Latest

ಬಂಟನೂರ ಗ್ರಾಮದಲ್ಲಿ ನೀರಿಗಾಗಿ ಪರದಾಡುತ್ತಿರುವ ಜನರು

ವಿಜಯಪುರ ಜಿಲ್ಲೆ ತಾಳಿಕೋಟಿ ತಾಲೂಕು ಬಂಟನೂರ ಗ್ರಾಮದಲ್ಲಿ ನೀರಿಗಾಗಿ ಪರದಾಡುತ್ತಿರುವ ಜನರು ಮತ್ತು ಮೂಖ ಪ್ರಾಣಿಗಳು ಗೋಳಾಟ ಕೇಳೋರು ಯಾರು ಇಲ್ಲ. ಯಾದಗಿರಿ ಜಿಲ್ಲೆ ಹುಣಸಗಿ ತಾಲೂಕು ನಾರಾಯಣಪುರ ಬಸವಸಾಗರ ಡ್ಯಾಂ ನಿಂದ ಕೃಷ್ಣಾ ಮೇಲ್ದಂಡೆ ಎಡದಂಡೆ ಕಾಲುವೆಯಿಂದ ಅಗ್ನಿ ಗ್ರಾಮದ ಹತ್ತಿರ ಕೆರಿಗೆ ನೀರು ಲಿಫ್ಟ್ ಮಾಡಿ ಅಲ್ಲಿಂದ ಬಹು ಹಳ್ಳಿಗಳಿಗೆ ಶುದ್ಧ ಕುಡಿಯೋ ನೀರು ಎಂದು 16 ಹಳ್ಳಿಗಳಿಗೆ ನೀರು ಸರಬರಾಜು ಮಾಡುತ್ತಾರೆ. ಈ ನೀರು ಜನರಿಗೆ ಕುಡಿಯೋಕೆ ಯಾವದೇ ರೀತಿ ನೀರು ಶುದ್ಧೀಕರಣ ಆಗಿವರುದಿಲ್ಲ. ಅದರಲ್ಲಿ ಈ ಹಳ್ಳಿಗಳ ಜನರಿಗೆ ನೀರು ಬಿಡುದು ವಾರದಲ್ಲಿ ಒಂದೇ ಒಂದು ದಿನ ಮಾತ್ರ ಅದರಲ್ಲೂ ಆ ಕೆರಿಯಲ್ಲಿ ಒಂದು ಪಂಪ್ ಮೊಟರ್ ಇದ್ದು ಅದು ಏನಾದರೂ ಕೆಟ್ಟರೆ ಅದನ್ನು ರಿಪೇರಿ ಮಾಡಲು ಬಾಗಲಕೋಟೆ ಯಿಂದ ಮೋಟರ್ ರಿಪೇರಿ ಮಾಡುವರು ಬರಬೇಕು ಅವರು ಬಂದು ಮೋಟರ್ ರಿಪೇರಿ ಮಾಡಿ ನೀರು ಬಿಡಬೇಕಾದರೆ ಕನಿಷ್ಠ 15 ರಿಂದ 20 ದಿನಗಳು ಕಾಲ ಬೇಕು ಅದು ಆದಮೇಲೆ ಇಲ್ಲನ ಗುತ್ತಿಗೆದಾರರು ಆ ಕೆರೆಯಲ್ಲಿ ಕೆಲಸ ಮಾಡುವ ಸಿಬ್ಬಂದಿಗಳಿಗೆ ಸಂಬಳ ಕೊಟ್ಟಿಲ್ಲ ಎಂದು ಬಂಟನೂರ ಗ್ರಾಮಕ್ಕೆ ನೀರು ಬಿಡದೆ 9 ದಿನಗಳು ಆಯಿತು, ಈ ಗ್ರಾಮದಲ್ಲಿ ನೀರು ಯಾವಾಗ ಬಿಟ್ಟರು ಅಥವಾ ಬಿಡದೆ ಇದ್ದರೂ ಕೇಳುವರು ಯಾರು ಇಲ್ಲ .ಇನ್ನಾದರೂ ಜನರ ಕಷ್ಟಕ್ಕೆ ಮೇಲಾಧಿಕಾರಿಗಳೂ ಮುಂದೆ ಬಂದು ಬಂಟನೂರ ಗ್ರಾಮದ ಜನರಿಗೆ ನೀರು ಬಿಡುವ ಕೆಲಸ ಮಾಡಬೇಕಿದೆ.
ವರದಿ: ವೆಂಕಾರೆಡ್ಡಿ

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago