ಅಳ್ನಾವರ: ಸೇನಾ ಭರ್ತಿಗೆಂದು ಆಸ್ಸಾಂಗೆ ತೆರಳಿದ್ದ ಅಭ್ಯರ್ಥಿ ದರ್ಶನ ಹೃದಯಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ಅಳ್ನಾವರ ತಾಲೂಕಿನ ಅರ್ಲವಾಡ ಗ್ರಾಮದ ದರ್ಶನ ಬೀಡಕರ್ ಹೃದಯಾಘಾತದಿಂದ ಮೃತಪಟ್ಟ ಯುವಕ ಆಸ್ಸಾಂನ್ನಲ್ಲಿ ಸೇನಾ ಬರ್ತಿ ಪ್ರಾರಂಭವಾಗಿದ್ದ ಬೆನ್ನೆಲೆ ಸೇನೆಗೆ ಸೇರುವ ಉದ್ದೇಶದಿಂದ ದರ್ಶನ್ ಎಂಬ ಈ ಯುವಕ ಸೇನಾ ಬರ್ತಿಗೆಂದು ಆಸ್ಸಾಂಗೆ ತೆರಳಿದ್ದಾನೆ. ದೈಹಿಕ ಪರೀಕ್ಷೆಯ ವೇಳೆ ಅಂದರೆ ರನ್ನಿಂಗ್ ನಲ್ಲಿ ಓಡುವಾಗ ಏಕಾಏಕಿ ಎದೆ ನೋವು ಕಾಣಿಸಿಕೊಂಡಿದೆ. ಏನಾಗಿದೆ ಎಂದು ನೋಡುವಷ್ಟರಲ್ಲಿ ಹೃದಯಾಘಾತದಿಂದ ದರ್ಶನ್ ಪ್ರಾಣ ಪಕ್ಷಿ ಹಾರಿ ಹೋಗಿತ್ತು. ದರ್ಶನ್ ಪಾರ್ಥಿವ ಶರೀರವನ್ನು ನಿನ್ನೆ ತಡ ರಾತ್ರಿ ಸ್ವಗ್ರಾಮವಾದ ಅರ್ಲವಾಡಕ್ಕೆ ತರಲಾಗಿದೆ. ಮಾರ್ಗ ಮಧ್ಯೆ ಗ್ರಾಮಸ್ಥರಿಂದ ಭಾರತ್ ಮಾತಾ ಕೀ ಜೈ ದರ್ಶನ್ ಅಮರ್ ರಹೇ ಎಂಬ ಭಾವನಾತ್ಮಕ ಘೋಷಣೆಗಳು ಮೊಳಗಿದವು. ಮಗನನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತು. ವರದಿ: ಚರಂತಯ್ಯ ಹಿರೇಮಠ
ಜನರಿಗೆ ನ್ಯಾಯ ಕೊಡಿಸಬೇಕಿದ್ದ ಮಹಿಳೆಯರ ರಕ್ಷಣೆ ಮಾಡಬೇಕಿದ್ದ ಮಹಿಳೆಯರ ರಕ್ಷಣೆ ಸದಾ ಸಿದ್ದರಿರಬೇಕಾಗಿದ್ದ ಪೊಲೀಸ್ ಸಿಬ್ಬಂದಿಯೇ ತನ್ನ ಹೆಂಡತಿಯ ಶೀಲ…
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನಲ್ಲಿ ಕಾಮಗಾರಿ ಮಾಡಿದ ಬಿಲ್ ಮಾಡಿಕೊಡಲು ಗುತ್ತಿಗೆದಾರನ ಬಳಿ ಲಂಚ ಪಡೆಯುವಾಗ ಅಧಿಕಾರಿಗಳು ಲೋಕಾಯುಕ್ತ ಬಲೆಗೆ…
ಬೆಂಗಳೂರಿನ ದಾಸರಹಳ್ಳಿಯಲ್ಲಿ ಸಾಕು ತಂದೆಯೊಬ್ಬ ಇಬ್ಬರು ಹೆಣ್ಣು ಮಕ್ಕಳನ್ನು ಕೊಲೆ ಮಾಡಿ ತಲೆಮೆರೆಸಿಕೊಂಡ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಈ ಭೀಕರ…
ಕೃಷಿಕರಲ್ಲದವರಿಗೆ ಇನ್ನೂ ಕೃಷಿ ಭೂಮಿ ಸಿಗುವುದಿಲ್ಲ. ಬಿಜೆಪಿ ತಂದಿದ್ದ ಭೂ ಕಾಯ್ದೆ ವಾಪಸ್ ಪಡೆಯುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ವಿಧಾನಸೌಧದಲ್ಲಿ…
ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ…
ಬಾಗಲಕೋಟೆ ಜಿಲ್ಲೆಯ ಬಾಗಲಕೋಟೆ ತಾಲ್ಲೂಕಿನ ಬಿಲಕೆರೂರ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸರಕಾರಿ ಕನ್ನಡ ಹಿರಿಯ ಪ್ರಾಥಮಿಕ ಶಾಲೆ ಬಿಲಕೆರೂರ…