Crime

“ಗುಬ್ಬಿಯಲ್ಲಿ 15 ಲಕ್ಷ ರೂ. ಕಳ್ಳತನ ಪ್ರಕರಣ: ಇಬ್ಬರು ಅಂತರ್-ರಾಜ್ಯ ಕಳ್ಳರ ಬಂಧನ, 16 ಲಕ್ಷ ಮೌಲ್ಯದ ಸ್ವತ್ತು ವಶ”

ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣದಲ್ಲಿ 15 ಲಕ್ಷ ನಗದು ಕಳ್ಳತನಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಬ್ಬಿ ಪೊಲೀಸ್ ಠಾಣೆ ಪೊಲೀಸರು ಇಬ್ಬರು ಅಂತರ್-ರಾಜ್ಯ ಕಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನೆ ವಿವರ

ದಿನಾಂಕ 07-01-2025, ರಾತ್ರಿ 07:30 ಗಂಟೆಗೆ ಶಿವರಾಜು ಎಂಬುವವರು ಗುಬ್ಬಿ ಪೊಲೀಸ್ ಠಾಣೆಗೆ ದೂರು ನೀಡಿದರು. ಅವರ ಹೇಳಿಕೆ ಪ್ರಕಾರ, ಮಧ್ಯಾಹ್ನ 03:10 ಗಂಟೆಗೆ ಅವರು ನಿಟ್ಟೂರಿನ ಎಸ್.ಬಿ.ಎಂ ಬ್ಯಾಂಕ್‌ನಿಂದ 15 ಲಕ್ಷ ರೂ. ನಗದು ಡ್ರಾ ಮಾಡಿ, ತಮ್ಮ ಕಾರಿನಲ್ಲಿ ಇಟ್ಟು, ಗುಬ್ಬಿ ಎಪಿಎಂಸಿ ಕಛೇರಿ ಮುಂಭಾಗ ನಿಲ್ಲಿಸಿದ್ದರು. ಕಛೇರಿಯಲ್ಲಿ ಕೆಲಸ ಮುಗಿಸಿ ವಾಪಸ್ ಬಂದು ನೋಡಿದಾಗ, ಕಾರಿನಲ್ಲಿದ್ದ 15 ಲಕ್ಷ ನಗದು ಹಾಗೂ ಇತರ ದಾಖಲೆಗಳನ್ನು ಯಾರೋ ಕಳ್ಳರು ಕದ್ದೊಯ್ದಿದ್ದರು.

ಈ ಸಂಬಂಧ ಗುಬ್ಬಿ ಪೊಲೀಸ್ ಠಾಣೆಯಲ್ಲಿ ಪ್ರಕರಣ (ಮೊ.ನಂ. 11/2025, ಕಲಂ 303(2) ಬಿಎನ್‌ಎಸ್) ದಾಖಲಿಸಿಕೊಂಡು ತನಿಖೆ ಆರಂಭಿಸಲಾಯಿತು.

ಬಂಧಿತರ ವಿವರ

ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್ ಕೆ.ವಿ, ಐ.ಪಿ.ಎಸ್ ಅವರ ಮಾರ್ಗದರ್ಶನದಲ್ಲಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು ವಿ. ಮರಿಯಪ್ಪ ಮತ್ತು ಬಿ.ಎಸ್. ಅಬ್ದುಲ್ ಖಾದರ್, ಸಿರಾ ಉಪವಿಭಾಗದ ಪೊಲೀಸ್ ಉಪಾಧೀಕ್ಷಕ ಬಿ.ಕೆ. ಶೇಖರ್, ಗುಬ್ಬಿ ವೃತ್ತದ ಸಿಪಿಐ ರಾಘವೇಂದ್ರ ಟಿ.ಆರ್ ನೇತೃತ್ವದಲ್ಲಿ ತನಿಖಾ ತಂಡ ಕಾರ್ಯಚರಣೆ ನಡೆಸಿತು.

ಈ ತಂಡ ಗುಬ್ಬಿ ಪೊಲೀಸ್ ಪಿಎಸ್‌ಐ-1 ಸುನೀಲ್ ಕುಮಾರ್ ಜಿ.ಕೆ, ಸಿಬ್ಬಂದಿ ನವೀನ್ ಕುಮಾರ್, ವಿಜಯಕುಮಾರ್, ಮಧುಸೂಧನ್ ಮತ್ತು ಜಿಲ್ಲಾ ಪೊಲೀಸ್ ಕಛೇರಿಯ ಸಿಬ್ಬಂದಿ ನರಸಿಂಹರಾಜು ಅವರ ಸಹಾಯದಿಂದ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿದೆ.

ಬಂಧಿತ ಆರೋಪಿಗಳು

1. ಶಿವ ಜಿ. (44 ವರ್ಷ), ಮೇಸ್ತ್ರಿ ಕೆಲಸ, ಓಜಿಕುಪ್ಪಂ, ಕಾವೇಟಿಪುರಂ, ನಗರಿ ಮಂಡಲ್, ಚಿತ್ತೂರು ಜಿಲ್ಲೆ, ಆಂಧ್ರಪ್ರದೇಶ

2. ಸುಬ್ರಮಣ್ಯಂ @ ಮಣಿ (38 ವರ್ಷ), ಕೂಲಿ ಕೆಲಸ, ಓಜಿಕುಪ್ಪಂ, ಕಾವೇಟಿಪುರಂ, ನಗರಿ ಮಂಡಲ್, ಚಿತ್ತೂರು ಜಿಲ್ಲೆ, ಆಂಧ್ರಪ್ರದೇಶ

ಪತ್ತೆಯಾದ ಸ್ವತ್ತುಗಳು

ಬಂಧಿತರಿಂದ 13.60 ಲಕ್ಷ ನಗದು ಹಾಗೂ ಒಂದು ಚಿನ್ನದ ಬ್ರಾಸ್ ಲೈಟ್ ಸೇರಿ ಒಟ್ಟು 16 ಲಕ್ಷ ರೂ. ಮೌಲ್ಯದ ಸ್ವತ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

ಅಂತರ ರಾಜ್ಯ ಅಪರಾಧಿಗಳು

ಈ ಆರೋಪಿತರು ತುಮಕೂರು ಜಿಲ್ಲೆಯ ವಿವಿಧ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿರುವರು:

  • ಗುಬ್ಬಿ ಪೊಲೀಸ್ ಠಾಣೆ – 01 ಪ್ರಕರಣ
  • ಸಿರಾ ಪೊಲೀಸ್ ಠಾಣೆ – 02 ಪ್ರಕರಣ
  • ಚಿಕ್ಕನಾಯಕನಹಳ್ಳಿ ಪೊಲೀಸ್ ಠಾಣೆ – 01 ಪ್ರಕರಣ
  • ನೊಣವಿಕೆರೆ ಪೊಲೀಸ್ ಠಾಣೆ – 01 ಪ್ರಕರಣ

ಈ ಎಲ್ಲಾ 5 ಪ್ರಕರಣಗಳಲ್ಲಿಯೂ ಆರೋಪಿತರು ಭಾಗಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಮತ್ತಷ್ಟು ಆರೋಪಿಗಳ ಪತ್ತೆಗೆ ಹುಡುಕಾಟ

ಈ ಪ್ರಕರಣದಲ್ಲಿ ಇನ್ನೂ ಮೂವರು ಅಂಕಯ್ಯ, ಕಿರಣ್ ಮತ್ತು ರಾಜ್ಯಶೇಖರಯ್ಯ ತಲೆಮರೆಸಿಕೊಂಡಿದ್ದು, ಪೊಲೀಸರು ಅವರ ಪತ್ತೆ ಕಾರ್ಯವನ್ನು ಮುಂದುವರೆಸಿದ್ದಾರೆ.

ಪೊಲೀಸ್ ತಂಡಕ್ಕೆ ಪ್ರಶಂಸೆ

ಈ ಯಶಸ್ವಿ ಕಾರ್ಯಾಚರಣೆಗೆ ತುಮಕೂರು ಜಿಲ್ಲಾ ಪೊಲೀಸ್ ಅಧೀಕ್ಷಕ ಅಶೋಕ್ ಕೆ.ವಿ, ಐ.ಪಿ.ಎಸ್ ಅವರು ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಪ್ರಶಂಸಿಸಿದ್ದಾರೆ.

ಭ್ರಷ್ಟರ ಬೇಟೆ

Recent Posts

₹50 ಸಾವಿರ ಲಂಚ ಪ್ರಕರಣ: ಸಹಕಾರ ಸಂಘಗಳ ಕಚೇರಿ ಅಧೀಕ್ಷಕ ಭರತೇಶ ಶೇಬನ್ನವರ ಬಂಧನ

ಬೆಳಗಾವಿ: ಸಹಕಾರ ಸಂಘದ ನೋಂದಣಿಗಾಗಿ ₹50 ಸಾವಿರ ಲಂಚ ಪಡೆಯಲು ಪ್ರಯತ್ನಿಸಿದ್ದ ಆರೋಪದ ಮೇಲೆ ಸಹಕಾರ ಸಂಘಗಳ ಉಪನಿಬಂಧಕರ ಕಚೇರಿ…

11 hours ago

ಉದಯಗಿರಿ ಗಲಭೆ: ಕರ್ತವ್ಯ ಲೋಪದ ಆರೋಪಕ್ಕೆ ಮೂವರು ಪೊಲೀಸ್ ಅಧಿಕಾರಿಗಳು ಅಮಾನತು

ಮೈಸೂರು: ಉದಯಗಿರಿ ಠಾಣೆ ವ್ಯಾಪ್ತಿಯಲ್ಲಿ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬ ಸಬ್ ಇನ್‌ಸ್ಪೆಕ್ಟರ್ ಸೇರಿದಂತೆ ಮೂವರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ.…

12 hours ago

₹40,000 ಲಂಚ ಸ್ವೀಕರಿಸುವಾಗ ಚನ್ನಗಿರಿ ತಾಲ್ಲೂಕು ಪಂಚಾಯಿತಿ ಕಾರು ಚಾಲಕ ಲೋಕಾಯುಕ್ತ ಬಲೆಗೆ!

ಚನ್ನಗಿರಿ: ಅಮಾನತುಗೊಂಡ ಗ್ರಂಥಾಲಯ ಮೇಲ್ವಿಚಾರಕರನ್ನು ಪುನರ್‌ನೇಮಕ ಮಾಡಿಸಲು ₹40,000 ಲಂಚ ಪಡೆಯುತ್ತಿದ್ದ ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಬಿ.ಕೆ. ಉತ್ತಮ್…

12 hours ago

ಅತ್ಯಾಚಾರಕ್ಕೆ ಮುಂದಾದ ತಂದೆ: ಮರ್ಮಾಂಗ ಕಟ್ ಮಾಡಿದ ಪುತ್ರಿ!

ಮಹಾರಾಷ್ಟ್ರದ ನಲಸೋಪಾರ ಪೂರ್ವದ ಚಾಲ್‌ನಲ್ಲಿ ನಡೆದ ತೀವ್ರ ಆಘಾತಕಾರಿ ಘಟನೆಯೊಂದು ಇದೀಗ ಬೆಳಕಿಗೆ ಬಂದಿದೆ. ಎರಡು ವರ್ಷಗಳಿಂದ ನಿರಂತರ ಲೈಂಗಿಕ…

14 hours ago

ಪತ್ನಿಗೆ ವರದಕ್ಷಿಣೆ ಕಿರುಕುಳ,: ಸಬ್‌ ಇನ್ಸ್‌ಪೆಕ್ಟರ್‌ ವಿರುದ್ಧ FIR

ಧರ್ಮಸ್ಥಳ ಸಬ್‌ ಇನ್ಸ್‌ಪೆಕ್ಟರ್‌ ಕಿಶೋರ್‌ ವಿರುದ್ಧ ವರದಕ್ಷಿಣೆ ಕಿರುಕುಳ ಮತ್ತು ಹಲ್ಲೆ ಆರೋಪದ ಮೇಲೆ ಎಫ್‌ಐಆರ್‌ ದಾಖಲಾಗಿದೆ. ತಮ್ಮ ವರ್ಗಾವಣೆಗೆ…

15 hours ago

ಲಾಭಕ್ಕಿಂತ ಹೊರೆಯೇ ಹೆಚ್ಚು, ಸ್ಮಾರ್ಟ್ ಮೀಟರ್ ವಿರುದ್ಧ ಬೆಂಗಳೂರಿನ ಜನರ ಆಕ್ರೋಶ

ಬೆಂಗಳೂರು ನಗರದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಾರ್ವಜನಿಕರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. ಈಗಾಗಲೇ ವಿದ್ಯುತ್ ಬಿಲ್ ಹೆಚ್ಚಾಗಿರುವುದರಿಂದ ಜನರು ತೊಂದರೆಗೆ…

16 hours ago