ಶುಶೃತಿ ಸೌಹಾರ್ದ ಸಹಕಾರ ಬ್ಯಾಂಕ್ ಹೂಡಿಕೆದಾರರಿಗೆ ವಾಪಸ್ಸು ಹಣ ನೀಡದೇ ವಂಚಿಸಿದ ಆರೋಪದ ಹಿನ್ನೆಲೆಯಲ್ಲಿ ನಗರದ ಹಲವೆಡೆ ಬ್ಯಾಂಕ್ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ಶುಶೃತಿ ಬ್ಯಾಂಕ್ ಅಧ್ಯಕ್ಷ ಶ್ರೀನಿವಾಸ ಮೂರ್ತಿಯನ್ನು ಬಂಧಿಸಲಾಗಿತ್ತು. ನಂತರ ಈ ಎಲ್ಲಾ ಕೇಸ್ಗಳನ್ನು ಸಿಸಿಬಿಗೆ ವರ್ಗಾವಣೆ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಏಕಕಾಲಕ್ಕೆ ಬ್ಯಾಂಕ್ನ ಹಲವು ಶಾಖೆಗಳ ಮೇಲೆ ಸಿಸಿಬಿ ಪೊಲೀಸರಿಂದ 14 ಕಡೆಗಳಲ್ಲಿ ದಾಳಿ ನಡೆದಿದೆ.
ಬೆಂಗಳೂರಿನ ವಿಲ್ಸನ್ ಗಾರ್ಡನ್, ಪೀಣ್ಯ, ರಾಜಗೋಪಾಲನಗರ, ಚಿಕ್ಕಜಾಲ ಸೇರಿದಂತೆ ನಗರದ ಹಲವೆಡೆ ಐವರು ಎಸಿಪಿ, 14 ಇನ್ಸ್ಪೆಕ್ಟರ್ ಸೇರಿ 60ಕ್ಕೂ ಹೆಚ್ಚು ಪೊಲೀಸರ ತಂಡದಿಂದ ದಾಳಿ ನಡೆದಿದೆ.