Latest

ಹತ್ತೇ ದಿನದಲ್ಲಿ 12 ಅಪರಾಧಿಗಳ ಶಿರಚ್ಛೇದಿಸಿದ ಸೌದಿ ಅರೇಬಿಯಾ.

ಸೌದಿ ಅರೇಬಿಯಾ 10 ದಿನಗಳ ಅವಧಿಯಲ್ಲಿ 12 ಅವರಾಧಿಗಳ ತಲೆ ಕತ್ತರಿಸಿದೆ ಎಂದು ಮಾನವ ಹಕ್ಕುಗಳ ಸಂಘಟನೆಯೊಂದು ತಿಳಿಸಿದೆ. ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಈ ಹಿಂದೆ ಇಂತಹ ಶಿಕ್ಷೆಗಳನ್ನು ಕಡಿಮೆ ಮಾಡುವುದಾಗಿ ಪ್ರತಿಜ್ಞೆ ಮಾಡಿದ ಹೊರತಾಗಿಯೂ ದೇಶವು ಈ ವರ್ಷ ದಾಖಲೆಯ ಮರಣದಂಡನೆಗಳನ್ನು ವಿಧಿಸಿದೆ.
ಅವುಗಳಲ್ಲಿ ಹೆಚ್ಚಿನವು ಕತ್ತಿಯಿಂದ ಶಿರಚ್ಛೇದಗಳಾಗಿವೆ ಎಂದು ವರದಿ ಸೂಚಿಸುತ್ತದೆ.
ಮಾದಕವಸ್ತು ಸೇವನೆ ಆರೋಪದ ಮೇಲೆ ಜೈಲಿನಲ್ಲಿದ್ದ ಆರೋಪಿಗಳಿಗೆ ಈ ಎರಡು ವಾರಗಳಲ್ಲಿ ಮರಣದಂಡನೆ ವಿಧಿಸಲಾಯಿತು. ಅದರಲ್ಲಿ ಮೂವರು ಪಾಕಿಸ್ತಾನಿಗಳು, ನಾಲ್ಕು ಸಿರಿಯನ್ನರು, ಇಬ್ಬರು ಜೋರ್ಡಾನಿಯನ್ನರು ಮತ್ತು ಮೂವರು ಸೌದಿ ಪ್ರಜೆಗಳು ಸೇರಿದ್ದಾರೆ ಎಂದು ಟೆಲಿಗ್ರಾಫ್ ವರದಿ ಮಾಡಿದೆ. ಇದರೊಂದಿಗೆ ಈ ವರ್ಷ ಮರಣದಂಡನೆಗೆ ಒಳಗಾದವರ ಸಂಖ್ಯೆ ಕನಿಷ್ಠ 132 ಕ್ಕೆ ತಲುಪಿದೆ. ಇದು 2020 ಮತ್ತು 2021 ರ ಒಟ್ಟು ಸಂಖ್ಯೆಯನ್ನು ಮೀರಿದೆ ಎಂದು ವರದಿ ಹೇಳಿದೆ.
2018 ರಲ್ಲಿ, ಮೊಹಮ್ಮದ್ ಬಿನ್ ಸಲ್ಮಾನ್ ತಮ್ಮ ಆಡಳಿತವು ಮರಣದಂಡನೆ ಶಿಕ್ಷೆಯ ಪ್ರಮಾಣವನ್ನು ಕಡಿಮೆಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಹೇಳಿದ್ದರು. ಕೊಲೆ ಅಥವಾ ನರಹತ್ಯೆ ತಪ್ಪಿತಸ್ಥರು ಮಾತ್ರ ಮರಣದಂಡನೆಗೆ ಒಳಪಡುತ್ತಾರೆ ಎಂದು ಹೇಳಿದ್ದರು.
2020 ರಲ್ಲಿ, ಜಮಾಲ್ ಖಶೋಗಿ ಹತ್ಯೆಯ ಬಳಿಕ ಸೌದಿಯ ಮರಣದಂಡನೆ ನೀತಿಯ ಬಗ್ಗೆ ತೀವ್ರ ಟೀಕೆಗಳು ಕೇಳಿಬಂದಿದವು. ಈ ರಕ್ತಸಿಕ್ತ ಅಧ್ಯಾಯವನ್ನು ಕೊನೆಗೊಳಿಸಲು ಸೌದಿ ಅರೇಬಿಯಾ ಕಾನೂನನ್ನು ಬದಲಾಯಿಸಿಕೊಳ್ಳುವುದಾಗಿ ಪ್ರಸ್ತಾಪಿಸಿತ್ತು. ಆ ಬಳಿಕ ಗಂಭೀರವಲ್ಲದ ಅಪರಾಧಗಳನ್ನು ಮಾಡಿದವರ ಮೇಲೆ ಮೃದುತ್ವ ತೋರುತ್ತಿರುವ ಸುಳಿವುಗಳು ಕಂಡುಬಂದವು.
ಆದರೆ ಸೌದಿ ಇದೆಲ್ಲವನ್ನು ಹೊರಗಷ್ಟೇ ತೋರಿಸಿಕೊಳ್ಳುತ್ತಿದೆ. ಆಂತರಿಕವಾಗಿ ಯಾವುದೇ ಮುಲಾಜಿಲ್ಲದೆ ಅಪರಾಧಿಗಳ ತಲೆ ಕತ್ತರಿಸುತ್ತಿದೆ. ಆದರೆ ಈಗ ಅವೆಲ್ಲವೂ ರಹಸ್ಯವಾಗಿ ನಡೆಯುತ್ತಿದೆ. ಈ ಮರಣದಂಡನೆಗಳ ರಕ್ತಸಿಕ್ತ ವರ್ಷದಲ್ಲಿ ಸೌದಿ ಅಧಿಕಾರಿಗಳು ಮಾದಕವಸ್ತು ಅಪರಾಧಿಗಳನ್ನು ದೊಡ್ಡ ಸಂಖ್ಯೆಯಲ್ಲಿ ಮತ್ತು ರಹಸ್ಯವಾಗಿ ಗಲ್ಲಿಗೇರಿಸಲು ಪ್ರಾರಂಭಿಸಿದ್ದಾರೆ ಎಂದು ವರದಿ ಹೇಳುತ್ತದೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago