Latest

ಸರ್ಕಾರಿ ಪಗಾರ ತಿಂದು ಊರು ತಿರುಗುತ್ತಿರುವ ಕೋಲೂರ ಗ್ರಾಮ ಪಂಚಾಯತಿ ಅಧಿಕಾರಿಗಳು.

ಬಾಗಲಕೋಟೆ: ಜಿಲ್ಲೆಯ ಬೀಳಗಿ ತಾಲ್ಲೂಕಿನ ಕೋಲೂರ ಗ್ರಾಮ ಪಂಚಾಯತಿ ಪಿಡಿಒ ಮಾಲಾಶ್ರೀ ಬಿ ಕೆಂಚನಗೌಡರ ಮತ್ತು ಕಾರ್ಯದರ್ಶಿ ಹಣಮಂತ ಎಸ್ ಗಾಣಿಗೇರ ಇವರು ಇಬ್ಬರೂ ಸರಿಯಾಗಿ ಕಾರ್ಯ ನಿರ್ವಹಿಸುತ್ತಿಲ್ಲ ಹಾಗೂ ಸರಿಯಾದ ಸಮಯಕ್ಕೆ ಕಛೇರಿಗೆ ಬರುತ್ತಿಲ್ಲವೆಂದು ಇಲ್ಲಿಯ ಸ್ಥಳೀಯ ಯುವಕರು ನಮ್ಮ ಪತ್ರಿಕೆಗೆ ತಿಳಿಸಿದ್ದಾರೆ.
ದಿನನಿತ್ಯವೂ ಗ್ರಾಮದ ಜನರು ಒಂದಲ್ಲ ಒಂದು ಕೆಲಸಕ್ಕೆ ಪಂಚಾಯತಿಗೆ ಹೋಗಲೆಬೇಕಾಗುತ್ತದೆ ಆದರೆ ಇಲ್ಲಿ ಅಧಿಕಾರಿಗಳೆ ಇಲ್ಲದಿದ್ದರೆ ಗ್ರಾಮಸ್ಥರ ಗೋಳನ್ನು ಕೇಳುವವರು ಯಾರೂ?
ದಿನವಿಡೀ ಕಾದು ಕುಳಿತರು ಸಹ ಪಿಡಿಒ ಹಾಗೂ ಕಾರ್ಯದರ್ಶಿ ಗ್ರಾಮ ಪಂಚಾಯತಿಗೆ ಬರುವುದಿಲ್ಲ.
ಪಿಡಿಒ ಮಾಲಾಶ್ರೀ ಹಾಗೂ ಕಾರ್ಯದರ್ಶಿ ಹಣಮಂತ ಸರಿಯಾದ ಸಮಯಕ್ಕೆ ಹಾಜರಾಗುತ್ತಿಲ್ಲ. ತಮ್ಮ ಮನಸ್ಸಿಗೆ ಬಂದಾಗ ಬರುತ್ತಾರೆ ಸಾಕಾದರೆ ಹೋಗುತ್ತಾರೆ. ಇವರು ಇಬ್ಬರೂ ಮಧ್ಯಾಹ್ನ ಗಂಟೆ 12 ಆದರೂ ಕಛೇರಿಗೆ ಬರುವುದೇ ಇಲ್ಲವೆಂದು ತಿಳಿಸಿದರು.


ಪ್ರತಿನಿತ್ಯವೂ ಇದೆ ಗೋಳು ಅನುಭವಿಸಿ ಸ್ಥಳೀಯ ಯುವಕರೊಬ್ಬರು ಕಾರ್ಯದರ್ಶಿ ಹಣಮಂತನಿಗೆ ಕರೆ ಮಾಡಿ “ಸರ್ ನೀವು ಪಂಚಾಯತಿಗೆ ಎಷ್ಟು ಗಂಟೆಗೆ ಬರುತ್ತಿರಿ” ಎಂದು ಕೇಳಿದಾಗ ಆ ಯುವಕನಿಗೆ ಅದನ್ನು ಕೇಳೋಕೆ “ನೀ ಯಾರು ಲೇ” ಎಂಬ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ.
ಒಬ್ಬ ಪ್ರಜೆಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ ಎಂದರೆ ಈ ಕಾರ್ಯದರ್ಶಿಗೆ ಎಷ್ಟು ಸೊಕ್ಕಿರಬೇಡ? ನೀವೇ ಯೋಚಿಸಿ.
ಈ ವಿಚಾರವಾಗಿ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳಿಗೆ ಕರೆ ಮೂಲಕ ತಿಳಿಸಿದರು ಸಹ ಯಾವುದೇ ಕ್ರಮ ಕೈಗೊಂಡಿಲ್ಲ.
ಈ ವರದಿಯನ್ನು ಗಮನಿಸಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ತಾಲೂಕು ಪಂಚಾಯತಿ ಕಾರ್ಯ ನಿರ್ವಾಹಕ ಅಧಿಕಾರಿಗಳು ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು.

ವರದಿ: ವಿಶ್ವನಾಥ ಭಜಂತ್ರಿ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago