Latest

ಮೈಸೂರಿನಲ್ಲಿ ದಾರುಣ ಘಟನೆ: ಕುಟುಂಬದ ನಾಲ್ವರು ಆತ್ಮಹತ್ಯೆ, ಡೆತ್ ನೋಟ್ ಪತ್ತೆ

ಮೈಸೂರಿನ ವಿಶ್ವೇಶ್ವರಯ್ಯನಗರದ ಅಪಾರ್ಟ್ಮೆಂಟ್‌ನಲ್ಲಿ ಒಂದು ಕುಟುಂಬದ ನಾಲ್ವರು  ಸಾವನ್ನಪ್ಪಿದ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಮೃತರು ಕುಶಾಲ್ (15), ಚೇತನ್ (45), ರೂಪಾಲಿ (43) ಮತ್ತು ಪ್ರಿಯಂವಧಾ (62) ಎಂದು ಗುರುತಿಸಲಾಗಿದೆ. ಈ ದಾರುಣ ಘಟನೆಯಲ್ಲಿ ಚೇತನ್ ಮೊದಲಿಗೆ ತಾಯಿ, ಪತ್ನಿ ಮತ್ತು ಮಗನಿಗೆ ವಿಷ ನೀಡಿ ಬಳಿಕ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.

ಘಟನಾ ವಿವರ:
ಮೃತ ಚೇತನ್ ಹಾಸನ ಜಿಲ್ಲೆಯ ಗೊರೂರು ಮೂಲದವರು, 2019 ರಿಂದ ಮೈಸೂರಿನಲ್ಲಿ ನೆಲೆಸಿದ್ದರು. ಅವರು ವಿದೇಶಕ್ಕೆ ಕಾರ್ಮಿಕರನ್ನು ಕಳುಹಿಸುವ ಉದ್ಯಮದಲ್ಲಿದ್ದರು. ಅವರ ಪತ್ನಿ ರೂಪಾಲಿ ಮೈಸೂರಿನವರಾಗಿದ್ದರು. ಕುಟುಂಬವು ಶನಿವಾರ ಗೊರೂರು ದೇವಾಲಯಕ್ಕೆ ಭೇಟಿ ನೀಡಿ, ಭಾನುವಾರ ಸಂಜೆ ಮನೆಗೆ ಮರಳಿದ್ದರೆಂದು ಮಾಹಿತಿ ಲಭ್ಯವಾಗಿದೆ.

ಪೊಲೀಸ್ ತನಿಖೆ:
ಘಟನೆಯ ಮಾಹಿತಿ ದೊರಕುತ್ತಿದ್ದಂತೆ ಮೈಸೂರು ಪೊಲೀಸ್ ಕಮಿಷನರ್ ಸೀಮಾ ಲಾಟ್ಕರ್, ಡಿಸಿಪಿ ಜಾಹ್ನವಿ, ವಿದ್ಯಾರಣ್ಯಪುರಂ ಪೊಲೀಸ್ ಇನ್ಸ್‍ಪೆಕ್ಟರ್ ಮೋಹಿತ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪ್ರಕರಣವನ್ನು ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ದಾಖಲಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ಮುಂದುವರಿಯುತ್ತಿದೆ.

ಡೆತ್ ನೋಟ್:
ಪೊಲೀಸರು ಮನೆಯಲ್ಲಿರುವ ಡೆತ್ ನೋಟ್ ಪತ್ತೆ ಮಾಡಿದ್ದು, ಅದರಲ್ಲಿ ಚೇತನ್ ತಮ್ಮ ಸಾವಿಗೆ ಹಣಕಾಸಿನ ಸಮಸ್ಯೆಯೇ ಕಾರಣ ಎಂದು ಸ್ಪಷ್ಟಪಡಿಸಿದ್ದಾರೆ. “ನಮ್ಮ ಸಾವಿಗೆ ಯಾರೂ ಹೊಣೆಗಾರರಲ್ಲ. ನಮ್ಮ ಸ್ನೇಹಿತರು, ಸಂಬಂಧಿಕರಿಗೆ ತೊಂದರೆ ಕೊಡಬೇಡಿ. ಕ್ಷಮಿಸಿ, I AM SORRY” ಎಂದು ಚೇತನ್ ಡೆತ್ನೋಟ್‌ನಲ್ಲಿ ಬರೆದಿರುವುದು ಬೆಳಕಿಗೆ ಬಂದಿದೆ.

ಈ ದುರ್ಘಟನೆಯಿಂದ ಆತನ ಸ್ನೇಹಿತರು, ಕುಟುಂಬಸ್ಥರು ಮತ್ತು ನೆರೆಹೊರೆಯವರು ತೀವ್ರ ಆಘಾತಕ್ಕೆ ಒಳಗಾಗಿದ್ದಾರೆ.

nazeer ahamad

Recent Posts

ಹಿರಿಯ ಸೇನಾ ಅಧಿಕಾರಿ ಮತ್ತು ಆತನ ಪುತ್ರನ ಮೇಲೆ ಪೊಲೀಸ್ ಹಲ್ಲೆ: 12 ಅಧಿಕಾರಿಗಳು ಅಮಾನತು

ಪಟಿಯಾಲಾದಲ್ಲಿ ಹಿರಿಯ ಸೇನಾ ಅಧಿಕಾರಿ ಪುಷ್ಪಿಂದರ್ ಸಿಂಗ್ ಬಾತ್ ಮತ್ತು ಅವರ ಮಗ ಅಂಗದ್ ಸಿಂಗ್ ಮೇಲೆ ಮೂವರು ಪಂಜಾಬ್…

13 hours ago

ಪತಿಗೆ ಮದ್ಯ ಕುಡಿಸಿ ನವವಿವಾಹಿತೆಯ ಮೇಲೆ ಅತ್ಯಾಚಾರ…!

ಒಡಿಶಾದ ಬಾಲಸೋರ್ ಜಿಲ್ಲೆಯ ಜಲೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಬಲಿಯಾಪಾಳ ಗ್ರಾಮದಲ್ಲಿ ನೊಂದ ಮಹಿಳೆಯ ನೆರೆಮನೆಯವನೊಬ್ಬ ಅತ್ಯಾಚಾರ ಎಸಗಿದ ಘಟನೆಯು…

13 hours ago

ರಾಜ್ಯದಲ್ಲೇ ಅತಿದೊಡ್ಡ ಖೋಟಾ ನೋಟು ಜಾಲ ಪತ್ತೆ: ಕಾನ್ಸ್‌ಸ್ಟೇಬಲ್ ಸೇರಿ ನಾಲ್ವರು ಬಂಧನ

ರಾಯಚೂರಿನ ಪಶ್ಚಿಮ ಠಾಣೆ ಪೊಲೀಸರು ರಾಜ್ಯದಲ್ಲೇ ಅತಿದೊಡ್ಡ ಖೋಟಾ ನೋಟು ಜಾಲವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ದಂಧೆಯಲ್ಲಿ ತೊಡಗಿದ್ದ ಪೊಲೀಸರು…

13 hours ago

ಪಾಕ್ ಕ್ರಿಕೆಟಿಗ ರಜಾ ಹಸನ್ ಭಾರತ ಮೂಲದ ಪೂಜಾ ಬೊಮನ್ ಜೊತೆ ಎಂಗೇಜ್: ನ್ಯೂಯಾರ್ಕ್‌ನಲ್ಲಿ ಸೆಟಲ್

ಪಾಕಿಸ್ತಾನ ಕ್ರಿಕೆಟಿಗ ರಜಾ ಹಸನ್ ಭಾರತ ಮೂಲದ ಹಿಂದೂ ಯುವತಿ ಪೂಜಾ ಬೊಮನ್ ಜೊತೆ ನ್ಯೂಯಾರ್ಕ್‌ನಲ್ಲಿ ಸೆಟಲ್ ಆಗಿದ್ದು, ಇವರ…

13 hours ago

ಕ್ರಿಸ್ ಗೇಲ್ ಹೆಸರು ದುರುಪಯೋಗಿಸಿ 2.8 ಕೋಟಿ ರೂ. ವಂಚನೆ: ಹೈದರಾಬಾದ್‌ನಲ್ಲಿ ಹೂಡಿಕೆ ಹಗರಣ

ಹೈದರಾಬಾದ್‌ನಲ್ಲಿ ವ್ಯಕ್ತಿಯೊಬ್ಬ ಪಶ್ಚಿಮ ಇಂಡೀಸ್ ಕ್ರಿಕೆಟಿಗ ಕ್ರಿಸ್ ಗೇಲ್ ಹೆಸರನ್ನು ಬಳಸಿಕೊಂಡು 2.8 ಕೋಟಿ ರೂ. ವಂಚನೆ ನಡೆಸಿದ ಘಟನೆ…

13 hours ago

ಹಫೀಜ್ ಸಯೀದ್ ಸಾವಿನ ವದಂತಿಗಳು: ಪಾಕಿಸ್ತಾನಿ ಪತ್ರಕರ್ತೆ ಮೋನಾ ಆಲಂ ಸ್ಪಷ್ಟನೆ

ಪಾಕಿಸ್ತಾನದ ಲಷ್ಕರ್-ಎ-ತೊಯ್ಬಾ ಉಗ್ರ ಸಂಘಟನೆಯ ಮುಖ್ಯಸ್ಥ ಹಫೀಜ್ ಸಯೀದ್ ಕೊಲ್ಲಲ್ಪಟ್ಟಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಪಾಕಿಸ್ತಾನಿ ಪತ್ರಕರ್ತೆ ಮೋನಾ ಆಲಂ…

13 hours ago