ಇದೇ ತಿಂಗಳ 14ನೇ ತಾರೀಕಿನಂದು ಸ್ನೇಹಿತರ ಮಧ್ಯೆ ಐಫೋನ್ ವಿಚಾರಕ್ಕಾಗಿ ಜಗಳ ವಾಗಿದ್ದು ಮೈಸೂರು ನಗರದ ತಾವರೆಕಟ್ಟೆಯ ಬಳಿ ತಾವರೆಕೆರೆಯ ಪಕ್ಕದ ಖಾಲಿ ಜಾಗದಲ್ಲಿ ನಿತಿನ್ ಎಂಬ ಯುವಕನನ್ನು ಆತನ ಸ್ನೇಹಿತರೆ ಕೊಲೆ ಮಾಡಿರುವಂತಹ ಘಟನೆ ನಡೆದಿರುತ್ತದೆ. 14ನೇ ತಾರೀಕು ನಿತಿನ್ ಹಾಗೂ ಆತನ ಇಬ್ಬರು ಸ್ನೇಹಿತರು ಮದ್ಯಾ ಸೇವಿಸಿದ್ದು ನಂತರ ಇವರುಗಳ ಮಧ್ಯೆ ಐಫೋನ್ ವಿಚಾರಕ್ಕಾಗಿ ಗಲಾಟೆ ಆರಂಭವಾಗಿದ್ದು, ಇಬ್ಬರು ಸ್ನೇಹಿತರು ನಿತಿನನ್ನು ತಾವರೆಕೆರೆಯ ಪಕ್ಕದಲ್ಲಿರುವ ಕಾಲಿ ಜಾಗಕ್ಕೆ ಕರೆತಂದು ಅವನ ತಲೆಯ ಮೇಲೆ ಕಲ್ಲನ್ನು ಎತ್ತಿ ಹಾಕಿ ಕೊಲೆ ಮಾಡಿರುತ್ತಾರೆ.
ಈ ವಿಚಾರವಾಗಿ ನಜರಾಬಾದ್ ಪೊಲೀಸರು 15ನೇ ತಾರೀಖಿನಂದು ನಿತಿನ್ನ ಇಬ್ಬರು ಸ್ನೇಹಿತರನ್ನು ದಸ್ತಗಿರಿ ಮಾಡಿ ವಿಚಾರಣೆ ನಡೆಸಿದಾಗ ಅವರುಗಳೇ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿರುತ್ತಾರೆ.
ಐಫೋನ್ ವಿಚಾರಕ್ಕಾಗಿ ನಡೆದ ಕೊಲೆ ಪ್ರಕರಣ ಭೇದಿಸಿರುವ ಪೊಲೀಸರು ಆರೋಪಿಗಳನ್ನು ಜೈಲಿಗಟ್ಟಿದ್ದಾರೆ.
ಘಟನೆ ನಡೆದ ಒಂದೇ ದಿನಕ್ಕೆ ಪ್ರಕರಣವನ್ನು ಭೇದಿಸಿ ಆರೋಪಿಗಳನ್ನು ಪತ್ತೆ ಹಚ್ಚಿರುವ ನಜರಾಬಾದ್ ಪೊಲೀಸರನ್ನು ಮೈಸೂರು ನಗರ ಪೊಲೀಸ್ ಆಯುಕ್ತರು ಪ್ರಶಂಸಿರುತ್ತಾರೆ.
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…