ಚಿಂತಾಮಣಿ: ಬರ್ತಡೆ ಪಾರ್ಟಿಗೆ ಎಂದು ಯುವಕ ನನ್ನು ಕರೆಸಿಕೊಂಡು ಕಂಟಪೂರ್ತಿ ಕುಡಿಸಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ.
ದುರ್ಗೇಶ್ ಅಲಿಯಾಸ್ ಚಿನ್ನಿ ಎಂಬ ಯುವಕ ಚಿಂತಾಮಣಿಯ ಅಂಜನಿ ಬಡಾವಣೆಯ ನಿವಾಸಿಯಾಗಿರುತ್ತಾನೆ. ಹೇಮಂತ್ ಎಂಬ ಯುವಕನ ಬರ್ತಡೇ ಪಾರ್ಟಿಯನ್ನು ಚಿಂತಾಮಣಿಯ ಕಣ್ಣಂಪಲ್ಲಿ ಬಳಿ ಇರುವ ನಿರ್ಜನ ಪ್ರದೇಶದಲ್ಲಿ ಆಯೋಜಿಸಿಕೊಂಡಿರುತ್ತಾರೆ ಆ ಸ್ಥಳಕ್ಕೆ ದುರ್ಗೇಶನನ್ನು ಕರೆದೊಗಿರುತ್ತಾರೆ.
ದುರ್ಗೇಶ್ ಮತ್ತು ಹೇಮಂತನಿಗೆ ಹಳೆಯ ವೈಶ್ಯಮ್ಯವಿರುತ್ತದೆ ಆದರೂ ಸಹ ಎಲ್ಲವನ್ನು ಮರೆತು ಬರ್ತಡೇ ಪಾರ್ಟಿಗೆ ಎಂದು ಹೋಗಿರುತ್ತಾರೆ ಆ ಸಂದರ್ಭದಲ್ಲಿ ಶರತ್ ಮಧು ಮಹೇಶ್ ಸೇರಿದಂತೆ ದುರ್ಗೇಶನು ಸಹ ಕಂಠಪೂರ್ತಿ ಕುಡಿದಿರುತ್ತಾರೆ.
ಗುರಾಯಿಸುತ್ತಿದ್ದಾನೆ ಎಂಬ ವಿಚಾರಕ್ಕೆ ಸ್ನೇಹಿತರ ಮಧ್ಯೆ ಜಗಳ ಉಂಟಾಗಿದೆ ಮೊದಲೇ ಹೇಮಂತ ಮತ್ತು ದುರ್ಗೇಶನ ಮಧ್ಯೆ ಹಳೆಯ ವೈಶ್ಯಮ್ಯ ಇದ್ದ ಕಾರಣ ಇದೇ ಸಂದರ್ಭವನ್ನು ಬಳಸಿಕೊಂಡ ಬರ್ತಡೆ ಬಾಯಿ ಹೇಮಂತ ಕೇಕ್ ಕತ್ತರಿಸಲು ತಂದಿದಂತಹ ಚಾಕುವಿನಿಂದ ದುರ್ಗೇಶನ ಕತ್ತು ಕೊಯ್ದಿದ್ದಾನೆ. ಈ ಸಂದರ್ಭದಲ್ಲಿ ಜೊತೆಗಿದ್ದ ಶರತ್, ಮಧು, ಮಹೇಶ್, ಹೇಮಂತನಿಗೆ ಸಾತ್ ನೀಡಿದ್ದಾರೆ.
ಘಟನೆ ನಡೆದ ಮುಂದಿನ ದಿನ ವಿಚಾರ ಬೆಳಕೆಗೆ ಬಂದಿದೆ.
ಕೊಲೆ ಮಾಡಿರುವಂತಹ ಆರೋಪಿಗಳು ತಮಗೇನು ತಿಳಿಯದಂತೆ ಅಮಾಯಕರ ರೀತಿ ವರ್ತಿಸಿದ್ದಾರೆ.
ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇವರನ್ನು ತನಿಖೆಗೆ ಒಳಪಡಿಸಿದ ನಂತರ ಈ ಎಲ್ಲಾ ವಿಚಾರಗಳು ಹೊರಬಂದಿವೆ.
ಬರ್ತಡೆಗೆ ಎಂದು ಕರೆಸಿಕೊಂಡು ಸ್ನೇಹಿತನ ಕತ್ತು ಕೊಯ್ದ ನಾಲ್ವರು ಈಗ ಪೊಲೀಸರ ಅತಿಥಿಯಾಗಿದ್ದಾರೆ.
ನಂಜನಗೂಡು: ಬೈಕ್ ಮತ್ತು ಟಿಪ್ಪರ್ ನಡುವೆ ಡಿಕ್ಕಿಯಾಗಿ ಬೈಕ್ ಸವಾರ ಯುವಕನೊಬ್ಬ ಮೃತಪಟ್ಟಿರುವ ಘಟನೆ ನಂಜನಗೂಡು ತಾಲೂಕು ಹುಲ್ಲಹಳ್ಳಿ ಸಮೀಪ…
ನಂಜನಗೂಡು: ಅಪರಿಚಿತ ಕಾರು ಚಾಲಕನ ಅತಿ ವೇಗಕ್ಕೆ ಸಿಲುಕಿದ ಆರು ಜನರ ಪೈಕಿ ಐವರಿಗೆ ಗಂಭೀರ ಗಾಯಗಳಾಗಿದ್ದು, ಓರ್ವ ಮಹಿಳೆ…
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಯಂಕಂಚಿ ಯಿಂದ ಗೊಲಗೇರಿಗೆ ಹೋಗುವ ಮಾರ್ಗ ಮಧ್ಯದಲ್ಲಿ ರಸ್ತೆ ಅಪಘಾತದಲ್ಲಿ ಗೊಲಗೇರಿ ಗ್ರಾಮದ ಯುವಕ…
ನಂಜನಗೂಡು: ನಗರದಲ್ಲಿ ವಾಸಿಸುವ ನಗರವಾಸಿಗಳಿಗೆ ದುಬಾರಿ ವೆಚ್ಚದ ಕುಡಿಯುವ ನೀರಿನ ಬಿಲ್ಗಳನ್ನು ನೀಡಲಾಗುತ್ತಿದೆ, ಅಲ್ಲದೆ ಅನಧಿಕೃತ ಬಡಾವಣೆಗಳಿಗೆ ಎನ್ಓಸಿ ನೀಡಿ…
ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ತಾಲೂಕಿನ ಭಟ್ಕಳ ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತ ಅವರು 50,000 ಲಂಚ ಸ್ವೀಕರಿಸುತ್ತಿದ್ದ ವೇಳೆ…
ಗೌರಿಬಿದನೂರು ನಗರದ ವಿನಾಯಕ ನಗರದ ವಾಸಿ ಪದ್ಮ ಜೈನ್ (59) ಎಂಬುವವರ 50 ಗ್ರಾಂ ಮಾಂಗಲ್ಯ ಸರವನ್ನು ದ್ವಿಚಕ್ರ ವಾಹನದಲ್ಲಿ…