ಕೃಷಿ ಹೊಂಡದಲ್ಲಿ ಮುಳುಗಿ ತಾಯಿ-ಮಗ ಮೃತಪಟ್ಟ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಕೋಳೂರು ಗ್ರಾಮದಲ್ಲಿ ಸಂಭವಿಸಿದೆ. ಕೋಳೂರು ಗ್ರಾಮದ ರೂಪಾ (35) ಹಾಗೂ ಮಗ (Son) ಹೇಮಂತ್ (9) ಮೃತ ದುರ್ದೈವಿಗಳು. ತಾಯಿ, ಅಜ್ಜಿ ಜೊತೆಬಾಲಕ ಕುರಿ ಮೇಯಿಸಲು ಹೋಗಿದ್ದ. ಈ ವೇಳೆ ಬಾಲಕ ಹೇಮಂತ್ ಕೃಷಿ ಹೊಂಡದಲ್ಲಿ ಕೈ, ಕಾಲು ತೊಳೆಯಲು ಹೋದಾಗ ಆಕಸ್ಮಿಕ ಕಾಲು ಜಾರಿ ಬಿದ್ದಿದ್ದಾನೆ.
ಮಗ ಮುಳುಗಿದ್ದನ್ನ ಕಂಡ ತಾಯಿ ಆತನ ರಕ್ಷಣೆಗೆ ಮುಂದಾಗಿದ್ದಾಳೆ. ಈ ವೇಳೆ ತಾಯಿಯೂ ಮಗನ ಜೊತೆ ನೀರಿನಲ್ಲಿ ಮುಳುಗಿದ್ದಾಳೆ. ಅಲ್ಲೇ ಇದ್ದ ಅಜ್ಜಿ ಸಹ ರಕ್ಷಣೆಗೆ ಮುಂದಾಗಿದ್ದು, ಆಕೆಯೂ ಮುಳುಗುತ್ತಿದ್ದಾಗ ಬಾಲಕಿಯೋರ್ವಳು ಆಕೆಗೆ ಡ್ರಿಪ್ ಪೈಪ್ ನೀಡಿ ಪಾರು ಮಾಡಿದ್ದಾಳೆ. ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಮೃತದೇಹಗಳನ್ನ ಹೊರತೆಗೆದಿದ್ದಾರೆ. ಸದ್ಯ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತರ ಕಣ್ಣುಗಳನ್ನು ದಾನ ಮಾಡಿ ಸಾವನಲ್ಲೂ ಸಹ ಸಾರ್ಥಕತೆ ಮೆರೆದಿದ್ದಾರೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…