Latest

ಶಸ್ತ್ರಚಿಕಿತ್ಸೆಯ ವೇಳೆ ವೈದ್ಯರ ನಿರ್ಲಕ್ಷ್ಯ: ಗರ್ಭಿಣಿಯ ಹೊಟ್ಟೆಯೊಳಗೆ ಬಟ್ಟೆ ಬಿಟ್ಟು ಜೀವಕ್ಕೆ ಅಪಾಯ!

ಇತ್ತೀಚಿನ ದಿನಗಳಲ್ಲಿ ರಾಜ್ಯದಲ್ಲಿ ವೈದ್ಯರ ನಿರ್ಲಕ್ಷ್ಯದ ಪ್ರಕರಣಗಳು ಬೆಳಕಿಗೆ ಬರುತ್ತಿದ್ದು, ಇದರಿಂದ ಅನೇಕರು ತಮ್ಮ ಪ್ರಾಣಕ್ಕೆ ಭಯಪಡುವಂತಾಗಿದೆ. ಸಿಸೇರಿಯನ್ ಶಸ್ತ್ರಚಿಕಿತ್ಸೆಯ ವೇಳೆ ವೈದ್ಯರ ಅಜಾಗರೂಕತೆಯಿಂದ ಶಸ್ತ್ರಚಿಕಿತ್ಸೆಗೆ ಬಳಸಿದ ವಸ್ತುಗಳನ್ನು ರೋಗಿಯ ದೇಹದಲ್ಲೇ ಉಳಿಯುವಂತಹ ಭಯಾನಕ ಘಟನೆಗಳು ಒಂದರ ಬಳಿಕ ಒಂದರಂತೆ ನಡೆದಿವೆ.

ಇತ್ತೀಚಿನ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ. ಆರ್ಯಾಪು ಗ್ರಾಮದ ಬಂಗಾರಡ್ಕ ನಿವಾಸಿ ಶರಣ್ಯ ಲಕ್ಷ್ಮಿ ಹೆರಿಗೆಗಾಗಿ 2024ರ ನವೆಂಬರ್ 27ರಂದು ಆಸ್ಪತ್ರೆಗೆ ದಾಖಲಾಗಿದ್ದರು. ನಾರ್ಮಲ್ ಡೆಲಿವರಿ ಸಾಧ್ಯವಾಗದೆ, ವೈದ್ಯರು ಸಿಸೇರಿಯನ್ ಮಾಡಿ ಹೆರಿಗೆ ನಡೆಸಿದರು.

ಆಪರೇಷನ್ ಯಶಸ್ವಿಯಾಗಿ ಮುಗಿದ ಬಳಿಕ, ಡಿಸೆಂಬರ್ 2ರಂದು ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಆದರೆ ಮನೆಗೆ ಮರಳಿದ ಕೆಲ ದಿನಗಳ ನಂತರ, ಶರಣ್ಯ ಲಕ್ಷ್ಮಿ ತೀವ್ರ ಜ್ವರಕ್ಕೆ ಒಳಗಾದರು. ಇದರಿಂದ ಆತಂಕಗೊಂಡ ಅವರ ಕುಟುಂಬಸ್ಥರು ಚಿಕಿತ್ಸೆ ನೀಡಿದ ವೈದ್ಯ ಡಾ. ಅನಿಲ್ ಕುಮಾರ್ ಅವರನ್ನು ಸಂಪರ್ಕಿಸಿದರು. ಆದರೆ ವೈದ್ಯರು ಕೇವಲ ಜ್ವರದ ಔಷಧಿ ನೀಡಿ ನಿರ್ಲಕ್ಷ್ಯ ತೋರಿದರು.

ಜ್ವರ ಮುಂದುವರಿದು, ಶರಣ್ಯ ಲಕ್ಷ್ಮಿ ಎದ್ದು ನಿಲ್ಲಲು ಕೂಡ ಕಷ್ಟ ಅನುಭವಿಸುತ್ತಿದ್ದರು. ಇದರಿಂದ ಬೇರೆ ಆಸ್ಪತ್ರೆಯ ವೈದ್ಯರನ್ನು ಸಂಪರ್ಕಿಸಿದ ಕುಟುಂಬ ಸದಸ್ಯರು, ಅವರ ಸಲಹೆಯ ಮೇರೆಗೆ ಸಿಟಿ ಸ್ಕ್ಯಾನ್ ಮಾಡಿಸಿದರು. ತಕ್ಷಣವೇ ಶಾಕ್ ಆಗುವಂತಹ ವಿಚಾರ ಬೆಳಕಿಗೆ ಬಂದಿದೆ—ಆಪರೇಷನ್ ವೇಳೆ ಬಳಸಿದ ಶಸ್ತ್ರಚಿಕಿತ್ಸಾ ಬಟ್ಟೆ (ಸರ್ಜಿಕಲ್ ಗೋಜ) ಹೊಟ್ಟೆಯೊಳಗಡೆ ಉಳಿದಿತ್ತು!

ಇದೇ ತಿಳಿಯುತ್ತಿದ್ದಂತೆ, ತಕ್ಷಣವೇ ಮತ್ತೊಮ್ಮೆ ಶಸ್ತ್ರಚಿಕಿತ್ಸೆ ಮಾಡಿಸಿ, ಹೊಟ್ಟೆಯೊಳಗಿದ್ದ ಬಟ್ಟೆಯನ್ನು ಹೊರತೆಗೆದುಕೊಳ್ಳಲಾಯಿತು. ಸದ್ಯ, ಶರಣ್ಯ ಲಕ್ಷ್ಮಿಯ ಪತಿ ಗಗನ್ ಈ ಕುರಿತು ಪೊಲೀಸ್ ಠಾಣೆಗೆ ದೂರು ನೀಡಿದ್ದು, ವೈದ್ಯ ಅನಿಲ್ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.

ಇದು ಮೊದಲು ನಡೆದಂತಹ ಘಟನೆಯಲ್ಲ. ಫೆಬ್ರವರಿ 23ರಂದು ಕಲಬುರ್ಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಭಾಗ್ಯಶ್ರೀ ಎಂಬ ಮಹಿಳೆಯಿಗೂ ಹಾಗೂ ಫೆಬ್ರವರಿ 19ರಂದು ಚಿಕ್ಕೋಡಿ ತಾಲೂಕಿನ ಮುಗಳಿ ಗ್ರಾಮದ ಶ್ರುತಿ ರಾಜು ಬಡಿಗೇರ್ ಎಂಬಾಕೆಯಿಗೂ ಇದೇ ರೀತಿ ಶಸ್ತ್ರಚಿಕಿತ್ಸೆ ವೇಳೆ ವೈದ್ಯರು ಬಟ್ಟೆ, ಕಾಟನ್ ಹೊಟ್ಟೆಯೊಳಗೇ ಉಳಿಯುವ ದೋಷ ಮಾಡಿದ್ದರು.

ಇಂತಹ ನಿರ್ಲಕ್ಷ್ಯದಿಂದ ಜನರ ಜೀವಕ್ಕೆ ತೀವ್ರ ಅಪಾಯ ಉಂಟಾಗುತ್ತಿದೆ. ವೈದ್ಯಕೀಯ ಜಾಗೃತಿಯ ಕೊರತೆ, ಪರಿಣಾಮಕಾರಿಯಲ್ಲದ ಮೇಲ್ವಿಚಾರಣೆಯಿಂದ ಈ ರೀತಿಯ ಘಟನೆಗಳು ನಡೆಯುತ್ತಿದ್ದು, ಆರೋಗ್ಯ ಇಲಾಖೆಯಿಂದ ತಕ್ಷಣ ಕಠಿಣ ಕ್ರಮ ಕೈಗೊಳ್ಳುವ ಅಗತ್ಯವಿದೆ.

nazeer ahamad

Recent Posts

ಶಿಕ್ಷಕಿ ಅಮಾನತು: ಪದ್ಯ ಕಂಠಪಾಠ ಮಾಡಲು ವಿಫಲನಾದ ವಿದ್ಯಾರ್ಥಿಗೆ ಹೊಡೆದ ಆರೋಪ

ಚೆನ್ನೈ: ಮೂರನೇ ತರಗತಿಯ ವಿದ್ಯಾರ್ಥಿಗೆ ಹಿಂದಿ ಪದ್ಯ ಕಂಠಪಾಠ ಮಾಡಲಾಗದ ಕಾರಣ ಹಿನ್ನಲೆಯಲ್ಲಿ ಶಿಕ್ಷಕಿ ದೈಹಿಕ ಶಿಕ್ಷೆ ನೀಡಿದ ಆರೋಪಕ್ಕೆ…

8 minutes ago

ಪ್ರಶ್ನೆಗೆ ಉತ್ತರಿಸದ ವಿದ್ಯಾರ್ಥಿಗೆ ಶಿಕ್ಷಕರಿಂದ ಕ್ರೂರ ಹಲ್ಲೆ – ಬಾಲಕನ ಕಾಲು ಮುರಿದ ಘಟನೆ!

ಉತ್ತರಪ್ರದೇಶದ ಹರ್ದೋಯ್ ಜಿಲ್ಲೆಯಲ್ಲಿ ನಡೆದ ಅಘಾತಕಾರಿ ಘಟನೆಯೊಂದು ವಿದ್ಯಾರ್ಥಿಗಳ ಸುರಕ್ಷತೆಯ ಕುರಿತು ಗಂಭೀರವಾದ ಪ್ರಶ್ನೆಗಳನ್ನು ಎಬ್ಬಿಸಿದೆ. ವಿದ್ಯಾರ್ಥಿಯೊಬ್ಬನು ಪ್ರಶ್ನೆಗೆ ಉತ್ತರಿಸದ…

29 minutes ago

ಖಾನಾಪುರದಲ್ಲಿ ಮತ್ತೆ ಕನ್ನಡಿಗರ ಮೇಲೆ ಹಲ್ಲೆ: ಮರಾಠಿ ಯುವಕರ ದಾಳಿಯಿಂದ ಆತಂಕ

ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಮರಾಠಿ ಯುವಕರ ಗೂಂಡಾಗಿರಿ ಮತ್ತೊಮ್ಮೆ ಮರುಕಳಿಸಿದ್ದು, ಕನ್ನಡ ಮಾತನಾಡಿದ ಕಾರಣಕ್ಕೆ ಕರ್ನಾಟಕ ರಕ್ಷಣಾ ವೇದಿಕೆಯ ನಾಯಕನ…

2 hours ago

ಪೊಲೀಸರ ವಶದಲ್ಲಿದ್ದ ಕೊಲೆ ಆರೋಪಿಯ ಅನುಮಾನಾಸ್ಪದ ಸಾವು: ಕುಟುಂಬದವರ ಆಕ್ರೋಶ

ಕಲಬುರಗಿ: ನಗರದ ರೋಜಾ ಠಾಣೆ ವ್ಯಾಪ್ತಿಯಲ್ಲಿ ಘಟಿಸಿದ ಘಟನೆಗೆ ಸಂಬಂಧಿಸಿದಂತೆ ಬಂಧಿತ ಆರೋಪಿ ಪೊಲೀಸರ ವಶದಲ್ಲಿಯೇ ಅನುಮಾನಾಸ್ಪದವಾಗಿ ಸಾವನ್ನಪ್ಪಿರುವುದು ಚರ್ಚೆಗೆ…

2 hours ago

ಬೊಮ್ಮನಹಳ್ಳಿ: ಅಪ್ರಾಪ್ತೆಯ ಮೇಲೆ ಅತ್ಯಾಚಾರ ಎಸಗಿದ ಕಾನ್ಸ್‌ಟೆಬಲ್…!

ಬೆಂಗಳೂರು: ಬೊಮ್ಮನಹಳ್ಳಿ ಪೊಲೀಸ್ ಠಾಣೆಯ ಕಾನ್ಸ್‌ಟೆಬಲ್ ಅರುಣ್ ಅಪ್ರಾಪ್ತ ಬಾಲಕಿಯನ್ನು ನಂಬಿಸಿ ಅತ್ಯಾಚಾರ ಎಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿಯು…

3 hours ago

ಕರ್ತವ್ಯ ನಿರತ ಮಹಿಳಾ ಕಾನ್‌ಸ್ಟೇಬಲ್‌ಗೆ ಅವಾಚ್ಯ ಶಬ್ದಗಳಿಂದ ನಿಂದನೆ – ಇಬ್ಬರ ವಿರುದ್ಧ ಎಫ್‌ಐಆರ್‌

ಬೆಂಗಳೂರು: ಕರ್ತವ್ಯ ನಿರತ ಮಹಿಳಾ ಕಾನ್‌ಸ್ಟೇಬಲ್‌ ವಿರುದ್ಧ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿದ ಆರೋಪದ ಮೇಲೆ ಇಬ್ಬರ ವಿರುದ್ಧ ಹುಳಿಮಾವು…

4 hours ago