ಹುಬ್ಬಳ್ಳಿಯ ಜನರು ಪ್ರತಿದಿನ ಒಂದಲ್ಲ ಒಂದು ಸಮಸ್ಯೆಗಳನ್ನು ಎದುರಿಸುತ್ತಲೇ ಇದ್ದಾರೆ ಇಲ್ಲಿನ ಜನರಿಗೆ ಸರಿಯಾದ ಮೂಲಭೂತ ಸೌಕರ್ಯಗಳಿಲ್ಲ ಓಡಾಡಲು ಸರಿಯಾದ ರಸ್ತೆಗಳಂತೂ ಇಲ್ಲ ಇನ್ನು ಚರಂಡಿಯ ನೀರು ಚರಂಡಿಯಲ್ಲಿ ಹರಿದುಕೊಂಡು ಹೋಗದೆ ರಸ್ತೆಯ ಮೇಲೆ ಹರಿಯುತ್ತಿದೆ. ಹೌದು ಹುಬ್ಬಳ್ಳಿಯ ಪ್ರತಿಷ್ಠಿತ ಕೇಶ್ವಾಪೂರದ ರಮೇಶ ಭವನ ಮುಂಭಾಗದಲ್ಲಿ ರಸ್ತೆಯ ಮಧ್ಯಭಾಗದಲ್ಲಿರುವ ಚರಂಡಿಯ ನೀರು ಸರಿಯಾಗಿ ಚರಂಡಿಯಲ್ಲಿ ಹರಿದುಕೊಂಡು ಹೋಗದೆ ರಸ್ತೆಯ ಮೇಲೆ ಹರಿದುಕೊಂಡು ಹೋಗುತ್ತಿದೆ. ಇದರಿಂದ ಸ್ಥಳೀಯ ಪಾದಚಾರಿಗಳಿಗೆ ಹಾಗೂ ಸಾರ್ವಜನಿಕರಿಗೆ ದುರ್ವಾಸನೆ ಬೀರುತ್ತಿದೆ, ಹೇಗಿದ್ದರೂ ಕೂಡ ಯಾವ ಒಬ್ಬ ಅಧಿಕಾರಿಯೂ ಇದರ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಇನ್ನೂ ಇಲ್ಲಿನ ಜನರು ಇಂತಹ ಸಮಸ್ಯೆಗಳ ಬಗ್ಗೆ ಸಾಕಷ್ಟು ಬಾರಿ ಕಾರ್ಪೊರೇಟರ್ ಹಾಗೂ ಪಾಲಿಕೆಯ ಆಯುಕ್ತರಿಗೆ ಮಾಹಿತಿ ನೀಡಿದ್ದರೂ ಕೂಡ ಕಿಂಚಿತ್ತೂ ಕಾಳಜಿ ವಹಿಸುತ್ತಿಲ್ಲ ಎಂದು ಸಾರ್ವಜನಿಕರು ಅಧಿಕಾರಿಗಳಿಗೆ ಇಡಿ ಶಾಪ ಹಾಕುತ್ತಿದ್ದಾರೆ.
ವರದಿ: ಶಿವ ಹುಬ್ಬಳ್ಳಿ
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…