Latest

ಕುಖ್ಯಾತ ಕಳ್ಳನ ಬಂದನ!!

ಬೀದರ್: ನಗರದ ಆದರ್ಶ ಹಾಗೂ ಜ್ಯೋತಿ ಕಾಲೊನಿಯಲ್ಲಿ ಸರಣಿ ಮನೆಗಳ್ಳತನ ಮಾಡಿದ್ದ ಕುಖ್ಯಾತ ಕಳ್ಳನನ್ನು ಬಂಧಿಸಿರುವ ಪೊಲೀಸರು ಆತನಿಂದ ₹ 10 ಲಕ್ಷ ಮೌಲ್ಯದ 20 ತೊಲಾ ಚಿನ್ನಾಭರಣ ವಶ ಪಡಿಸಿಕೊಂಡಿದ್ದಾರೆ.
ಈತ ನಗರದಲ್ಲಿ ಒಟ್ಟು ಏಳು ಮನೆಗಳ ಬೀಗ ಒಡೆದಿದ್ದ. ನಾಲ್ಕು ಮನೆಗಳಲ್ಲಿ ಅವನಿಗೆ ಏನೂ ದೊರಕಿರಲಿಲ್ಲ. ರೈಲು ಹಳಿಯ ಪಕ್ಕದಲ್ಲಿರುವ ಆದರ್ಶ, ಜ್ಯೋತಿ ಕಾಲೊನಿಯಲ್ಲಿ ಇರುವ ಮೂರು ಮನೆಗಳಲ್ಲಿ ಕಳ್ಳತನ ಮಾಡಿದ್ದ. ರೈಲು ಹೋಗುವಾಗ ಹಾಗೂ ಬರುವಾಗ ಆಗುತ್ತಿದ್ದ ಸಪ್ಪಳದ ಸಂದರ್ಭದಲ್ಲಿ ವ್ಯವಸ್ಥಿತವಾಗಿ ಬೀಗ ಒಡೆಯುತ್ತಿದ್ದ. ಚಿಲಕಗಳಿಗೆ ಕೆಮಿಕಲ್‌ ಸ್ಪ್ರೆ ಮಾಡಿ ಶಬ್ದ ಬರದಂತೆ ಎಚ್ಚರ ವಹಿಸುತ್ತಿದ್ದ. ಕೆಲವು ಮನೆಗಳಲ್ಲಿ ಮನೆಯ ಮಾಲೀಕರು ಮನೆಯೊಳಗೆ ಮಲಗಿದ್ದಾಗಲೇ ಕಳ್ಳತನ ಮಾಡಿ ತನ್ನ ಕೈ ಚಳಕ ತೋರಿಸಿದ್ದ.
ಮುಖ್ಯ ಬಾಗಿಲಿನ ಚಿಲಕ ಮುರಿದು ಒಳಗೆ ಬಂದ ನಂತರ ತಾನು ಮರಳಿ ಓಡಿ ಹೋಗಲು ಒಂದು ಕೊಠಡಿಯ ಬಾಗಿಲನ್ನು ತೆರೆದಿಡುತ್ತಿದ್ದ, ಮನೆಯಲ್ಲಿನ ಬೆಡ್‌ರೂಮ್‌ಗಳಿಗೆ ಹೊರಗಿನಿಂದ ನಿಧಾನವಾಗಿ ಚಿಲಕ ಹಾಕುತ್ತಿದ್ದ. ಗಾಢ ನಿದ್ರೆಯಲ್ಲಿ ಇರುತ್ತಿದ್ದವರಿಗೆ ಕಳ್ಳತನ ಮಾಡಿ ಹೋಗಿರುವುದು ಗೊತ್ತೇ ಆಗುತ್ತಿರಲಿಲ್ಲ.
ಮಹಿಳೆಯರ ಸಹವಾಸ ಹಾಗೂ ಕುಡಿತದ ಚಟ ಹೊಂದಿರುವ ಆರೋಪಿ ಒಬ್ಬನೇ ಚಾಣಕ್ಷತನದಿಂದ ಕಳ್ಳನತ ಮಾಡುವುದನ್ನು ರೂಢಿಸಿಕೊಂಡಿದ್ದಾನೆ. ಇವನಿಗೆ ಸೊಲ್ಲಾಪುರದಲ್ಲಿ ಹೆಂಡತಿ, ಮಕ್ಕಳೂ ಇದ್ದಾರೆ. ಕಳ್ಳತನವನ್ನೇ ವೃತ್ತಿ ಮಾಡಿಕೊಂಡಿದ್ದಾನೆ. ಒಂದು ಕಡೆ ಕಳ್ಳತನ ಮಾಡಿ ಸಿಕ್ಕಿಬಿದ್ದ ಮೇಲೆ ಜಾಮೀನಿನ ಮೇಲೆ ಹೊರಗೆ ಬಂದ ನಂತರ ಮತ್ತೆ ಬೇರೆ ಕಡೆ ಕಳ್ಳನತ ಮಾಡುವ ಪ್ರವೃತ್ತಿ ಬೆಳೆಸಿಕೊಂಡಿದ್ದಾನೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.
ರಾಯಚೂರು, ಗದಗ, ಹುಬ್ಬಳ್ಳಿ, ಧಾರವಾಡ, ವಿಜಯಪುರ, ಬಾಗಲಕೋಟೆ, ಬಾದಾಮಿ ಹಾಗೂ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿ ನಡೆದ ಮನೆಗಳ್ಳತನ ಪ್ರಕರಣದಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಅಲ್ಲಿಯ ಪೊಲೀಸ್‌ ಠಾಣೆಗಳಲ್ಲಿ ಆರೋಪಿ ವಿರುದ್ಧ ಪ್ರಕರಣಗಳೂ ದಾಖಲಾಗಿವೆ.
ಗಾಂಧಿ ಗಂಜ್‌ನ ಪೊಲೀಸ್‌ ಇನ್‌ಸ್ಪೆಕ್ಟರ್ ಜಿ.ಎಸ್.ಬಿರಾದಾರ, ಬೀದರ್‌ ಗ್ರಾಮೀಣ ಸಿಪಿಐ ಶ್ರೀಕಾಂತ ಅಲ್ಲಾಪುರೆ, ಪಿಎಸ್‌ಐ ಸಯ್ಯದ್‌ ಪಟೇಲ್, ದಯಾನಂದ ಮಡಿವಾಳ, ಸಿಬ್ಬಂದಿ ಆರೀಫ್ ನವಿನ್‌, ಅನಿಲ, ಇರ್ಫಾನ್‌ ಗಂಗಾಧರ, ಪ್ರವೀಣ ಹಾಗೂ ಶ್ರೀನಿವಾಸ ಅವರನ್ನೊಳಗೊಂಡ ತಂಡ ಆರೋಪಿಯನ್ನು ಬಂಧಿಸಿದೆ.
ಕುಖ್ಯಾತ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದ ಪೊಲೀಸ್‌ ಅಧಿಕಾರಿಗಳಿಗೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಿ.ಕಿಶೋರ ಬಾಬು ಬಹುಮಾನ ವಿತರಿಸಿದರು.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago