Latest

ಮಗಳು ಮತ್ತು ತಾಯಿ ಇಬ್ಬರ ಜೊತೆಯು ಸಂಬಂಧ ಹೊಂದಿದ್ದ ಯುವಕನನ್ನು ಕುಟುಂಬಸ್ಥರು ಹೊಡೆದು ಕೊಂದರು.

ಯುವತಿ ಮತ್ತು ಆಕೆಯ ತಾಯಿ ಇಬ್ಬರೊಂದಿಗೂ ಸಂಬಂಧ ಹೊಂದಿದ್ದ 21 ವರ್ಷದ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿ, ಮೃತದೇಹ ನಿರ್ಜನ ಪ್ರದೇಶದಲ್ಲಿ ಎಸೆದಿರುವ ಘಟನೆ ಪಶ್ಚಿಮ ಬಂಗಾಳದ ಪರಗಣ ಜಿಲ್ಲೆಯಲ್ಲಿ ನಡೆದಿದೆ.
ಅಯಾನ್ ಮಂಡಲ್ ಎಂಬಾತನೇ ಕೊಲೆಯಾದ ಯುವಕ ಎಂದು ಗುರುತಿಸಲಾಗಿದೆ. ಈ ಕೊಲೆ ಸಂಬಂಧ ಯುವತಿ, ಆಕೆಯ ತಾಯಿ, ತಂದೆ, ಸಹೋದರ ಮತ್ತು ಇಬ್ಬರು ಸಹಚರರು ಸೇರಿದಂತೆ ಒಟ್ಟು ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಕ್ಯಾಬ್ ಚಾಲಕನಾಗಿದ್ದ ಅಯಾನ್ ಮಂಡಲ್ ತನ್ನ ಗೆಳತಿ ಹಾಗೂ ಆಕೆಯ ತಾಯಿಯೊಂದಿಗೂ ಸಂಬಂಧ ಹೊಂದಿದ್ದರು ಎಂದು ಹೇಳಲಾಗಿದೆ. ವಿಜಯ ದಶಮಿ ನಿಮಿತ್ತ ಬುಧವಾರ ಸಂಜೆ ತನ್ನ ಗೆಳತಿಗೆ ಕರೆ ಮಾಡಿ ಸಂಪರ್ಕ ಸಾಧಿಸಲು ಯತ್ನಿಸಿದ್ದರು. ಆದರೆ, ಗೆಳತಿ ಪದೇ ಪದೆ ಕರೆಗಳನ್ನು ಕಡಿತಗೊಳಿಸಿದ್ದರು. ಇದರಿಂದ ಮಂಡಲ್​ ನಶೆಯಲ್ಲಿ ತನ್ನ ಗೆಳತಿ ಮನೆಗೆ ತೆರಳಿದ್ದ ಎಂದು ತಿಳಿದು ಬಂದಿದೆ.

ಮನೆಗೆ ತಲುಪಿದ ಬಳಿಕ ಗೆಳತಿಯ ತಾಯಿಯೊಂದಿಗೆ ಮಂಡಲ್​ ಜಗಳ ಮಾಡಿದ್ದಾರೆ. ಅಲ್ಲದೇ, ಆಕೆ ಮೇಲೆ ಹಲ್ಲೆ ಕೂಡ ನಡೆಸಿದ್ದಾರೆ. ಆಗ ತಕ್ಷಣವೇ ಗೆಳತಿ ಹಾಗೂ ಆಕೆಯ ಸಹೋದರ ಮತ್ತು ತಂದೆ ಬಂದಿದ್ದಾರೆ. ಇದರಿಂದ ಈ ಜಗಳವು ವಿಕೋಪಕ್ಕೆ ತಿರುಗಿದೆ. ಈ ವೇಳೆ ಮಂಡಲ್​ ತಲೆಗೆ ಸಹೋದರ ಭಾರವಾದ ವಸ್ತುವಿನಿಂದ ಹೊಡೆದಿದ್ದಾರೆ. ಪರಿಣಾಮ ಮಂಡಲ್​ ಸ್ಥಳದಲ್ಲೇ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಂತರ ನಾಲ್ವರು ಸೇರಿಕೊಂಡು ಹೇಗಾದರೂ ಮಾಡಿ ಶವವನ್ನು ದೂರ ಎಸೆಯಲು ನಿರ್ಧರಿಸಿದ್ದಾರೆ. ಇದಕ್ಕಾಗಿ ಆಕೆಯ ಸಹೋದರ ತನ್ನ ಇಬ್ಬರು ನಿಕಟ ಸಹಚರರನ್ನು ಸಂಪರ್ಕಿಸಿ, ಪಿಕ್ ಅಪ್ ವ್ಯಾನ್ ಬಾಡಿಗೆಗೆ ಪಡೆದು ಶವವನ್ನು ಮಗ್ರಾಹತ್‌ನ ಏಕಾಂತ ಸ್ಥಳಕ್ಕೆ ತೆಗೆದುಕೊಂಡು ಹೋಗಿ ಎಸೆದಿದ್ದಾರೆ. ಇತ್ತ, ಗುರುವಾರ ಬೆಳಗ್ಗೆ ಮಂಡಲ್​ ಕುಟುಂಬಸ್ಥರು ನಾಪತ್ತೆ ದೂರು ದಾಖಲಿಸಿದ್ದು, ದೂರಿನ ಬೆನ್ನಟ್ಟಿದಾಗ ಕೊಲೆಯಾಗಿರುವುದು ಬಯಲಿಗೆ ಬಂದಿದೆ. ಶುಕ್ರವಾರ ರಾತ್ರಿ ಅಯಾನ್ ಮಂಡಲ್​ ಮೃತದೇಹ ಪತ್ತೆಯಾಗಿದೆ ಎಂದು ಪೊಲೀಸ್​ ಅಧಿಕಾರಿ ವಿವರಿಸಿದ್ದಾರೆ.

ಇದೇ ವೇಳೆ, ಪ್ರಕರಣವು ಪ್ರಮುಖವಾದ ತಿರುವು ಬಂದಿದೆ. ಅಯಾನ್ ಮನೆಗೆ ಬಂದಿದ್ದ ಗೆಳತಿಯು ತಾನು ಗರ್ಭಿಣಿ ಹಾಗೂ ತನ್ನ ಹೊಟ್ಟೆಯಲ್ಲಿ ಮಗುವಿದೆ ಅಂತಾ ಹೇಳಿಕೊಂಡಿರುವುದಾಗಿ ಅಯಾನ್​ನ ತಾಯಿ ತಿಳಿಸಿದ್ದಾರೆ ಎನ್ನಲಾಗಿದೆ. ಹೀಗಾಗಿಯೇ ಈ ಬಗ್ಗೆ ಪೊಲೀಸರು ಹೆಚ್ಚಿನ ತನಿಖೆ ನಡೆಸಲು ಮುಂದಾಗಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

4 weeks ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

1 month ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

1 month ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

1 month ago