ಲಿ ದಕ್ಷಿಣ ಆಫ್ರಿಕಾ ಮೂಲದ ಇಬ್ಬರು…
ಪಾಕಿಸ್ತಾನದ ಕ್ವೆಟ್ಟಾದಿಂದ ತಫ್ತಾನ್ಗೆ ತೆರಳುತ್ತಿದ್ದ ಭದ್ರತಾ ಪಡೆಗಳ ವಾಹನಗಳ ಮೇಲೆ ಭಾನುವಾರ ಭೀಕರ ದಾಳಿ ನಡೆದಿದ್ದು, 90 ಸೈನಿಕರು ಮೃತಪಟ್ಟಿದ್ದಾರೆ…
ಅಮೆರಿಕಾ ಮತ್ತು ಇರಾಕ್ ಸೇನೆಗಳು ಜಂಟಿಯಾಗಿ ನಡೆಸಿದ ಕಾರ್ಯಾಚರಣೆಯಲ್ಲಿ ISIS ಉನ್ನತ ನಾಯಕ ಅಬು ಖದಿಜಾ ವಧೆಯಾಗಿರುವುದು ದೃಢಪಟ್ಟಿದೆ. ಅಮೆರಿಕಾ…