ಒಡಿಶಾದ ಬಾಲಸೋರ್ ಜಿಲ್ಲೆಯ ಜಲೇಶ್ವರ ಪೊಲೀಸ್ ಠಾಣೆ ವ್ಯಾಪ್ತಿಯ ಬಲಿಯಾಪಾಳ ಗ್ರಾಮದಲ್ಲಿ ನೊಂದ ಮಹಿಳೆಯ ನೆರೆಮನೆಯವನೊಬ್ಬ ಅತ್ಯಾಚಾರ ಎಸಗಿದ ಘಟನೆಯು ಬೆಳಕಿಗೆ ಬಂದಿದೆ. ಆರೋಪಿ, ಮಹಿಳೆಯ ಆಧಾರ್ ಕಾರ್ಡ್‌ನಲ್ಲಿ ತಿದ್ದುಪಡಿ ಮಾಡಿಸುವುದಾಗಿ ನಂಬಿಸಿ, ದಂಪತಿಯನ್ನು ಸಿಂಗ್ಲಾ ಮಾರುಕಟ್ಟೆಗೆ ಕರೆದೊಯ್ದಿದ್ದಾನೆ.

ಮಾರುಕಟ್ಟೆಗೆ ತಲುಪಿದ ಬಳಿಕ, ಗಂಡನನ್ನು ತನ್ನೊಂದಿಗೆ ಕರೆದುಕೊಂಡು ಹೋಗಿ ಮದ್ಯಪಾನಕ್ಕೆ ಪ್ರೇರೇಪಿಸಿದ್ದ. ಗಂಡನು ತೀವ್ರವಾಗಿ ಮದ್ಯ ಸೇವಿಸಿದ ನಂತರ, ಹಿಂತಿರುಗುವ ದಾರಿಯಲ್ಲಿ ಆರೋಪಿ ಮಹಿಳೆಯನ್ನು ನಿರ್ಜನ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಎಸಗಿದ್ದಾನೆ.

ನಂತರ, ಅವರನ್ನು ಅವರ ಗ್ರಾಮದಲ್ಲಿ ಬಿಟ್ಟು ಆರೋಪಿ ಪರಾರಿಯಾಗಿದ್ದಾನೆ. ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ಮೊದಲು ಸಿಂಗ್ಲಾದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಜಲೇಶ್ವರದ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಈ ಸಂಬಂಧ ಪೊಲೀಸರು ತನಿಖೆ ಆರಂಭಿಸಿದ್ದು, ಆರೋಪಿ ಪತ್ತೆಗೆ ಶೋಧ ಕಾರ್ಯ ಮುಂದುವರಿಸಿದ್ದಾರೆ.

Leave a Reply

Your email address will not be published. Required fields are marked *

Related News

error: Content is protected !!