Latest

ಶ್ರದ್ಧಾ ತಲೆಯನ್ನು ಫ್ರಿಜ್ಜಿನಲ್ಲಿಟ್ಟು ಪ್ರತಿದಿನ ನೋಡುತ್ತಿದ್ದ ಸೈಕೋ

ದಿನೇ ದಿನೆ ದೆಹಲಿಯ ಶ್ರದ್ಧಾ ಹತ್ಯೆಯ ಭೀಕರ ವಿವರಗಳು ಬಿಚ್ಚಿಕೊಳ್ಳುತ್ತಿವೆ. ಶ್ರದ್ಧಾ ದೇಹವನ್ನು ಆಕೆಯ ಸೈಕೋ ಪ್ರಿಯಕರ 35 ತುಂಡುಗಳಾಗಿ ಕತ್ತರಿಸಿ ಎಸೆದಿದ್ದು, ಅದರಲ್ಲಿ ಕೆಲವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಇನ್ನೂ ಹಲವಾರು ತುಣುಕುಗಳಿಗಾಗಿ ಹುಡುಕಾಟ ನಡೆದಿದೆ. ಆಕೆಯ ತಲೆ ಇನ್ನೂ ಸಿಕ್ಕಿಲ್ಲ. ಅದು ದೊರೆತರೆ ಅಪರಾಧವನ್ನು ಸಾಕ್ಷೀಕರಿಸುವ ಗುರುತರ ಪುರಾವೆ ಲಭ್ಯವಾದಂತಾಗಲಿದೆ. ತುಣುಕುಗಳನ್ನು ಎಸೆದ ಪ್ರದೇಶಗಳಲ್ಲಿ ಅಫ್ತಾಬ್‌ನನ್ನು ಕರೆದುಕೊಂಡು ಹೋಗಿ ಪೊಲೀಸರು ತಲಾಶೆ ನಡೆಸುತ್ತಿದ್ದಾರೆ.
ಪ್ರತಿದಿನ ರಾತ್ರಿ 2 ಗಂಟೆಗೆ ಹೊರಗೆ ಹೋಗಿ ಶ್ರದ್ಧಾ ದೇಹದ ಒಂದೆರಡು ತುಣುಕನ್ನು ಎಸೆದು ಬರುತ್ತಿದ್ದ ಅಫ್ತಾಬ್‌, ತಲೆಯನ್ನು ಕತ್ತರಿಸಲು ಸಫಲನಾಗಿರಲಿಲ್ಲ. ಹೀಗಾಗಿ ಅದನ್ನು ಫ್ರಿಜ್‌ನಲ್ಲಿಟ್ಟಿದ್ದು. ʼʼಪ್ರತಿದಿನ ಅದನ್ನು ತೆಗೆದು, ನಮ್ಮ ಸಂಬಂಧದ ನೆನಪಿಗಾಗಿ ನೋಡಿಕೊಳ್ಳುತ್ತಿದ್ದೆʼʼ ಎಂದು ಪೊಲೀಸರಿಗೆ ಹೇಳಿದ್ದಾನೆ. ಎಲ್ಲ ತುಣುಕುಗಳನ್ನೂ ಎಸೆದ ಬಳಿಕ ಕೊನೆಯದಾಗಿ ತಲೆಯನ್ನು ಈತ ಬಿಸಾಡಿದ್ದ.
ತಲೆಬುರುಡೆ ದೊರೆತ ಬಳಿಕ ತಲೆಬುರುಡೆಯ ಸೂಪರ್ಇಂಪೊಸಿಷನ್ ತಂತ್ರಜ್ಞಾನ ಮೂಲಕ ಹತ್ಯೆಯಾದವಳ ಗುರುತನ್ನು ರುಜುವಾತುಪಡಿಸಲು ಪೊಲೀಸರಿಗೆ ಸಾಧ್ಯವಾಗಲಿದೆ. ಸದ್ಯ ಪೊಲೀಸರ ಬಳಿ ಇರುವ ಪುರಾವೆ ಎಂದರೆ ದೇಹದ ತುಣುಕುಗಳಿಗೂ ಶ್ರದ್ಧಾ ತಂದೆ ವಿಕಾಸ್‌ ವಾಕರ್‌ಗೂ ಇರುವ ಡಿಎನ್‌ಎ ಹೋಲಿಕೆ ಮಾತ್ರ. ಮೂಳೆಗಳನ್ನು ಡಿಎನ್‌ಎ ಸ್ಯಾಂಪಲಿಂಗ್‌ಗೆ ಕಳಿಸಲಾಗಿದ್ದು, ವರದಿಗಾಗಿ ಕಾಯಲಾಗುತ್ತಿದೆ.
ಕೃತ್ಯ ನಡೆಸಿದ ಬಳಿಕ ಮನೆಯನ್ನು ಕ್ಲೀನ್‌ ಮಾಡಲು, ದೇಹದ ತುಂಡುಗಳನ್ನು ಶೇಖರಿಸಲು ಕೀಚಕ ಅಫ್ತಾಬ್‌ ಬೋರಿಕ್‌ ಪೌಡರ್‌, ಫಾರ್ಮಾಲ್ಡಿಹೈಡ್‌, ಸಲ್ಫ್ಯೂರಿಕ್‌ ಆಮ್ಲ ಮತ್ತಿತರ ಕೆಮಿಕಲ್‌ಗಳನ್ನು ಬಳಸಿದ್ದಾನೆ. ಕೃತ್ಯ ನಡೆದು ಆರು ತಿಂಗಳಾಗಿರುವುದರಿಂದ ಸ್ಥಳ ಮಹಜರಿನಲ್ಲಿ ಗುರುತರ ಸಾಕ್ಷ್ಯಗಳಿಗಾಗಿ ಫಾರೆನ್ಸಿಕ್‌ ತಂಡವನ್ನು ಪೊಲೀಸರು ಅವಲಂಬಿಸಿದ್ದಾರೆ. ಅಫ್ತಾಬ್‌ ಕೂಡ ಕ್ಷಣಕ್ಕೊಂದು ಹೇಳಿಕೆ ನೀಡಿ, ಕೆಲವನ್ನು ಮರೆತುಬಿಟ್ಟಂತೆ ನಟಿಸಿ ಪೊಲೀಸರ ತನಿಖೆಯ ದಿಕ್ಕು ತಪ್ಪಿಸುತ್ತಿದ್ದಾನೆ.
ಎರಡು ಮೂರು ದಿನಗಳಿಂದ ಪೊಲೀಸ್‌ ಕಸ್ಟಡಿಯಲ್ಲಿರುವ ಅಫ್ತಾಬ್‌, ಹೊಟ್ಟೆ ತುಂಬಾ ಆಹಾರ ಸೇವಿಸಿ ಯಾವುದೇ ಪಶ್ಚಾತ್ತಾಪದ ಸುಳಿವೂ ಇಲ್ಲದೇ ರಾತ್ರಿ ನೆಮ್ಮದಿಯಾಗಿ ನಿದ್ರಿಸುತ್ತಿದ್ದಾನೆ ಎಂದು ಆತನ ಸಹಕೈದಿಗಳು ತಿಳಿಸಿದ್ದಾರೆ.

kiran

Recent Posts

ಪತ್ನಿಯ ಶೀಲ ಶಂಕಿಸಿ ಶೆಡ್ ನಲ್ಲಿ ಕೂಡಿಟ್ಟ ಪೊಲೀಸ್ ಪೇದೆ.

ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…

1 month ago

ಗುತ್ತಿಗೆದಾರನಿಂದ ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಗಳು.

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…

1 month ago

ಸಾಕು ತಂದೆಯಿಂದಲೇ ಭೀಕರ ಕೊಲೆಯಾದ ಇಬ್ಬರು ಹೆಣ್ಣು ಮಕ್ಕಳು.

ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…

1 month ago

ಇನ್ನು ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸುವಂತಿಲ್ಲ: ಸಿಎಂ

ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…

2 months ago

ಕಾಮ ಬಯಕೆ ಇದ್ದರೇ ‘ರೆಡ್ ಲೈಟ್ ಏರಿಯಾ’ಗೆ ಬನ್ನಿ, ಅತ್ಯಾಚಾರ ಮಾಡಬೇಡಿ: ಲೈಂಗಿಕ ಕಾರ್ಯಕರ್ತೆ

ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…

2 months ago

ಶಾಲೆಯ ಮುಂದೆ ಇಲ್ಲ ಸ್ವಚ್ಛತೆ; ರೋಗಕ್ಕೆ ಆಹ್ವಾನ ನೀಡುತ್ತಿರುವ ಪಿಡಿಒ!

ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…

2 months ago