ದೇಶದಲ್ಲಿ ಲೈಂಗಿಕ ದೌರ್ಜನ್ಯ ಪ್ರಕರಣಗಳು ಮುಂದುವರೆದಿದ್ದು, ಆಂಧ್ರಪ್ರದೇಶದ ಕೃಷ್ಣಾ ಜಿಲ್ಲೆಯಲ್ಲಿ 2ನೇ ತರಗತಿ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಬೆಳಕಿಗೆ ಬಂದಿದೆ. ತಾಡಿಗಡಪ ಕಣ್ಣಿನ ಆಸ್ಪತ್ರೆ ಬಳಿ ವಾಸಿಸುತ್ತಿರುವ ನಾರಾಯಣ ಎಂಬ ವೃದ್ಧ, ತನ್ನ ಮನೆಯ ಸಮೀಪವಿದ್ದ ಬಾಲಕಿಯೊಂದಿಗೆ ಲೈಂಗಿಕ ಕಿರುಕುಳ ಎಸಗಿದ್ದಾನೆ.
ಘಟನೆ ವಿವರ:
ನಾಯಿಮರಿಗಾಗಿ ನಾರಾಯಣನ ಮನೆ ಬಳಿ ಹೋದ ಬಾಲಕಿಯನ್ನು, ಆರೋಪಿ ಅನುಚಿತವಾಗಿ ವರ್ತಿಸಿ ಕಿರುಕುಳ ನೀಡಿದ್ದಾನೆ. ಬಾಲಕಿ ತಕ್ಷಣವೇ ಅಲ್ಲಿಂದ ತಪ್ಪಿಸಿಕೊಂಡು ಪೋಷಕರಿಗೆ ಈ ಕುರಿತು ಮಾಹಿತಿ ನೀಡಿದ್ದಾಳೆ.
ಪೊಲೀಸರ ಕ್ರಮ:
ಬಾಲಕಿಯ ಪೋಷಕರ ದೂರು ಆಧರಿಸಿ, ಪೆನಮಲೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ನಾರಾಯಣನನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಹೆಚ್ಚಿನ ತನಿಖೆ ನಡೆಯುತ್ತಿದ್ದು, ಘಟನೆ ಕುರಿತು ಹೆಚ್ಚಿನ ಮಾಹಿತಿಗಳು ಇನ್ನಷ್ಟೇ ಲಭ್ಯವಾಗಬೇಕಾಗಿದೆ.

Related News

error: Content is protected !!