ಉಡುಪಿಯಲ್ಲಿ ಐದು ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ನಡೆದಿದೆ. ಈ ಬಗ್ಗೆ ಬಾಲಕಿಯ ಪೋಷಕರು ನೀಡಿದ ದೂರಿನಂತೆ, ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ಗುರುವಾರ ಮಧ್ಯಾಹ್ನ, ಉಡುಪಿ ನಗರದ ಪಿಪಿಸಿ ಸಮೀಪದ ಓಣಿಯಲ್ಲಿ ಸಂಭವಿಸಿದೆ.
ಸುಮಾರು 30 ವರ್ಷದ ಯುವಕ, ಭಿಕ್ಷೆ ಬೇಡುವುದಾಗಿ ಹೇಳಿ ಓಡಾಡುತ್ತಿದ್ದಾಗ, ಆರೋಪಿ ಬಾಲಕಿಯನ್ನು ಚಾಕಲೇಟ್ ನೀಡುವುದಾಗಿ ಆಕೆಗೆ ಮೋಸ ಮಾಡಿ, ಅವಳನ್ನು ಅಂಗಡಿಯ ಹತ್ತಿರದ ಕಾಲುದಾರಿಯಲ್ಲಿ ಕರೆದುಕೊಂಡು ಹೋಗಿದ್ದನು. ಅಲ್ಲಿಯ ಒಂದು ಬೇಲಿ ಪಕ್ಕದಲ್ಲಿ ಲೈಂಗಿಕ ಕಿರುಕುಳ ನೀಡಲು ಮುಂದಾದಾಗ, ಆಕೆಯ ಸ್ನೇಹಿತಳು ಆಗಮಿಸಿ, ಬಾಲಕಿಯನ್ನು ಉಳಿಸಿ ಆರೋಪಿ ಪರಾರಿಯಾಗಿದ್ದನು.
ಈ ಬಗ್ಗೆ ಬಾಲಕಿಯ ಪೋಷಕರು ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಮಾಹಿತಿ ನೀಡಿದ ನಂತರ, ಪ್ರಕರಣ ದಾಖಲಿಸಲಾಗಿದೆ. ಸ್ಥಳೀಯ ಸಿಸಿ ಟಿವಿ ಕ್ಯಾಮರಾಗಳಲ್ಲಿ ಆರೋಪಿ ಚಲನವಲನ ಸೆರೆಹಾಕಲಾಗಿದೆ, ಆದರೆ ಆರೋಪಿ ಪರಾರಿಯಾಗಿದ್ದಾನೆ. ಪೊಲೀಸರು ಅವನ ಶೋಧ ಕಾರ್ಯವನ್ನು ಮುಂದುವರಿಸಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಈ ಬಗ್ಗೆ ತ್ವರಿತ ಕ್ರಮವನ್ನು ತೆಗೆದುಕೊಳ್ಳಲು ಸೂಚನೆ ನೀಡಿದ್ದಾರೆ. ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಅಪಘಾತದಿಂದ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಲೇ, ಘಟನೆಯ ಮಾಹಿತಿ ಬಂದ ತಕ್ಷಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಜೊತೆಗೆ ಮಾತನಾಡಿ ಪ್ರಕರಣದ ವಿವರ ಪಡೆದಿದ್ದಾರೆ.
ಅಾರೋಪಿ ಕುರಿತು ಯಾವುದೇ ಮಾಹಿತಿ ಇದ್ದಲ್ಲಿ, ಸಾರ್ವಜನಿಕರು ಕೆಳಗಿನ ಸಂಖ್ಯೆಗಳಿಗೆ ಸಂಪರ್ಕಿಸಲು ವಿನಂತಿಯನ್ನು ಸಲ್ಲಿಸಲಾಗಿದೆ:
ಕಂಟ್ರೋಲ್ ರೂಮ್: 9480805400
ಮಹಿಳಾ ಠಾಣೆ ಪೊಲೀಸ್ ನಿರೀಕ್ಷಕರು: 9480805430
ಮಹಿಳಾ ಠಾಣೆ: 08202525599
ಮಹಿಳಾ ಠಾಣೆ ಉಪನಿರೀಕ್ಷಕರು: 8277988949