Latest

ಅಡಿಕೆ ಬೆಳೆಗೆ ಅಂಟಿದ ಕೊಳೆ ರೋಗ; ಮುನ್ನೆಚ್ಚರಿಕೆ ವಹಿಸಲು ಸೂಚನೆ.

ಮುಂಡಗೋಡ: ತಾಲೂಕಿನಲ್ಲಿ ಜುಲೈ ತಿಂಗಳಿನಲ್ಲಿ ಅಧಿಕ ಮಳೆಯಾಗಿದ್ದು, ತಾಲೂಕಿನ ಪ್ರಮುಖ ಬೆಳೆಯಾದ ಅಡಿಕೆ ಬೆಳೆಗೆ ಕೊಳೆ ರೋಗ ಕಾಣಿಸಿಕೊಳ್ಳುವ ಸಾಧ್ಯತೆಯಿದ್ದು ಕೊಳೆರೋಗವು ಪೈಟೋಪತೆರಾ ಎಂಬ ಶಿಲೀಂದ್ರದಿಂದ ಬರುವುದಾಗಿದ್ದು. ಗೊಂಚಲುಗಳ ಕಾಯಿಗಳ ಮೇಲೆ ಕಂದು ಬಣ್ಣದ ನೀರಿನಿಂದ ತೊಯ್ದಂತ ಚುಕ್ಕಿಗಳು ಕಂಡುಬಂದು ನಂತರ ಬಿಳಿ ಶಿಲೀಂದ್ರದ ಬೆಳವಣಿಗೆ ಕಾಣಿಸಿಕೊಂಡು ಕಾಯಿಗಳು ಕೊಳೆಯಲು ಪ್ರಾರಂಭಿಸಿ ಉದುರುತ್ತವೆ. ಗೊಂಚಲು ಬೋಳು ಬೋಳಾಗಿ ಕಪ್ಪಾಗಿ ಕಾಣುತ್ತದೆ. ಜೂನ್ ದಿಂದ ಸಪ್ಟಂಬರ್ ವರೆಗೆ ರೋಗ ಬಾಧೆ ತೀವ್ರವಾಗಿರುತ್ತದೆ. ರೋಗ ಹೆಚ್ಚಿನ ಪ್ರಮಾಣದಲ್ಲಿ ಕಂಡುಬಂದಲ್ಲಿ ಸುಳಿ ಕೂಡ ಕೊಳೆಯುವುದು ಕಂಡು ಬರುತ್ತದೆ.
ಅಡಿಕೆ ಕಾಯಿ ಕೊಳೆ ರೋಗ ನಿಯಂತ್ರಣಕ್ಕೆ ಈಗಾಗಲೇ ಶೇಕಡಾ 1 ರ ಬೋರ್ಡೋ ದ್ರಾವಣ ಸಿಂಪಡಣೆ ಮಾಡಿ 25 – 30 ದಿನಗಳಾಗಿದ್ದಲ್ಲಿ, ಮಳೆ ಕಡಿಮೆಯಾದಾಗ ಮುಂಜಾಗ್ರತೆಯ ದೃಷ್ಟಿಯಿಂದ ಮತ್ತೊಮ್ಮೆ ಬೋರ್ಡೋ ದ್ರಾವಣ ಸಿಂಪಡಿಸಬೇಕು. ಕೊಳೆ ರೋಗ ಕಾಣಿಸಿಕೊಂಡಲ್ಲಿ ತಕ್ಷಣದಲ್ಲಿ ಕೊಳೆ ರೋಗ ಪೀಡಿತ ಅಡಿಕೆ ಕಾಯಿಯನ್ನು ಆರಿಸಿ ತೋಟದಿಂದ ಹೊರ ಹಾಕಬೇಕು. ಕಾಯಿ ಕೊಳೆ ರೋಗ ಪೀಡಿತ ಅಡಿಕೆ ಗೊನೆಗಳಿಗೆ ಮತ್ತು ಕೆಳಭಾಗದ ಮೂರ್ನಾಲ್ಕು ಹೆಡೆಗಳಿಗೆ ಹಾಗೂ ಸುತ್ತಲಿನ 3-4 ಮರಗಳಿಗೆ ಮಾತ್ರ ಮೆಟಲಾಕ್ಸಿಲ್‌ + ಮ್ಯಾಂಕೊಜೆಬ್ (72 WP) ಇರುವ ಶಿಲೀಂದ್ರನಾಶಕವನ್ನು 2 ಗ್ರಾಂ ಅಥವಾ ಮೆಟಾಲಾಕ್ಸಿಲ್ 35 WS 1 ಗ್ರಾಂ ಪ್ರತಿ ಲೀಟರ್ ನೀರಿನ ಜೊತೆಗೆ ಅಂಟು ದ್ರಾವಣ 1 ಮಿ. ಲೀ. ಪ್ರತಿ ಲೀಟರ್ ನೀರಿಗೆ ಬೆರೆಸಿ ಸಿಂಪಡಿಸಬೇಕು ಮತ್ತು ಒಂದು ವಾರದೊಳಗೆ ಸದರಿ ತೋಟಕ್ಕೆ ಶೇಕಡ 1 ರ ಬೋರ್ಡೋ ದ್ರಾವಣ ಸಿಂಪಡಿಸುವುದರಿಂದ ಕೊಳೆ ರೋಗವನ್ನು ನಿಯಂತ್ರಿಸಬಹುದು ಎಂದು ತೋಟಗಾರಿಕೆ ಮಹಾವಿದ್ಯಾಲಯದ ರೋಗಶಾಸ್ತ್ರದ ವಿಜ್ಞಾನಿಗಳಾದ ಡಾ. ಪ್ರಸಾದ್ ಪಿ.ಎಸ್.‌ ರವರು ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗೆ ಪಾಳಾ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ ಶ್ರೀ ಕೆ.ಬಿ. ಪಠಾಣ (9740405821), ಮುಂಡಗೋಡ ಹೋಬಳಿ ಸಹಾಯಕ ತೋಟಗಾರಿಕೆ ಅಧಿಕಾರಿ ಶ್ರೀ ರಮೇಶ ಜಮಖಂಡಿ (9632841838) ಹಾಗೂ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಶ್ರೀ ಕೃಷ್ಣ ಕುಳ್ಳೂರ ರವರನ್ನು ಸಂಪರ್ಕಿಸಲು ಕೋರಲಾಗಿದೆ.

ವರದಿ: ಮಂಜುನಾಥ್ ಎಫ್.ಎಚ್ 
kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago