Latest

ಬೆಳಗಾವಿ ಪಿಎಸ್ಐ ವಿರುದ್ಧ ರೇಪ್ ಕೇಸ್; ವಿದ್ಯಾರ್ಥಿನಿಯನ್ನು ಮದುವೆಯಾಗುವುದಾಗಿ ನಂಬಿಸಿ ಲೈಂಗಿಕ ದೌರ್ಜನ್ಯ!

ಬೆಳಗಾವಿ ನಗರ ಪೊಲೀಸ್‌ ಆಯುಕ್ತಾಲಯದ ವೈರ್‌ಲೆಸ್‌ ‍ಠಾಣೆಯ ಪಿಎಸ್‌ಐ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಿ, ಕಾಲೇಜು ವಿದ್ಯಾರ್ಥಿನಿಯೊಬ್ಬರು ಗುರುವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ತನ್ನನ್ನೇ ಮದುವೆಯಾಗುವುದಾಗಿ ನಂಬಿಸಿ ದೈಹಿಕ ಸಂಪರ್ಕ ಮಾಡಿರುವ ಪಿಎಸ್‌ಐ ಲಾಲ್‌ಸಾಬ್‌ ಎಂಬುವರು ಇದೇ ಫೆಬ್ರವರಿ 10ರಂದು ಬೇರೆ ಯುವತಿ ಜತೆಗೆ ಮದುವೆಯಾಗಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆಯು ಮಹಿಳಾ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ದೂರಿನಲ್ಲಿ ಏನಿದೆ: ಫೇಸ್​ಬುಕ್ ಮೆಸೆಂಜರ್ ಮೂಲಕ 2020ರ ಜೂನ್‌ 16ರಂದು ಪರಿಚಯ ಮಾಡಿಕೊಂಡಿದ್ದ ಪಿಎಸ್‌ಐ, ಪ್ರತಿ ದಿನ ಚಾಟ್‌ ಮಾಡುತ್ತಾ ಸ್ನೇಹ ಬೆಳೆಸಿದ್ದರು. ಬಳಿಕ ತನನ್ನು ಮದುವೆ ಆಗುವುದಾಗಿ ನಂಬಿಸಿದ್ದರು. ಕೆಲ ದಿನಗಳ ನಂತರ ಬೆಳಗಾವಿಯ ಸುಭಾಷ್​ ನಗರದ ತನ್ನ ರೂಮಿಗೆ ಕರೆದೊಯ್ದು ಲೈಂಗಿಕ ಕ್ರಿಯೆಗೆ ಸಹಕರಿಸುವಂತೆ ಕೋರಿದ್ದರು. ನಾನು ಒಪ್ಪದೇ ಇದ್ದಾಗ ಒತ್ತಾಯ ಪೂರ್ವಕವಾಗಿ ಲೈಂಗಿಕ ದೌರ್ಜನ್ಯ ಎಸಗಿ ಮದುವೆ ಮಾಡಿಕೊಳ್ಳುವ ಭರವಸೆ ಸಹ ನೀಡಿದ್ದರು. ಅಲ್ಲದೇ ಮದುವೆ ಆಗುವ ಭರವಸೆ ನೀಡಿ ಬಾಂಡ್‌ ಕೂಡ ಬರೆದುಕೊಟ್ಟಿದ್ದರು. ಬಳಿಕ ಬೆಳಗಾವಿಯ ಕೆಲವು ಲಾಡ್ಜ್‌ಗಳಿಗೂ ಕರೆದುಕೊಂಡು ಹೋಗಿ ಲೈಂಗಿಕ ಸಂಪರ್ಕ ಬೆಳೆಸಿದ್ದರು. ಆದರೆ, ಈಗ ಮತ್ತೊಬ್ಬಳೊಂದಗೆ ಮದುವೆ ಆಗಿ ನನಗೆ ಮೋಸ ಮಾಡಿದ್ದಾರೆ.
ನನ್ನನ್ನೇ ಮದುವೆ ಆಗುವುದಾಗಿ ಬಾಂಡ್‌ ಕೂಡ ಬರೆದುಕೊಟ್ಟಿದ್ದರಿಂದ, ಅದರ ಭರವಸೆ ಮೇಲೆ ನಾನು ಇಷ್ಟು ದಿನ ಸಹಿಸಿಕೊಂಡೆ. ಅಲ್ಲದೇ, ನನ್ನ ಹಾಗೂ ಅವರ ನಡುವಿನ ಸಂಬಂಧದ ಬಗ್ಗೆ ಪೂರ್ಣವಾಗಿ ತಿಳಿಸಿದರೂ ಬೇರೊಬ್ಬ ಯುವತಿ ಅವರನ್ನು ಮದುವೆಯಾದರು. ಈ ಮೂಲಕ ಅವರಿಂದಲೂ ನನಗೆ ಅನ್ಯಾಯವಾಗಿದೆ. ಪಿಎಸ್​ಐ ಈ ಮೂಲಕ ನನ್ನ ಘನತೆಯ ಬದುಕನ್ನು ಕಿತ್ತುಕೊಂಡಿದ್ದಾರೆ. ಇದರಿಂದ ನಮ್ಮ ಕುಟುಂಬದ ಸದಸ್ಯರ ಮಾನಸಿಕ ನೆಮ್ಮದಿ ಕೂಡ ದೂರ ಮಾಡಿದ್ದಾರೆ. ಇಷ್ಟೆಲ್ಲ ಸಂಕಷ್ಟಕ್ಕೆ ಈಡು ಮಾಡಿದ ಪಿಎಸ್​ಐ ವಿರುದ್ಧ ಕ್ರಮ ಜರುಗಿಸುವಂತೆ ವಿದ್ಯಾರ್ಥಿನಿಯು ತನ್ನ ದೂರು ಪ್ರತಿಯಲ್ಲಿ ಉಲ್ಲೇಖ ಮಾಡಿದ್ದಾರೆ. ಹಾಗೂ ಮದುವೆಯಾಗಲು ಸಹಕರಿಸಿದವರ ವಿರುದವು ಸಹ ಸಂತ್ರಸ್ತೆ ದೂರನ್ನು ದಾಖಲಿಸಿರುತ್ತಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

4 weeks ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago