Latest

ಕಛೇರಿಗೇ ಬಾರದ ಪಿಡಿಓ ಮುತ್ತಣ್ಣ ಡೋಣಿಗೆ ಎರಡೆರಡು ಪಂಚಾಯತಿ ಬೇಕಿತ್ತಾ?

ಬಾಗಲಕೋಟೆ: ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ನಾಯನೆಗಲಿ ಗ್ರಾಮ ಪಂಚಾಯತಿಯಲ್ಲಿನ ಭ್ರಷ್ಟಾಚಾರದ ಪುರಾಣ ಕಥೆ. ಗ್ರಾಮ ಪಂಚಾಯಿತಿ 15 ನೇಯ ಹಣಕಾಸಿನಲ್ಲಿ ಭ್ರಷ್ಟಾಚಾರ ನಡೆದಿದೆ ಎಂಬುದಕ್ಕೆ ಪಂಚಾಯತಿಯ ವೆಬ್ಸೈಟ್ ನಲ್ಲಿ ಹಾಕಿರುವಂತಹ ಬಿಲ್ಲುಗಳು ಸಾಕ್ಷಿಯಾಗಿವೆ.
ದಿನಾಂಕ 26/06/2023 ರಂದು ತೆಗೆದ ಬಿಲ್ ವೋಚರಗಳು ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದ್ದಾವೆ.
ಏಕೆಂದರೆ ಆ ದಿನ ಅಮೋಘ ಏಜೆನ್ಸಿ ಇಳಕಲ್ ರವರಿಗೆ 1)43,669 2)69,258 3)48,095 4)64,758 5)46,386 ಈ ಐದು ಬಿಲ್ಲುಗಳನ್ನು ಹಾಕಿದ್ದು,
ಅದರಲ್ಲಿ ಸರಿಯಾದ ಮಾಹಿತಿ ಇಲ್ಲದೇ ಪ್ರಶ್ನಾರ್ಥಕ(?) ಚಿನ್ಹೆಗಳು ಎದ್ದು ಕಾಣುತ್ತಿವೆ.
ಪ್ರಶ್ನಾರ್ಥಕ ಚಿಹ್ನೆಗಳು ಹಣ ಹೊಡೆಯಲು ಹಾಕುತಿದ್ದಾರೋ?ಅಥವಾ ತಾಂತ್ರಿಕ ದೋಷದಿಂದ ಈ ರೀತಿ ಆಗುತ್ತಿದೆಯೋ?
ಇದಕ್ಕೆ ಉತ್ತರ ಪಿಡಿಓ ರವರೆ ನೀಡಬೇಕಿದೆ.
ಮಾಹಿತಿ ಕೇಳಲು ಸಂಪರ್ಕಿಸಿದಾಗ ಸ್ಪಷ್ಟ ಮಾಹಿತಿ ನೀಡದೆ ತಪ್ಪಿಸಿಕೊಳ್ಳುತಿದ್ದಾರೆ. ಇವರ ಈ ನಡೆ ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.
ದಿನಾಂಕ 21/08/2023 ರಂದು ಬಸವರಾಜ ತಿಪ್ಪಣ್ಣ ಬುದನೂರು ಎಂಬುವವರಿಗೆ 50,000 ರೂ ಗಳ ಮತ್ತೊಂದು ಬಿಲ್ಲನ್ನು ಹಾಕಿದ್ದು ಆ ಬಿಲ್ಲಿನ ವಿವರಣೆಯಲ್ಲಿಯು ಸಹ ಪ್ರಶ್ನಾರ್ಥಕ ಚಿನ್ಹೆಗಳು ಕಂಡು ಬಂದಿವೆ. ಪಿಡಿಓ ಮುತ್ತಣ್ಣ ಡೋಣಿ ಸರಿಯಾಗಿ ಪಂಚಾಯತಿಗೆ ಬರುವುದಿಲ್ಲ ಎಂಬ ಆರೋಪವು ಸಹ ಕೇಳಿಬರುತ್ತಿದೆ. ಗ್ರಾಮ ಅಭಿವೃದ್ದಿ ಆಗದ ಕಾರಣ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ತಾಂಡವಾಡುತ್ತಿರಬಹುದು ಎಂದು ಜನರು ಅನುಮಾನ ವ್ಯಕ್ತಪಡಿಸುತ್ತಿದ್ದಾರೆ.
ಈ ವ್ಯಕ್ತಿ ಕಾರ್ಯ ನಿರ್ವಹಿಸುತ್ತಿರುವ ಒಂದು ಪಂಚಾಯತಿ ಯಲ್ಲಿ ಇಷ್ಟೊಂದು ಆರೋಪಗಳು ಕೇಳಿಬರುತ್ತಿದ್ದು.ಇಂತವರನ್ನೆ ಎರೆಡೆರಡು ಪಂಚಾಯತಿಗೆ ನೇಮಕ ಮಾಡಿರುತ್ತಾರೆ.
ಒಂದೇ ಕೆಲಸ ಮಾಡದ ಸೊಂಬೇರಿಗೆ ಎರಡೆರಡು ಕೆಲಸವನ್ನು ವಹಿಸಿದಂತಾಗಿದೆ ಇಲ್ಲಿನ ಗ್ರಾಮ ಪಂಚಾಯಿತಿ ಪರಿಸ್ಥಿತಿ. ಈತನಿಗೆ ವಹಿಸಿದ ಒಂದು ಪಂಚಾಯತಿ ನಾಯನೆಗಲಿ ಆದರೆ ಮತ್ತೊಂದು ಚಿಕ್ಕ ಮ್ಯಾಗೇರಿ.
ಈ ಎರಡು ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಹಳ್ಳಿಗಳ ಅಭಿವೃದ್ದಿ ಕುಂಠಿತಗೊಂಡಲ್ಲಿ ಅದಕ್ಕೆ ಮೂಲ ಕಾರಣ ಈತನೇ ಎಂದರು ತಪ್ಪಾಗಲಾರದು.
ಸರ್ಕಾರದಲ್ಲಿ ಸಿಬ್ಬಂದಿಗಳ ಕೊರತೆ ಇದ್ದಲ್ಲಿ ಯೋಗ್ಯತೆ ಇರುವವರನ್ನು ಬಳಸಿಕೊಂಡು ಎರಡೆರಡು ಪಂಚಾಯತಿಗೆ ನೇಮಕ ಮಾಡಿಕೊಳ್ಳಬೇಕು, ಅದನ್ನು ಬಿಟ್ಟು ಇಂತವರಿಗೆ ಕೆಲಸ ವಹಿಸಿದರೆ ಗ್ರಾಮದ ಅಭಿವೃದ್ಧಿ ಹೇಗೆ ತಾನೇ ಆಗುತ್ತದೆ.
ಸರಿಯಾಗಿ ಕಾರ್ಯ ನಿರ್ವಹಿಸದ ವ್ಯಕ್ತಿಗೆ ಎರಡೆರಡು ಪಂಚಾಯತಿಗೆ ನೇಮಕ ಮಾಡುವ ಮೂಲಕ ಇ.ಓ ರವರು ಎಡವಿದ್ದಾರಾ? ಅಥವಾ ಇದರ ಹಿಂದೆ ಯಾವುದಾದರೂ ದುರುದ್ದೇಶವಿದೆಯಾ?
ಜಿಲ್ಲಾ ಪಂಚಾಯತಿ ಸಿ.ಇ.ಓ ರವರು ಈ ವಿಚಾರದ ಬಗ್ಗೆ ಆದಷ್ಟು ಬೇಗ ಗಮನ ಹರಿಸಿ ಸೂಕ್ತ ಕ್ರಮಕ್ಕೆ ಮುಂದಾಗುವ ಮೂಲಕ ಗ್ರಾಮಗಳ ಅಭಿವೃದ್ಧಿಗೆ ಒತ್ತು ಕೊಡಬೇಕಿದೆ.

ವರದಿ: ಸಂಗಪ್ಪ ಚಲವಾದಿ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago